<p>ಚನ್ನರಾಯಪಟ್ಟಣ: ಪ್ರಯಾಣದ ಮಧ್ಯೆ ಬಸ್ನಲ್ಲಿ ಮರೆತು ಹೋಗಿದ್ದ ₹67.5 ಸಾವಿರ ನಗದು ಹಾಗೂ ಚನ್ನರಾಯಪಟ್ಟಣದ ವರ್ತಕರು ಸಹಿ ಮಾಡಿ ನೀಡಿದ ₹1.10 ಲಕ್ಷ ಮೊತ್ತದ ಚೆಕ್ ಇದ್ದ ಬ್ಯಾಗ್ನ್ನು ಮಾಲೀಕರಿಗೆ ಹಿಂತಿರುಗಿಸುವ ಮೂಲಕ ಚಾಲಕ ಮತ್ತು ನಿರ್ವಾಹಕರು ಪ್ರಾಮಾಣಿಕತೆ ಮೆರೆದಿದ್ದಾರೆ.</p>.<p>ಚನ್ನರಾಯಪಟ್ಟಣದಿಂದ ಹಾಸನಕ್ಕೆ ಪ್ರಯಾಣಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ತಾಂತ್ರಿಕ ಸಮಸ್ಯೆಯಿಂದ ದುರಸ್ತಿಗಾಗಿ ಘಟಕಕ್ಕೆ ವಾಪಸ್ ತರಲಾಗುತ್ತಿತ್ತು. ಪ್ರಯಾಣಿಕರನ್ನು ಬೇರೆ ಬಸ್ನಲ್ಲಿ ಕಳಿಸಲಾಯಿತು. ಈ ವೇಳೆ ಬಸ್ನಲ್ಲಿದ್ದ ಕಪಿಲ್ ಶರ್ಮಾ ಮತ್ತು ಬಾಲಕಿಶನ್ ಶರ್ಮ ₹67.5 ಸಾವಿರ ನಗದು ಸಹಿ ಮಾಡಿದ ಚೆಕ್ ಇರುವ ಬ್ಯಾಗ್ ಬಿಟ್ಟು ಇಳಿದಿದ್ದರು.</p>.<p>ಬಸ್ ದುರಸ್ತಿಗಾಗಿ ಚನ್ನರಾಯಪಟ್ಟಣ ಘಟಕಕ್ಕೆ ಬಂದಾಗ, ಬ್ಯಾಗ್ ಇರುವುದು ನಿರ್ವಾಹಕ ಜಗದೀಶ ಮತ್ತು ಚಾಲಕ ಎನ್.ಸಿ.ಕೃಷ್ಣೇಗೌಡರ ಗಮನಿಸಿದ್ದು, ಬ್ಯಾಗ್ ಪರಿಶೀಲಿಸಿದ್ದಾರೆ. ಸಹಿ ಮಾಡಿದ ಚೆಕ್ಕು ಹಾಗೂ ನಗದು ಇರುವುದನ್ನು ಗಮನಿಸಿದ ಇಬ್ಬರೂ ಕೂಡಲೇ ಘಟಕ ವ್ಯವಸ್ಥಾಪಕರಿಗೆ ವಿಷಯ ತಿಳಿಸಿದರು.</p>.<p>ಘಟಕ ವ್ಯವಸ್ಥಾಪಕ ಜ್ಞಾನೇಶ್, ಬ್ಯಾಗ್ ಪರಿಶೀಲಿಸಿ ಆಧಾರ್ ಕಾರ್ಡ್ ನಿಂದ ದೂರವಾಣಿ ಸಂಖ್ಯೆಯನ್ನು ಪತ್ತೆ ಹಚ್ಚಿ ಮಾಲೀಕರನ್ನು ಸಂಪರ್ಕಿಸಿದ್ದಾರೆ. ಬ್ಯಾಗ್ ಕಳೆದುಕೊಂಡು ಗಾಬರಿಯಲ್ಲಿದ್ದ ಕಪಿಲ್ ಶರ್ಮಾ ಮತ್ತು ಬಾಲಕಿಶನ್ ಶರ್ಮ, ಚನ್ನರಾಯಪಟ್ಟಣ ಘಟಕವನ್ನು ಸಂಪರ್ಕಿಸಿದ್ದಾರೆ.</p>.<p>ಘಟಕ ವ್ಯವಸ್ಥಾಪಕರು ಹಾಗೂ ಭದ್ರತಾ ಸಿಬ್ಬಂದಿ, ಕಪಿಲ್ ಶರ್ಮಾ ಮತ್ತು ಬಾಲಕಿಶನ್ ಶರ್ಮ ಅವರ ವಿಳಾಸ ದಾಖಲೆಗಳನ್ನು ಖಚಿತ ಪಡಿಸಿಕೊಂಡು ಬ್ಯಾಗ್ ಹಿಂತಿರುಗಿಸಿದ್ದಾರೆ. ಪ್ರಾಮಾಣಿಕತೆ ಮೆರೆದ ನಿರ್ವಾಹಕ ಮತ್ತು ಚಾಲಕರ ಕಾರ್ಯಕ್ಕೆ ಸಂಸ್ಥೆಯ ಅಧಿಕಾರಿಗಳು, ಸಿಬ್ಬಂದಿ, ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-36-59662154</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನರಾಯಪಟ್ಟಣ: