‘ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ರೈತರ ಕೃಷಿ ಸಾಲ ಮನ್ನಾ ಮಾಡಿದ್ದು ಒಳ್ಳೆಯ
ಬೆಳವಣಿಗೆ.ಆದರೆ, ಸಾಲ ಮನ್ನಾ ಯೋಜನೆಯ ಲಾಭ ಸರಿಯಾಗಿ ರೈತರಿಗೆ ತಲುಪಲಿಲ್ಲ. ಅಧಿಕಾರಿಗಳು ರೈತರಲ್ಲಿ ಗೊಂದಲ ಉಂಟು ಮಾಡಿದರು. ಕುಮಾರಸ್ವಾಮಿ ಅವರ ಇತ್ತೀಚಿನ ನಡವಳಿಕೆ ಬೇಸರ ತರಿಸಿದೆ. ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಕುರಿತು ಅವಹೇಳನಕಾರಿಯಾಗಿ ಮಾತನಾಡುತ್ತಿರುವುದು ಸರಿಯಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.