<p>ಸಕಲೇಶಪುರ: ತಾಲ್ಲೂಕಿನ ಬೆಟ್ಟದ ಭೈರವೇಶ್ವರಸ್ವಾಮಿ ದೇವಾಲಯದಲ್ಲಿ ಇನ್ನು ಮುಂದೆ ಫೋಟೋ ಶೂಟ್ ಮಾಡಲು 4 ಗಂಟೆಗೆ ₹5 ಸಾವಿರ ಶುಲ್ಕ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಹೇಳಿದರು.</p>.<p>ಬೆಟ್ಟದ ಭೈರವೇಶ್ವವರಸ್ವಾಮಿ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ ಸುತ್ತಲಿನ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದ ನಂತರ ಹಾನುಬಾಳಿನ ಪೆಬಲ್ಸ್ ಅಂಡ್ ಬೀನ್ಸ್ ರೆಸಾರ್ಟ್ನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ರೆಸಾರ್ಟ್, ಹೋಂ ಸ್ಟೇ ಮಾಲೀಕರ ಸಂಘದ ಸಮ್ಮುಖದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ದೇವಸ್ಥಾನ ಸುತ್ತಲಿನ 9 ಗ್ರಾಮಗಳಿಂದ ಒಬ್ಬೊಬ್ಬರು ಸದಸ್ಯರನ್ನು ಒಳಗೊಂಡು ದೇವಸ್ಥಾನ ಅಭಿವೃದ್ಧಿ ಸಮಿತಿ ರಚನೆ ಆಗಬೇಕು. ದೇವಸ್ಥಾನದ ಪೂಜಾ ಕಾರ್ಯಗಳು, ಅಲ್ಲಿಯ ಧಾರ್ಮಿಕ ಭಾವನೆಗಳಿಗೆ ಯಾವುದೇ ರೀತಿಯ ಧಕ್ಕೆ ಬರದಂತೆ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿ, ಅವರ ಸಲಹೆ ಪಡೆದು, ಕಾನೂನುಗಳ ವ್ಯಾಪ್ತಿಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.</p>.<p>ಫೋಟೋ ಶೂಟ್ಗೆ 4 ಗಂಟೆ ಮೀರಿದರೆ ಪ್ರತಿ ಗಂಟೆಗೆ ₹1 ಸಾವಿರ ಹೆಚ್ಚುವರಿ ಶುಲ್ಕ ಪಡೆಯಬೇಕು. ಆನ್ಲೈನ್ ಮೂಲಕ ಮುಂಚಿತವಾಗಿ ಅನುಮತಿ ಪಡೆದು ಕ್ಯೂಅರ್ ಕೋಡ್ ಅಥವಾ ಫೋನ್ ಪೇ ಮೂಲಕ ಹಣ ಕಟ್ಟಬೇಕು. ಇಲಾಖೆಯಿಂದ ನೀಡುವ ದಿನಾಂಕ ಹಾಗೂ ನಿಗದಿತ ಸಮಯದಲ್ಲಿ ಮಾತ್ರವೇ ಫೋಟೋ ಶೂಟ್ ಮಾಡಬೇಕು. ವಸ್ತ್ರಸಂಹಿತೆ ಕಟ್ಟುನಿಟ್ಟಾಗಿ ಪಾಲನೆ ಆಗಬೇಕು. ವಸ್ತ್ರ ಸಂಹಿತೆ ಉಲ್ಲಂಘನೆ ಆಗುವಂಥ ಬಟ್ಟೆಗಳನ್ನು ಹಾಕಿಕೊಂಡು ಬಂದವರಿಗೆ ₹500 ದಂಡ ವಿಧಿಸಲಾಗುವುದು ಎಂದರು.</p>.<p>ವಾಹನಗಳ ನಿಲುಗಡೆಯನ್ನು ದೇವಾಲದಕೆರೆ ಗ್ರಾಮ ಪಂಚಾಯಿತಿ ಉಸ್ತುವಾರಿ ತೆಗೆದುಕೊಂಡು ಪಾರ್ಕಿಂಗ್ ಗೇಟ್ ಮಾಡಿ, ದ್ವಿಚಕ್ರ ವಾಹನಗಳನ್ನು ಹೊರತುಪಡಿಸಿ ಉಳಿದ ವಾಹನಗಳಿಗೆ ಗಂಟೆಗೆ ₹30 ಶುಲ್ಕ ವಸೂಲಿ ಮಾಡಬೇಕು. ಸೌರ ಶಕ್ತಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ದೇವಸ್ಥಾನದ ಸಮೀಪ ಇರುವ ಶೌಚಾಲಯ ದುರಸ್ತಿಗೊಳಿಸಿ ನೀರಿನ ವ್ಯವಸ್ಥೆ ಮಾಡಬೇಕು ಎಂದರು.</p>.<p>ತಹಶೀಲ್ದಾರ್ ಕೆ.ಎಸ್. ಸುಪ್ರೀತಾ, ಡಿವೈಎಸ್ಪಿ ಎಸ್.