<p><strong>ಹೆತ್ತೂರು:</strong> ದೊಡ್ಡನಹಳ್ಳಿ ಚೌಡೇಶ್ವರಿ ಅಮ್ಮನವರ 6ನೇ ವರ್ಷದ ಜಾತ್ರಾ ಮಹೋತ್ಸವ ಮಂಗಳವಾರ ವಿಜೃಂಭಣೆಯಿಂದ ಜರುಗಿತು. ರಾಜ್ಯದ ವಿವಿಧ ಭಾಗ, ಹೊರರಾಜ್ಯಗಳಿಂದಲೂ ಸುಮಾರು 10 ಸಾವಿರಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದರು.</p>.<p>ಸಮೀಪದ ಕುರಭತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುಣ್ಯಕ್ಷೇತ್ರವು ಭಕ್ತರ ಅಪಾರ ನಂಬಿಕೆಯ ಕೇಂದ್ರವಾಗಿದೆ. ಆರಂಭದಲ್ಲಿ ಗದ್ದೆಯಲ್ಲಿ ಚೌಡಿ ದೇವರಾಗಿ ಪೂಜಿಸಲಾಗುವ ಈ ದೇವಿಯು, ಮರದ ಕೆಳಗೆ ಕಲ್ಲಿನ ಸ್ವರೂಪದಲ್ಲಿದ್ದು, ಭಕ್ತರ ಕಷ್ಟಗಳನ್ನು ಆಲಿಸಿ ಪರಿಹಾರ ನೀಡುತ್ತಿದ್ದ ಕಾರಣ ದಿನೇದಿನೇ ಭಕ್ತರ ಸಂಖ್ಯೆ ಹೆಚ್ಚುತ್ತ ಬಂದಿದೆ.</p>.<p>ಸೋಮವಾರ ಸಂಜೆ 6 ಗಂಟೆಯಿಂದ ಕಳಸ ಪೂಜೆ ಕಾರ್ಯಕ್ರಮ ಆರಂಭಗೊಂಡಿತು. ಗ್ರಾಮದ ಈಶ್ವರ ದೇವಸ್ಥಾನದಿಂದ ಬೆಳ್ಳಿರಥದಲ್ಲಿ ಚೌಡೇಶ್ವರಿ ಅಮ್ಮನ ಉತ್ಸವ ಮೂರ್ತಿಯನ್ನು, ಕುಂಭಮೇಳ, ದೀಪಾಲಂಕಾರ ಹಾಗೂ ಭಜನಾ ಮೇಳದೊಂದಿಗೆ ದೇವಿಯ ಸನ್ನಿಧಾನಕ್ಕೆ ಕರೆತರಲಾಯಿತು. ಬಳಿಕ ವಿಶೇಷ ಮಂಗಳಾರತಿ ಪೂಜೆ ನೆರವೇರಿಸಿ, ರಾತ್ರಿ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.</p>.<p>ಮಂಗಳವಾರ ಬೆಳಿಗ್ಗೆಯಿಂದ ಹೋಮ–ಹವನ, ವಿಶೇಷ ಪೂಜಾ ಕಾರ್ಯಕ್ರಮ ಜರುಗಿದವು. ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೊಡ್ಡನಹಳ್ಳಿ ಚೌಡೇಶ್ವರಿ ಅಮ್ಮನವರ ದರ್ಶನ ಪಡೆದು ಹರಕೆ ಸಲ್ಲಿಸಿದರು.</p>.<p>ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಭಕ್ತರು ಪಾಲ್ಗೊಂಡರು. ಸೇವಾ ಟ್ರಸ್ಟ್ ವತಿಯಿಂದ ವ್ಯವಸ್ಥಿತವಾಗಿ, ಸ್ವಚ್ಛತೆ ಹಾಗೂ ಶಿಸ್ತಿನೊಂದಿಗೆ ತಯಾರಿಸಿದ ರುಚಿಕರ ಭೋಜನವನ್ನು ಭಕ್ತರು ಸವಿದರು.</p>.<p>ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ವ್ಯಾಪಾರಿಗಳು ಜಾತ್ರೆಗೆ ಬಂದಿದ್ದು, ಸುತ್ತಲಿನ ಹಳ್ಳಿಗಳ ಜನರು ಅಗತ್ಯ ವಸ್ತುಗಳು, ಸಿಹಿ ತಿಂಡಿ ಹಾಗೂ ಮಕ್ಕಳ ಆಟಿಕೆಗಳನ್ನು ಖರೀದಿಸಲು ಜಾತ್ರಾ ಮೈದಾನದಲ್ಲಿ ಮುಗಿಬಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆತ್ತೂರು:</strong> ದೊಡ್ಡನಹಳ್ಳಿ ಚೌಡೇಶ್ವರಿ ಅಮ್ಮನವರ 6ನೇ ವರ್ಷದ ಜಾತ್ರಾ ಮಹೋತ್ಸವ ಮಂಗಳವಾರ ವಿಜೃಂಭಣೆಯಿಂದ ಜರುಗಿತು. ರಾಜ್ಯದ ವಿವಿಧ ಭಾಗ, ಹೊರರಾಜ್ಯಗಳಿಂದಲೂ ಸುಮಾರು 10 ಸಾವಿರಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದರು.</p>.<p>ಸಮೀಪದ ಕುರಭತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುಣ್ಯಕ್ಷೇತ್ರವು ಭಕ್ತರ ಅಪಾರ ನಂಬಿಕೆಯ ಕೇಂದ್ರವಾಗಿದೆ. ಆರಂಭದಲ್ಲಿ ಗದ್ದೆಯಲ್ಲಿ ಚೌಡಿ ದೇವರಾಗಿ ಪೂಜಿಸಲಾಗುವ ಈ ದೇವಿಯು, ಮರದ ಕೆಳಗೆ ಕಲ್ಲಿನ ಸ್ವರೂಪದಲ್ಲಿದ್ದು, ಭಕ್ತರ ಕಷ್ಟಗಳನ್ನು ಆಲಿಸಿ ಪರಿಹಾರ ನೀಡುತ್ತಿದ್ದ ಕಾರಣ ದಿನೇದಿನೇ ಭಕ್ತರ ಸಂಖ್ಯೆ ಹೆಚ್ಚುತ್ತ ಬಂದಿದೆ.</p>.<p>ಸೋಮವಾರ ಸಂಜೆ 6 ಗಂಟೆಯಿಂದ ಕಳಸ ಪೂಜೆ ಕಾರ್ಯಕ್ರಮ ಆರಂಭಗೊಂಡಿತು. ಗ್ರಾಮದ ಈಶ್ವರ ದೇವಸ್ಥಾನದಿಂದ ಬೆಳ್ಳಿರಥದಲ್ಲಿ ಚೌಡೇಶ್ವರಿ ಅಮ್ಮನ ಉತ್ಸವ ಮೂರ್ತಿಯನ್ನು, ಕುಂಭಮೇಳ, ದೀಪಾಲಂಕಾರ ಹಾಗೂ ಭಜನಾ ಮೇಳದೊಂದಿಗೆ ದೇವಿಯ ಸನ್ನಿಧಾನಕ್ಕೆ ಕರೆತರಲಾಯಿತು. ಬಳಿಕ ವಿಶೇಷ ಮಂಗಳಾರತಿ ಪೂಜೆ ನೆರವೇರಿಸಿ, ರಾತ್ರಿ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.</p>.<p>ಮಂಗಳವಾರ ಬೆಳಿಗ್ಗೆಯಿಂದ ಹೋಮ–ಹವನ, ವಿಶೇಷ ಪೂಜಾ ಕಾರ್ಯಕ್ರಮ ಜರುಗಿದವು. ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೊಡ್ಡನಹಳ್ಳಿ ಚೌಡೇಶ್ವರಿ ಅಮ್ಮನವರ ದರ್ಶನ ಪಡೆದು ಹರಕೆ ಸಲ್ಲಿಸಿದರು.</p>.<p>ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಭಕ್ತರು ಪಾಲ್ಗೊಂಡರು. ಸೇವಾ ಟ್ರಸ್ಟ್ ವತಿಯಿಂದ ವ್ಯವಸ್ಥಿತವಾಗಿ, ಸ್ವಚ್ಛತೆ ಹಾಗೂ ಶಿಸ್ತಿನೊಂದಿಗೆ ತಯಾರಿಸಿದ ರುಚಿಕರ ಭೋಜನವನ್ನು ಭಕ್ತರು ಸವಿದರು.</p>.<p>ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ವ್ಯಾಪಾರಿಗಳು ಜಾತ್ರೆಗೆ ಬಂದಿದ್ದು, ಸುತ್ತಲಿನ ಹಳ್ಳಿಗಳ ಜನರು ಅಗತ್ಯ ವಸ್ತುಗಳು, ಸಿಹಿ ತಿಂಡಿ ಹಾಗೂ ಮಕ್ಕಳ ಆಟಿಕೆಗಳನ್ನು ಖರೀದಿಸಲು ಜಾತ್ರಾ ಮೈದಾನದಲ್ಲಿ ಮುಗಿಬಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>