ಪ್ರಯಾಣದ ಮಧ್ಯೆ ಬಸ್ನಲ್ಲಿ ಮರೆತು ಹೋಗಿದ್ದ ₹67.5 ಸಾವಿರ ನಗದು ಹಾಗೂ ಚನ್ನರಾಯಪಟ್ಟಣದ ವರ್ತಕರು ಸಹಿ ಮಾಡಿ ನೀಡಿದ ₹1.10 ಲಕ್ಷ ಮೊತ್ತದ ಚೆಕ್ ಇದ್ದ ಬ್ಯಾಗ್ನ್ನು ಮಾಲೀಕರಿಗೆ ಹಿಂತಿರುಗಿಸುವ ಮೂಲಕ ಚಾಲಕ ಮತ್ತು ನಿರ್ವಾಹಕರು ಪ್ರಾಮಾಣಿಕತೆ ಮೆರೆದಿದ್ದಾರೆ.</p>.<p>ಚನ್ನರಾಯಪಟ್ಟಣದಿಂದ ಹಾಸನಕ್ಕೆ ಪ್ರಯಾಣಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ತಾಂತ್ರಿಕ ಸಮಸ್ಯೆಯಿಂದ ದುರಸ್ತಿಗಾಗಿ ಘಟಕಕ್ಕೆ ವಾಪಸ್ ತರಲಾಗುತ್ತಿತ್ತು. ಪ್ರಯಾಣಿಕರನ್ನು ಬೇರೆ ಬಸ್ನಲ್ಲಿ ಕಳಿಸಲಾಯಿತು. ಈ ವೇಳೆ ಬಸ್ನಲ್ಲಿದ್ದ ಕಪಿಲ್ ಶರ್ಮಾ ಮತ್ತು ಬಾಲಕಿಶನ್ ಶರ್ಮ ₹67.5 ಸಾವಿರ ನಗದು ಸಹಿ ಮಾಡಿದ ಚೆಕ್ ಇರುವ ಬ್ಯಾಗ್ ಬಿಟ್ಟು ಇಳಿದಿದ್ದರು.</p>.<p>ಬಸ್ ದುರಸ್ತಿಗಾಗಿ ಚನ್ನರಾಯಪಟ್ಟಣ ಘಟಕಕ್ಕೆ ಬಂದಾಗ, ಬ್ಯಾಗ್ ಇರುವುದು ನಿರ್ವಾಹಕ ಜಗದೀಶ ಮತ್ತು ಚಾಲಕ ಎನ್.ಸಿ.ಕೃಷ್ಣೇಗೌಡರ ಗಮನಿಸಿದ್ದು, ಬ್ಯಾಗ್ ಪರಿಶೀಲಿಸಿದ್ದಾರೆ. ಸಹಿ ಮಾಡಿದ ಚೆಕ್ಕು ಹಾಗೂ ನಗದು ಇರುವುದನ್ನು ಗಮನಿಸಿದ ಇಬ್ಬರೂ ಕೂಡಲೇ ಘಟಕ ವ್ಯವಸ್ಥಾಪಕರಿಗೆ ವಿಷಯ ತಿಳಿಸಿದರು.</p>.<p>ಘಟಕ ವ್ಯವಸ್ಥಾಪಕ ಜ್ಞಾನೇಶ್, ಬ್ಯಾಗ್ ಪರಿಶೀಲಿಸಿ ಆಧಾರ್ ಕಾರ್ಡ್ ನಿಂದ ದೂರವಾಣಿ ಸಂಖ್ಯೆಯನ್ನು ಪತ್ತೆ ಹಚ್ಚಿ ಮಾಲೀಕರನ್ನು ಸಂಪರ್ಕಿಸಿದ್ದಾರೆ. ಬ್ಯಾಗ್ ಕಳೆದುಕೊಂಡು ಗಾಬರಿಯಲ್ಲಿದ್ದ ಕಪಿಲ್ ಶರ್ಮಾ ಮತ್ತು ಬಾಲಕಿಶನ್ ಶರ್ಮ, ಚನ್ನರಾಯಪಟ್ಟಣ ಘಟಕವನ್ನು ಸಂಪರ್ಕಿಸಿದ್ದಾರೆ.</p>.<p>ಘಟಕ ವ್ಯವಸ್ಥಾಪಕರು ಹಾಗೂ ಭದ್ರತಾ ಸಿಬ್ಬಂದಿ, ಕಪಿಲ್ ಶರ್ಮಾ ಮತ್ತು ಬಾಲಕಿಶನ್ ಶರ್ಮ ಅವರ ವಿಳಾಸ ದಾಖಲೆಗಳನ್ನು ಖಚಿತ ಪಡಿಸಿಕೊಂಡು ಬ್ಯಾಗ್ ಹಿಂತಿರುಗಿಸಿದ್ದಾರೆ. ಪ್ರಾಮಾಣಿಕತೆ ಮೆರೆದ ನಿರ್ವಾಹಕ ಮತ್ತು ಚಾಲಕರ ಕಾರ್ಯಕ್ಕೆ ಸಂಸ್ಥೆಯ ಅಧಿಕಾರಿಗಳು, ಸಿಬ್ಬಂದಿ, ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-36-59662154</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>