ಕೆ.ಮಾಲತೀಶ್, ಇನ್ಸ್ಪೆಕ್ಟರ್ಗಳಾದ ಬಿ.ಕೆ. ಪಾಟೀಲ್, ವಿ.ಸಿ. ವನರಾಜು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ್, ಅಬಕಾರಿ ಇಲಾಖೆ ಅಧಿಕಾರಿ ಕೇಶವಮೂರ್ತಿ, ವಲಯ ಅರಣ್ಯ ಅಧಿಕಾರಿ ಎಚ್.ಆರ್. ಹೇಮಂತ್ ಕುಮಾರ್, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಾದ ಪಿ. ರಮೇಶ್ ಕುಮಾರ್, ಜಿ. ನಾಗರಾಜ್, ರೆಸಾರ್ಟ್ ಮಾಲೀಕರ ಸಂಘದ ಅಧ್ಯಕ್ಷ ಮಸ್ತಾರೆ ಲೋಕೇಶ್, ಕಾರ್ಯದರ್ಶಿ ಕಾಡುಮಕ್ಕಿ ಹರೀಶ್, ಹೋಂ ಸ್ಟೇ ಮಾಲೀಕರ ಸಂಘದ ಅಧ್ಯಕ್ಷ ಪುರುಷೋತ್ತಮ್, ಕಾರ್ಯದರ್ಶಿ ಜಯಪ್ರಕಾಶ್, ಜಿ.ಪಂ. ಮಾಜಿ ಸದಸ್ಯ ಕೆ.ಎಸ್. ಕುಮಾರಸ್ವಾಮಿ ಹಾಗೂ ಇತರರು ಇದ್ದರು.</p>.<div><blockquote>ಟ್ರಕ್ಕಿಂಗ್ ಪುನರಾರಂಭಿಸಲು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಲಾಗುವುದು. ಟ್ರಕ್ಕಿಂಗ್ ತೆರಳುವವರಿಗೆ ನಿಗದಿತ ಶುಲ್ಕ ಹಾಗೂ ಕಟ್ಟುನಿಟ್ಟಿನ ಕಾನೂನು ಕ್ರಮ ಹೇರಲಾಗುವುದು. </blockquote><span class="attribution">ಕೆ.ಎಸ್.ಲತಾಕುಮಾರಿ, ಜಿಲ್ಲಾಧಿಕಾರಿ</span></div>.<h2>‘ಪ್ರವಾಸೋದ್ಯಮ ಅಭಿವೃದ್ಧಿ ಆಗಬೇಕು’</h2><p>‘ಇಲ್ಲಿಯ ನಿವಾಸಿಗಳು ಕೇವಲ ಕಾಫಿ ಬೆಳೆ ನಂಬಿಕೊಂಡು ಬದುಕು ಸಾಗಿಸುವುದಕ್ಕೆ ಸಾಧ್ಯವಿಲ್ಲ. ಇಲ್ಲಿರುವ ಪ್ರವಾಸಿ ತಾಣಗಳನ್ನು ಸಂರಕ್ಷಣೆ ಮಾಡಿಕೊಂಡು ಪ್ರವಾಸಿಗರಿಗೆ ಒಳ್ಳೆಯ ಆತಿಥ್ಯ ನೀಡಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಬೇಕು. ಆಗ ಮಾತ್ರ ಈ ಭಾಗದ ಆರ್ಥಿಕ ಚಟುವಟಿಕೆ, ಉದ್ಯೋಗ ಹೆಚ್ಚಾಗಿ ಜನರ ಜೀವನ ಮಟ್ಟ ಸುಧಾರಣೆ ಆಗುತ್ತದೆ ಎಂದು ಜಿಲ್ಲಾಧಿಕಾರಿ ಲತಾಕುಮಾರಿ ಹೇಳಿದರು.</p><p>‘ಶಿರಾಡಿಘಾಟ್ ಹಾಗೂ ತಾಲ್ಲೂಕಿನ ಹಲವು ಸ್ಥಳಗಳಲ್ಲಿ ರಸ್ತೆಯಲ್ಲಿ ಪ್ರಯಾಣ ಮಾಡುತ್ತಿದ್ದರೆ ಗುಡ್ಡಬೆಟ್ಟ ಆಕರ್ಷಿಸುತ್ತವೆ. ಅಂತಹ ಕಡೆಗಳಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ವೀಕ್ಷಣಾ ಗೋಪುರ ನಿರ್ಮಾಣ ಮಾಡಲಾಗುವುದು. ಹಾನುಬಾಳು ಹೋಬಳಿ ಕೇಂದ್ರದಲ್ಲಿ ಪೊಲೀಸ್ ಹೊರಠಾಣೆ ತೆರೆಯಲು ಕ್ರಮ ಕೈಗೊಳ್ಳಲಾಗುವುದು’ ಎಂದರು.</p> <h2>ಬಾಲಕಿಯರಿದ್ದರೆ ಪೊಲೀಸರ ಗಮನಕ್ಕೆ ತನ್ನಿ</h2><p>18 ವರ್ಷದ ಒಳಗಿನ ಹೆಣ್ಣು ಮಕ್ಕಳನ್ನು ಯಾರಾದರೂ ಕರೆದುಕೊಂಡು ಬಂದರೆ ತಕ್ಷಣ ಅವರನ್ನು ವಿಚಾರಿಸಿ, ಪೊಲೀಸರ ಗಮನಕ್ಕೆ ತರಬೇಕು. ಹೋಂ ಸ್ಟೇ, ರೆಸಾರ್ಟ್ ಹಾಗೂ ಲಾಡ್ಜ್ಗಳಲ್ಲಿ ಅಂಥವರಿಗೆ ಉಳಿಯಲು ಕೊಠಡಿ ನೀಡಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿ.