<p><strong>ಚನ್ನರಾಯಪಟ್ಟಣ:</strong> ವೈಜ್ಞಾನಿಕ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಸಿಐಟಿಯು ತಾಲ್ಲೂಕು ಸಮಿತಿಯಿಂದ ಬುಧವಾರ ತಾಲ್ಲೂಕು ಕಚೇರಿ ಎದುರು ಸಾರ್ವಜನಿಕರಿಂದ ಸಾಮೂಹಿಕ ಸಹಿ ಸಂಗ್ರಹ ಚಳವಳಿ ನಡೆಸಲಾಯಿತು.</p>.<p>ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಧರ್ಮೇಶ್ ಮಾತನಾಡಿ, ರಾಜ್ಯ ಸರ್ಕಾರವು ಕಾರ್ಮಿಕರಿಗೆ ಕನಿಷ್ಠ ವೇತನವನ್ನು 7 ವರ್ಷ ಕಳೆದರೂ ಪರಿಷ್ಕರಣೆ ಮಾಡಿಲ್ಲ. ಈ ಹಿಂದೆ ಇದ್ದ ಬಿಜೆಪಿ ಸರ್ಕಾರವು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಅವೈಜ್ಞಾನಿಕವಾಗಿ ವೇತನ ಪರಿಷ್ಕರಣೆ ಮಾಡಿತ್ತು. ಇದನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ ಆದೇಶ ನೀಡಿದ್ದರೂ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.</p>.<p>ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಅನುಸೂಚಿತ ಉದ್ದಿಮೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ತಿಂಗಳಿಗೆ ₹36 ಸಾವಿರ ಕನಿಷ್ಠ ವೇತನ ನಿಗದಿಪಡಿಸಿ ಅಧಿಸೂಚನೆ ಹೊರಡಿಸಬೇಕು. ಕಾರ್ಮಿಕರ ಕುಟುಂಬಗಳಿಗೆ ಒಂದು ತಿಂಗಳಿಗೆ ತಗಲುವ ಆಹಾರ, ಮನೆ ಬಾಡಿಗೆ, ಶಿಕ್ಷಣ, ಆರೋಗ್ಯ, ಇಂಧನ, ಮನರಂಜನೆ ಇತ್ಯಾದಿ ವೆಚ್ಚಗಳಿಗೆ ಅನುಗುಣವಾಗಿ ಪ್ರಸ್ತುತ ಮಾರುಕಟ್ಟೆ ಬೆಲೆ ಆಧರಿಸಿ ವೇತನ ನಿಗದಿಪಡಿಸಬೇಕು ಎಂದರು.</p>.<p>2025ರ ಏಪ್ರಿಲ್ 11ರಂದು ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿತ್ತಾದರೂ, ಅದು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳಿಗೆ ಅನುಗುಣವಾಗಿಲ್ಲ. ಬಂಡವಾಳಿಗರ ಮತ್ತು ಮಾಲೀಕರ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸದೆ ಕೋಟ್ಯಂತರ ಕಾರ್ಮಿಕರಿಗೆ ವಂಚಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕೇಂದ್ರದ ಬಿಜೆಪಿ ಸರ್ಕಾರವು 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಜಾರಿಗೆ ತಂದಿರುವ 4 ಹೊಸ ಕಾರ್ಮಿಕ ಸಂಹಿತೆಗಳು ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುತ್ತಿವೆ ಎಂದು ಧರ್ಮೇಶ್ ಎಚ್ಚರಿಸಿದರು. ಗುತ್ತಿಗೆ ಪದ್ಧತಿ ರದ್ದುಗೊಳಿಸಿ, ಎಲ್ಲ ಕಾಯಂ ಅಲ್ಲದ ಕಾರ್ಮಿಕರನ್ನು ಕಾಯಂಗೊಳಿಸಬೇಕು ಮತ್ತು ಸೊಸೈಟಿ ಮಾದರಿ ನೇಮಕಾತಿಯನ್ನು ಕೈಬಿಡಬೇಕು ಎಂಬುದು ಸಂಘಟನೆಯ ಪ್ರಮುಖ ಬೇಡಿಕೆಯಾಗಿದೆ ಎಂದು ತಿಳಿಸಿದರು.</p>.<p>ಗ್ರಾ.ಪಂ. ನೌಕರರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಟಿ. ಹೊನ್ನೇಗೌಡ, ಕೆ.ಪಿ.ಆರ್.ಎಸ್. ತಾಲ್ಲೂಕು ಘಟಕದ ಅಧ್ಯಕ್ಷ ತೇಜಸ್ ಗೌಡ, ಗ್ರಾ.ಪಂ. ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಎಸ್. ಚಂದ್ರೇಗೌಡ, ಪ್ರಧಾನ ಕಾರ್ಯದರ್ಶಿ ಲಕ್ಷ್ಮೇಗೌಡ, ಖಜಾಂಚಿ ಮಂಜುನಾಥ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-36-1167462390</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನರಾಯಪಟ್ಟಣ:</strong> ವೈಜ್ಞಾನಿಕ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಸಿಐಟಿಯು ತಾಲ್ಲೂಕು ಸಮಿತಿಯಿಂದ ಬುಧವಾರ ತಾಲ್ಲೂಕು ಕಚೇರಿ ಎದುರು ಸಾರ್ವಜನಿಕರಿಂದ ಸಾಮೂಹಿಕ ಸಹಿ ಸಂಗ್ರಹ ಚಳವಳಿ ನಡೆಸಲಾಯಿತು.