<p><strong>ಚನ್ನರಾಯಪಟ್ಟಣ:</strong> ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳು ಈಡೇರಬೇಕಾದರೆ ನೌಕರರು ಸಂಘಟಿತರಾಗಬೇಕು ಎಂದು ಗ್ರಾಮ ಪಂಚಾಯಿತಿ ನೌಕರಸಂಘದ ರಾಜ್ಯ ಉಪಾದ್ಯಕ್ಷ ಜೆ. ರಾಮಕೃಷ್ಣ ಹೇಳಿದರು.</p>.<p>ಪಟ್ಟಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ತಾಲ್ಲೂಕು ಗ್ರಾಮ ಪಂಚಾಯಿತಿ ನೌಕರರ ತಾಲ್ಲೂಕು ಸಮ್ಮೇಳನದಲ್ಲಿ ಮಾತನಾಡಿದ ಅವರು, ‘ಕನಿಷ್ಠ ವೇತನ ನೀಡುವ ಕುರಿತು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಸವಲತ್ತು ನೀಡಲಾಗುವುದು ಎಂದು ಸರ್ಕಾರ ತಿಳಿಸಿದರೆ, ಮತ್ತೊಂದು ಕಡೆ ಕಾರ್ಮಿಕ ಇಲಾಖೆ ಇವುಗಳ ಕಾನೂನು ಪರಿಶೀಲನೆ ನಡೆಸಬೇಕು ಎಂದು ಸರ್ಕಾರಕ್ಕೆ ಪತ್ರ ಬರೆದಿದೆ. ಈ ರೀತಿಯಾದಲ್ಲಿ ಬೇಡಿಕೆ ಈಡೇರಲು ಸಾದ್ಯವೆ’ ಎಂದು ಪ್ರಶ್ನಿಸಿದರು.</p>.<p>‘ಅಸಮರ್ಪಕ ಆರ್ಥಿಕ ನೀತಿಗಳಿಂದ ಆರ್ಥಿಕ ಅಸಮಾನತೆ ಉಂಟಾಗುತ್ತದೆ. ನೌಕರರ ವೇತನ ಹೆಚ್ಚಳವಾಗದಿರುವುದಕ್ಕೆ ಸರ್ಕಾರದ ನೀತಿ ಕಾರಣ. ನೌಕರರ ನ್ಯಾಯಬದ್ದ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಹಲವು ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ. ನೌಕರರ ಮನವಿಗೆ ಪುರಸ್ಕಾರ ದೊರಕಬೇಕು’ ಎಂದು ದೂರಿದರು.</p>.<p>ಗ್ರಾಮ ಪಂಚಾಯಿತಿ ನೌಕರ ಸಂಘದ ಜಿಲ್ಲಾ ಗಟಕದ ಅಧ್ಯಕ್ಷ ಧರ್ಮೇಶ್ ಮಾತನಾಡಿ, ‘ತಾಲ್ಲೂಕಿನಲ್ಲಿ ಹಲವು ಗ್ರಾಮ ಪಂಚಾಯಿತಿಗಳಲ್ಲಿ ನೌಕರರ ಬಾಕಿ ವೇತನ ಪಾವತಿಸಿಲ್ಲ. ಗ್ರಾಚ್ಯುಯಿಟಿ ಸೌಲಭ್ಯ ದೊರಕುತ್ತಿಲ್ಲ. ಈ ಹಿಂದೆ ಭರವಸೆ ನೀಡಿದಂತೆ ಬಾಕಿ ವೇತನ ಪಾವತಿಸಲು ಕ್ರಮ ತೆಗೆದುಕೊಳ್ಳಬೇಕು. ಗ್ರಾಮ ಪಂಚಾಯಿತಿ ನೌಕರ ಸಮಸ್ಯೆಗಳನ್ನು ಚರ್ಚಿಸಿ ಅವುಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ಜಿ.ಆರ್. ಹರೀಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷ ಪಿ.ಡಿ. ಕೃಷ್ಣೇಗೌಡ ಮಾತನಾಡಿದರು. ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಎಚ್.ಅರ್. ನವೀನ್ ಕುಮಾರ್, ತಾಲ್ಲೂಕು ಕಾರ್ಯದರ್ಶಿ ಟಿ.ಎಸ್. ಚಂದ್ರೇಗೌಡ, ತಾಲ್ಲೂಕು ಗೌರವಾದ್ಯಕ್ಷ ಜೆ.