<p><strong>ಚನ್ನರಾಯಪಟ್ಟಣ:</strong> ಸಹಕಾರಿ ಕ್ಷೇತ್ರದಿಂದ ದೇಶದ ಪ್ರಗತಿ ಸಾಧ್ಯ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.</p>.<p>ಪಟ್ಟಣದಲ್ಲಿ ಶುಕ್ರವಾರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್) ಆವರಣದಲ್ಲಿ ₹5.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಶುದ್ದ ಕುಡಿಯುವ ನೀರು ಘಟಕದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಟಿಎಪಿಸಿಎಂಎಸ್ ಆವರಣದಲ್ಲಿ ₹15 ಲಕ್ಷ ವೆಚ್ಚದಲ್ಲಿ ನೆಲಹಾಸು ಅಳವಡಿಸಲಾಗಿದೆ. ಅದೇ ರೀತಿ ಶೌಚಾಲಯ ನಿರ್ಮಿಸಲಾಗಿದೆ. ಗೊಬ್ಬರ ಮಾರಾಟ ಕೇಂದ್ರ ತೆರೆಯಲಾಗಿದೆ. ಎಟಿಎಂ ಕೇಂದ್ರ ಆರಂಭಿಸಲಾಗಿದೆ. 5 ರೂಪಾಯಿ ನಾಣ್ಯ ಅಥವಾ ಮೊಬೈಲ್ ಸ್ಕ್ಯಾನರ್ ಮೂಲಕ 20 ಲೀಟರ್ ನೀರು ಸಂಗ್ರಹಿಸಬಹುದು. ಜನರ ಆರೋಗ್ಯದ ದೃಷ್ಟಿಯಿಂದ ಪಟ್ಟಣದ ಹಲವು ಕಡೆ ಶುದ್ಧ ಕುಡಿಯುವ ನೀರು ಘಟಕ ಆರಂಭಿಸಲಾಗಿದೆ’ ಎಂದರು.</p>.<p>‘ತಾಲ್ಲೂಕಿನಲ್ಲಿರುವ ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆಯ ಬಳಿ ಗೊಬ್ಬರ ಮಾರಾಟ ಉಪಕೇಂದ್ರವನ್ನು ಆರಂಭಿಸಲಾಗಿದೆ. ತಾಲ್ಲೂಕಿನಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಮೂಲ ಸೌಕರ್ಯ ಒದಗಿಸಲು ರಾಜ್ಯಸಹಕಾರ ಮಹಾಮಂಡಳದ ವತಿಯಿಂದ ₹1 ಕೋಟಿ ಅನುದಾನವನ್ನು ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಸಿ.ಎನ್. ಪುಟಸ್ವಾಮಿಗೌಡ ಅನುದಾನ ಕೊಡಿಸಿದ್ದಾರೆ’ ಎಂದು ಹೇಳಿದರು.</p>.<p>ಟಿಎಪಿಸಿಎಂಎಸ್ ಅಧ್ಯಕ್ಷ ಎಚ್.ಆರ್.ವೆಂಕಟೇಶ್ ಮಾತನಾಡಿದರು. ಉಪಾಧ್ಯಕ್ಷೆ ತಾರಾಮಣಿ, ನಿರ್ದೇಶಕರಾದ ಕೆ.ಎನ್.ನಾಗರಾಜು, ರಮೇಶ್ ಕಂಬಾರಹಳ್ಳಿ, ಟಿ.ಎನ್.ನಂಜುಂಡೇಗೌಡ, ಮಮತಾ, ನಾಗರಾಜು, ಕೆ.ಆರ್.ರವಿಕುಮಾರ್, ಪಿ.ಉಮೇಶ್, ಎಂ.ಆರ್.ಅನಿಲ್ಕುಮಾರ್, ಸಹಕಾರ ಅಭಿವೃದ್ಧಿ ಅಧಿಕಾರಿ ಬಿ.ಕೆವಿಜಯೇಂದ್ರ ಭಾಗವಹಿಸಿದ್ದರು.</p>.<p>ಟಿಎಪಿಸಿಎಂಎಸ್ ಆವರಣದಲ್ಲಿ ಉಚಿತವಾಗಿ ಕೊಳವೆಬಾವಿ ಕೊರೆಸಿರುವ ಜಯಣ್ಣ ಅವರನ್ನು ಸನ್ಮಾನಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-36-2009659466</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನರಾಯಪಟ್ಟಣ:</strong> ಸಹಕಾರಿ ಕ್ಷೇತ್ರದಿಂದ ದೇಶದ ಪ್ರಗತಿ ಸಾಧ್ಯ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.