<p>ಚನ್ನರಾಯಪಟ್ಟಣ: ಗೃಹಬಳಕೆ ಅನಿಲದ ವಿತರಣೆಯಲ್ಲಿ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು.</p>.<p>ತಾಲ್ಲೂಕು ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಅಡುಗೆ ಅನಿಲ ವಿತರಕರ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.</p>.<p>ಮಧ್ಯಪ್ರಾಚ್ಯ ದೇಶಗಳ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ ಪೂರೈಕೆ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ಉಂಟಾಗಿದ್ದು, ಇದನ್ನು ನಿವಾರಿಸಬೇಕು. ಈ ನಿಟ್ಟಿನಲ್ಲಿ ಯಾರೂ ಆತಂಕಕ್ಕೆ ಒಳಗಾಗದಂತೆ ಗೃಹ ಬಳಕೆ ಅಡುಗೆ ಅನಿಲವನ್ನು ಪೂರೈಸಬೇಕು. ಜನರು ವದಂತಿಗಳಿಗೆ ಕಿವಿಗೊಡಬಾರದು. ಅವಸರ ಪಡದೆ ಸಹಕಾರ ನೀಡಬೇಕು. ತಾಲ್ಲೂಕಿನಲ್ಲಿ ಎಲ್ಪಿಜಿ ಸಿಲಿಂಡರ್ಗಳ ಕೊರತೆಯಿಲ್ಲ ಎಂದರು.</p>.<p>ಗೃಹ ಬಳಕೆ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಗಮನಹರಿಸುವುದು ಅತ್ಯಗತ್ಯ. ಎಲ್ಪಿಜಿವಿತರಕರು ದಾಸ್ತಾನು ಕೊರತೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಬೇಕು. ಇಕೆವೈಸಿ ಆಗದೇ ಇರುವ ಗ್ರಾಹಕರಿಗೆ ತಕ್ಷಣವೇ ಇಕೆವೈಸಿ ಮಾಡಿಸಿಕೊಂಡು ಸಿಲಿಂಡರ್ ಸರಬರಾಜು ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಸಿಲಿಂಡರ್ ಪೂರೈಕೆಯಲ್ಲಿ ಕೃತಕಅಭಾವ ಸೃಷ್ಟಿಸಬಾರದು. ಗ್ರಾಹಕರಿಂದ ಹೆಚ್ಚಿನ ಹಣ ವಸೂಲಿ ಮಾಡುವಂತಿಲ್ಲ. ಗೃಹ ಬಳಕೆ ಸಿಲಿಂಡರ್ಗಳನ್ನು ಅನಧಿಕೃತವಾಗಿ ವಾಣಿಜ್ಯ ಉದ್ದೇಶಕ್ಕೆ ವಿತರಿಸಬಾರದು. ವಿತರಣೆ, ದಾಸ್ತಾನುಗಳ ವಿವರಗಳನ್ನು ಪ್ರತಿದಿನ ತಾಲ್ಲೂಕು ಆಡಳಿತಕ್ಕೆ ಸಲ್ಲಿಸಬೇಕು ಎಂದು ಸೂಚಿಸಿದರು.</p>.<p>ಸಿಲಿಂಡರ್ ವಿತರಣೆಯಲ್ಲಿ ಆಸ್ಪತ್ರೆ, ಶಾಲಾ-ಕಾಲೇಜು, ಅಂಗನವಾಡಿ, ವಿದ್ಯಾರ್ಥಿನಿಲಯ, ಇಂದಿರಾ ಕ್ಯಾಂಟೀನ್ಗಳಿಗೆ ಆದ್ಯತೆ ನೀಡಬೇಕು. ಗೃಹ ಬಳಕೆ ಅಡುಗೆ ಅನಿಲ ಪೂರೈಕೆ ಸಂಬಂಧ ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾಳಜಿ ವಹಿಸಬೇಕು ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಜಿ.ಎಸ್. ಶಂಕರಪ್ಪ ಮಾತನಾಡಿದರು. ಡಿವೈಎಸ್ಪಿ ಕುಮಾರ್, ಪುರಸಭಾ ಮುಖ್ಯಾಧಿಕಾರಿ ಆರ್. ಯತೀಶ್ ಕುಮಾರ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಶಿರಸ್ತೆದಾರ್ ಹೇಮಂತ್ ಕುಮಾರ್ ಹಾಗೂ ಪ್ರತಿನಿಧಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-36-1639092063</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನರಾಯಪಟ್ಟಣ: ಗೃಹಬಳಕೆ ಅನಿಲದ ವಿತರಣೆಯಲ್ಲಿ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು.</p>.<p>ತಾಲ್ಲೂಕು ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಅಡುಗೆ ಅನಿಲ ವಿತರಕರ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.</p>.<p>ಮಧ್ಯಪ್ರಾಚ್ಯ ದೇಶಗಳ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ ಪೂರೈಕೆ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ಉಂಟಾಗಿದ್ದು, ಇದನ್ನು ನಿವಾರಿಸಬೇಕು. ಈ ನಿಟ್ಟಿನಲ್ಲಿ ಯಾರೂ ಆತಂಕಕ್ಕೆ ಒಳಗಾಗದಂತೆ ಗೃಹ ಬಳಕೆ ಅಡುಗೆ ಅನಿಲವನ್ನು ಪೂರೈಸಬೇಕು. ಜನರು ವದಂತಿಗಳಿಗೆ ಕಿವಿಗೊಡಬಾರದು. ಅವಸರ ಪಡದೆ ಸಹಕಾರ ನೀಡಬೇಕು. ತಾಲ್ಲೂಕಿನಲ್ಲಿ ಎಲ್ಪಿಜಿ ಸಿಲಿಂಡರ್ಗಳ ಕೊರತೆಯಿಲ್ಲ ಎಂದರು.</p>.<p>ಗೃಹ ಬಳಕೆ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಗಮನಹರಿಸುವುದು ಅತ್ಯಗತ್ಯ. ಎಲ್ಪಿಜಿವಿತರಕರು ದಾಸ್ತಾನು ಕೊರತೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಬೇಕು. ಇಕೆವೈಸಿ ಆಗದೇ ಇರುವ ಗ್ರಾಹಕರಿಗೆ ತಕ್ಷಣವೇ ಇಕೆವೈಸಿ ಮಾಡಿಸಿಕೊಂಡು ಸಿಲಿಂಡರ್ ಸರಬರಾಜು ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಸಿಲಿಂಡರ್ ಪೂರೈಕೆಯಲ್ಲಿ ಕೃತಕಅಭಾವ ಸೃಷ್ಟಿಸಬಾರದು. ಗ್ರಾಹಕರಿಂದ ಹೆಚ್ಚಿನ ಹಣ ವಸೂಲಿ ಮಾಡುವಂತಿಲ್ಲ. ಗೃಹ ಬಳಕೆ ಸಿಲಿಂಡರ್ಗಳನ್ನು ಅನಧಿಕೃತವಾಗಿ ವಾಣಿಜ್ಯ ಉದ್ದೇಶಕ್ಕೆ ವಿತರಿಸಬಾರದು. ವಿತರಣೆ, ದಾಸ್ತಾನುಗಳ ವಿವರಗಳನ್ನು ಪ್ರತಿದಿನ ತಾಲ್ಲೂಕು ಆಡಳಿತಕ್ಕೆ ಸಲ್ಲಿಸಬೇಕು ಎಂದು ಸೂಚಿಸಿದರು.</p>.<p>ಸಿಲಿಂಡರ್ ವಿತರಣೆಯಲ್ಲಿ ಆಸ್ಪತ್ರೆ, ಶಾಲಾ-ಕಾಲೇಜು, ಅಂಗನವಾಡಿ, ವಿದ್ಯಾರ್ಥಿನಿಲಯ, ಇಂದಿರಾ ಕ್ಯಾಂಟೀನ್ಗಳಿಗೆ ಆದ್ಯತೆ ನೀಡಬೇಕು. ಗೃಹ ಬಳಕೆ ಅಡುಗೆ ಅನಿಲ ಪೂರೈಕೆ ಸಂಬಂಧ ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾಳಜಿ ವಹಿಸಬೇಕು ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಜಿ.ಎಸ್. ಶಂಕರಪ್ಪ ಮಾತನಾಡಿದರು. ಡಿವೈಎಸ್ಪಿ ಕುಮಾರ್, ಪುರಸಭಾ ಮುಖ್ಯಾಧಿಕಾರಿ ಆರ್. ಯತೀಶ್ ಕುಮಾರ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಶಿರಸ್ತೆದಾರ್ ಹೇಮಂತ್ ಕುಮಾರ್ ಹಾಗೂ ಪ್ರತಿನಿಧಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-36-1639092063</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>