ಎನ್. ಚಂದ್ರೇಗೌಡ ಭಾಗವಹಿಸಿದ್ದರು. ಇದಕ್ಕೂ ಮೊದಲು ಪಟ್ಟಣದಲ್ಲಿ ಮೆರವಣಿಗೆ ನಡೆಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನರಾಯಪಟ್ಟಣ:</strong> ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳು ಈಡೇರಬೇಕಾದರೆ ನೌಕರರು ಸಂಘಟಿತರಾಗಬೇಕು ಎಂದು ಗ್ರಾಮ ಪಂಚಾಯಿತಿ ನೌಕರಸಂಘದ ರಾಜ್ಯ ಉಪಾದ್ಯಕ್ಷ ಜೆ. ರಾಮಕೃಷ್ಣ ಹೇಳಿದರು.</p>.<p>ಪಟ್ಟಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ತಾಲ್ಲೂಕು ಗ್ರಾಮ ಪಂಚಾಯಿತಿ ನೌಕರರ ತಾಲ್ಲೂಕು ಸಮ್ಮೇಳನದಲ್ಲಿ ಮಾತನಾಡಿದ ಅವರು, ‘ಕನಿಷ್ಠ ವೇತನ ನೀಡುವ ಕುರಿತು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಸವಲತ್ತು ನೀಡಲಾಗುವುದು ಎಂದು ಸರ್ಕಾರ ತಿಳಿಸಿದರೆ, ಮತ್ತೊಂದು ಕಡೆ ಕಾರ್ಮಿಕ ಇಲಾಖೆ ಇವುಗಳ ಕಾನೂನು ಪರಿಶೀಲನೆ ನಡೆಸಬೇಕು ಎಂದು ಸರ್ಕಾರಕ್ಕೆ ಪತ್ರ ಬರೆದಿದೆ. ಈ ರೀತಿಯಾದಲ್ಲಿ ಬೇಡಿಕೆ ಈಡೇರಲು ಸಾದ್ಯವೆ’ ಎಂದು ಪ್ರಶ್ನಿಸಿದರು.</p>.<p>‘ಅಸಮರ್ಪಕ ಆರ್ಥಿಕ ನೀತಿಗಳಿಂದ ಆರ್ಥಿಕ ಅಸಮಾನತೆ ಉಂಟಾಗುತ್ತದೆ. ನೌಕರರ ವೇತನ ಹೆಚ್ಚಳವಾಗದಿರುವುದಕ್ಕೆ ಸರ್ಕಾರದ ನೀತಿ ಕಾರಣ. ನೌಕರರ ನ್ಯಾಯಬದ್ದ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಹಲವು ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ. ನೌಕರರ ಮನವಿಗೆ ಪುರಸ್ಕಾರ ದೊರಕಬೇಕು’ ಎಂದು ದೂರಿದರು.</p>.<p>ಗ್ರಾಮ ಪಂಚಾಯಿತಿ ನೌಕರ ಸಂಘದ ಜಿಲ್ಲಾ ಗಟಕದ ಅಧ್ಯಕ್ಷ ಧರ್ಮೇಶ್ ಮಾತನಾಡಿ, ‘ತಾಲ್ಲೂಕಿನಲ್ಲಿ ಹಲವು ಗ್ರಾಮ ಪಂಚಾಯಿತಿಗಳಲ್ಲಿ ನೌಕರರ ಬಾಕಿ ವೇತನ ಪಾವತಿಸಿಲ್ಲ. ಗ್ರಾಚ್ಯುಯಿಟಿ ಸೌಲಭ್ಯ ದೊರಕುತ್ತಿಲ್ಲ. ಈ ಹಿಂದೆ ಭರವಸೆ ನೀಡಿದಂತೆ ಬಾಕಿ ವೇತನ ಪಾವತಿಸಲು ಕ್ರಮ ತೆಗೆದುಕೊಳ್ಳಬೇಕು. ಗ್ರಾಮ ಪಂಚಾಯಿತಿ ನೌಕರ ಸಮಸ್ಯೆಗಳನ್ನು ಚರ್ಚಿಸಿ ಅವುಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ಜಿ.ಆರ್. ಹರೀಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷ ಪಿ.ಡಿ. ಕೃಷ್ಣೇಗೌಡ ಮಾತನಾಡಿದರು. ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಎಚ್.ಅರ್. ನವೀನ್ ಕುಮಾರ್, ತಾಲ್ಲೂಕು ಕಾರ್ಯದರ್ಶಿ ಟಿ.ಎಸ್. ಚಂದ್ರೇಗೌಡ, ತಾಲ್ಲೂಕು ಗೌರವಾದ್ಯಕ್ಷ ಜೆ.ಎನ್. ಚಂದ್ರೇಗೌಡ ಭಾಗವಹಿಸಿದ್ದರು. ಇದಕ್ಕೂ ಮೊದಲು ಪಟ್ಟಣದಲ್ಲಿ ಮೆರವಣಿಗೆ ನಡೆಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>