</p>.<p>ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಧರ್ಮೇಶ್ ಮಾತನಾಡಿ, ರಾಜ್ಯ ಸರ್ಕಾರವು ಕಾರ್ಮಿಕರಿಗೆ ಕನಿಷ್ಠ ವೇತನವನ್ನು 7 ವರ್ಷ ಕಳೆದರೂ ಪರಿಷ್ಕರಣೆ ಮಾಡಿಲ್ಲ. ಈ ಹಿಂದೆ ಇದ್ದ ಬಿಜೆಪಿ ಸರ್ಕಾರವು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಅವೈಜ್ಞಾನಿಕವಾಗಿ ವೇತನ ಪರಿಷ್ಕರಣೆ ಮಾಡಿತ್ತು. ಇದನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ ಆದೇಶ ನೀಡಿದ್ದರೂ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.</p>.<p>ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಅನುಸೂಚಿತ ಉದ್ದಿಮೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ತಿಂಗಳಿಗೆ ₹36 ಸಾವಿರ ಕನಿಷ್ಠ ವೇತನ ನಿಗದಿಪಡಿಸಿ ಅಧಿಸೂಚನೆ ಹೊರಡಿಸಬೇಕು. ಕಾರ್ಮಿಕರ ಕುಟುಂಬಗಳಿಗೆ ಒಂದು ತಿಂಗಳಿಗೆ ತಗಲುವ ಆಹಾರ, ಮನೆ ಬಾಡಿಗೆ, ಶಿಕ್ಷಣ, ಆರೋಗ್ಯ, ಇಂಧನ, ಮನರಂಜನೆ ಇತ್ಯಾದಿ ವೆಚ್ಚಗಳಿಗೆ ಅನುಗುಣವಾಗಿ ಪ್ರಸ್ತುತ ಮಾರುಕಟ್ಟೆ ಬೆಲೆ ಆಧರಿಸಿ ವೇತನ ನಿಗದಿಪಡಿಸಬೇಕು ಎಂದರು.</p>.<p>2025ರ ಏಪ್ರಿಲ್ 11ರಂದು ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿತ್ತಾದರೂ, ಅದು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳಿಗೆ ಅನುಗುಣವಾಗಿಲ್ಲ. ಬಂಡವಾಳಿಗರ ಮತ್ತು ಮಾಲೀಕರ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸದೆ ಕೋಟ್ಯಂತರ ಕಾರ್ಮಿಕರಿಗೆ ವಂಚಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕೇಂದ್ರದ ಬಿಜೆಪಿ ಸರ್ಕಾರವು 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಜಾರಿಗೆ ತಂದಿರುವ 4 ಹೊಸ ಕಾರ್ಮಿಕ ಸಂಹಿತೆಗಳು ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುತ್ತಿವೆ ಎಂದು ಧರ್ಮೇಶ್ ಎಚ್ಚರಿಸಿದರು. ಗುತ್ತಿಗೆ ಪದ್ಧತಿ ರದ್ದುಗೊಳಿಸಿ, ಎಲ್ಲ ಕಾಯಂ ಅಲ್ಲದ ಕಾರ್ಮಿಕರನ್ನು ಕಾಯಂಗೊಳಿಸಬೇಕು ಮತ್ತು ಸೊಸೈಟಿ ಮಾದರಿ ನೇಮಕಾತಿಯನ್ನು ಕೈಬಿಡಬೇಕು ಎಂಬುದು ಸಂಘಟನೆಯ ಪ್ರಮುಖ ಬೇಡಿಕೆಯಾಗಿದೆ ಎಂದು ತಿಳಿಸಿದರು.</p>.<p>ಗ್ರಾ.ಪಂ. ನೌಕರರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಟಿ. ಹೊನ್ನೇಗೌಡ, ಕೆ.ಪಿ.ಆರ್.ಎಸ್. ತಾಲ್ಲೂಕು ಘಟಕದ ಅಧ್ಯಕ್ಷ ತೇಜಸ್ ಗೌಡ, ಗ್ರಾ.ಪಂ. ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಎಸ್. ಚಂದ್ರೇಗೌಡ, ಪ್ರಧಾನ ಕಾರ್ಯದರ್ಶಿ ಲಕ್ಷ್ಮೇಗೌಡ, ಖಜಾಂಚಿ ಮಂಜುನಾಥ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-36-1167462390</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>