</p>.<p>ಪಟ್ಟಣದಲ್ಲಿ ಶುಕ್ರವಾರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್) ಆವರಣದಲ್ಲಿ ₹5.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಶುದ್ದ ಕುಡಿಯುವ ನೀರು ಘಟಕದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಟಿಎಪಿಸಿಎಂಎಸ್ ಆವರಣದಲ್ಲಿ ₹15 ಲಕ್ಷ ವೆಚ್ಚದಲ್ಲಿ ನೆಲಹಾಸು ಅಳವಡಿಸಲಾಗಿದೆ. ಅದೇ ರೀತಿ ಶೌಚಾಲಯ ನಿರ್ಮಿಸಲಾಗಿದೆ. ಗೊಬ್ಬರ ಮಾರಾಟ ಕೇಂದ್ರ ತೆರೆಯಲಾಗಿದೆ. ಎಟಿಎಂ ಕೇಂದ್ರ ಆರಂಭಿಸಲಾಗಿದೆ. 5 ರೂಪಾಯಿ ನಾಣ್ಯ ಅಥವಾ ಮೊಬೈಲ್ ಸ್ಕ್ಯಾನರ್ ಮೂಲಕ 20 ಲೀಟರ್ ನೀರು ಸಂಗ್ರಹಿಸಬಹುದು. ಜನರ ಆರೋಗ್ಯದ ದೃಷ್ಟಿಯಿಂದ ಪಟ್ಟಣದ ಹಲವು ಕಡೆ ಶುದ್ಧ ಕುಡಿಯುವ ನೀರು ಘಟಕ ಆರಂಭಿಸಲಾಗಿದೆ’ ಎಂದರು.</p>.<p>‘ತಾಲ್ಲೂಕಿನಲ್ಲಿರುವ ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆಯ ಬಳಿ ಗೊಬ್ಬರ ಮಾರಾಟ ಉಪಕೇಂದ್ರವನ್ನು ಆರಂಭಿಸಲಾಗಿದೆ. ತಾಲ್ಲೂಕಿನಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಮೂಲ ಸೌಕರ್ಯ ಒದಗಿಸಲು ರಾಜ್ಯಸಹಕಾರ ಮಹಾಮಂಡಳದ ವತಿಯಿಂದ ₹1 ಕೋಟಿ ಅನುದಾನವನ್ನು ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಸಿ.ಎನ್. ಪುಟಸ್ವಾಮಿಗೌಡ ಅನುದಾನ ಕೊಡಿಸಿದ್ದಾರೆ’ ಎಂದು ಹೇಳಿದರು.</p>.<p>ಟಿಎಪಿಸಿಎಂಎಸ್ ಅಧ್ಯಕ್ಷ ಎಚ್.ಆರ್.ವೆಂಕಟೇಶ್ ಮಾತನಾಡಿದರು. ಉಪಾಧ್ಯಕ್ಷೆ ತಾರಾಮಣಿ, ನಿರ್ದೇಶಕರಾದ ಕೆ.ಎನ್.ನಾಗರಾಜು, ರಮೇಶ್ ಕಂಬಾರಹಳ್ಳಿ, ಟಿ.ಎನ್.ನಂಜುಂಡೇಗೌಡ, ಮಮತಾ, ನಾಗರಾಜು, ಕೆ.ಆರ್.ರವಿಕುಮಾರ್, ಪಿ.ಉಮೇಶ್, ಎಂ.ಆರ್.ಅನಿಲ್ಕುಮಾರ್, ಸಹಕಾರ ಅಭಿವೃದ್ಧಿ ಅಧಿಕಾರಿ ಬಿ.ಕೆವಿಜಯೇಂದ್ರ ಭಾಗವಹಿಸಿದ್ದರು.</p>.<p>ಟಿಎಪಿಸಿಎಂಎಸ್ ಆವರಣದಲ್ಲಿ ಉಚಿತವಾಗಿ ಕೊಳವೆಬಾವಿ ಕೊರೆಸಿರುವ ಜಯಣ್ಣ ಅವರನ್ನು ಸನ್ಮಾನಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-36-2009659466</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>