ಸಿ. ಲತಾಕುಮಾರಿ ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಕಲೇಶಪುರ: ತಾಲ್ಲೂಕಿನ ಬೆಟ್ಟದ ಭೈರವೇಶ್ವರಸ್ವಾಮಿ ದೇವಾಲಯದಲ್ಲಿ ಇನ್ನು ಮುಂದೆ ಫೋಟೋ ಶೂಟ್ ಮಾಡಲು 4 ಗಂಟೆಗೆ ₹5 ಸಾವಿರ ಶುಲ್ಕ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಹೇಳಿದರು.</p>.<p>ಬೆಟ್ಟದ ಭೈರವೇಶ್ವವರಸ್ವಾಮಿ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ ಸುತ್ತಲಿನ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದ ನಂತರ ಹಾನುಬಾಳಿನ ಪೆಬಲ್ಸ್ ಅಂಡ್ ಬೀನ್ಸ್ ರೆಸಾರ್ಟ್ನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ರೆಸಾರ್ಟ್, ಹೋಂ ಸ್ಟೇ ಮಾಲೀಕರ ಸಂಘದ ಸಮ್ಮುಖದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ದೇವಸ್ಥಾನ ಸುತ್ತಲಿನ 9 ಗ್ರಾಮಗಳಿಂದ ಒಬ್ಬೊಬ್ಬರು ಸದಸ್ಯರನ್ನು ಒಳಗೊಂಡು ದೇವಸ್ಥಾನ ಅಭಿವೃದ್ಧಿ ಸಮಿತಿ ರಚನೆ ಆಗಬೇಕು. ದೇವಸ್ಥಾನದ ಪೂಜಾ ಕಾರ್ಯಗಳು, ಅಲ್ಲಿಯ ಧಾರ್ಮಿಕ ಭಾವನೆಗಳಿಗೆ ಯಾವುದೇ ರೀತಿಯ ಧಕ್ಕೆ ಬರದಂತೆ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿ, ಅವರ ಸಲಹೆ ಪಡೆದು, ಕಾನೂನುಗಳ ವ್ಯಾಪ್ತಿಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.</p>.<p>ಫೋಟೋ ಶೂಟ್ಗೆ 4 ಗಂಟೆ ಮೀರಿದರೆ ಪ್ರತಿ ಗಂಟೆಗೆ ₹1 ಸಾವಿರ ಹೆಚ್ಚುವರಿ ಶುಲ್ಕ ಪಡೆಯಬೇಕು. ಆನ್ಲೈನ್ ಮೂಲಕ ಮುಂಚಿತವಾಗಿ ಅನುಮತಿ ಪಡೆದು ಕ್ಯೂಅರ್ ಕೋಡ್ ಅಥವಾ ಫೋನ್ ಪೇ ಮೂಲಕ ಹಣ ಕಟ್ಟಬೇಕು. ಇಲಾಖೆಯಿಂದ ನೀಡುವ ದಿನಾಂಕ ಹಾಗೂ ನಿಗದಿತ ಸಮಯದಲ್ಲಿ ಮಾತ್ರವೇ ಫೋಟೋ ಶೂಟ್ ಮಾಡಬೇಕು. ವಸ್ತ್ರಸಂಹಿತೆ ಕಟ್ಟುನಿಟ್ಟಾಗಿ ಪಾಲನೆ ಆಗಬೇಕು. ವಸ್ತ್ರ ಸಂಹಿತೆ ಉಲ್ಲಂಘನೆ ಆಗುವಂಥ ಬಟ್ಟೆಗಳನ್ನು ಹಾಕಿಕೊಂಡು ಬಂದವರಿಗೆ ₹500 ದಂಡ ವಿಧಿಸಲಾಗುವುದು ಎಂದರು.</p>.<p>ವಾಹನಗಳ ನಿಲುಗಡೆಯನ್ನು ದೇವಾಲದಕೆರೆ ಗ್ರಾಮ ಪಂಚಾಯಿತಿ ಉಸ್ತುವಾರಿ ತೆಗೆದುಕೊಂಡು ಪಾರ್ಕಿಂಗ್ ಗೇಟ್ ಮಾಡಿ, ದ್ವಿಚಕ್ರ ವಾಹನಗಳನ್ನು ಹೊರತುಪಡಿಸಿ ಉಳಿದ ವಾಹನಗಳಿಗೆ ಗಂಟೆಗೆ ₹30 ಶುಲ್ಕ ವಸೂಲಿ ಮಾಡಬೇಕು. ಸೌರ ಶಕ್ತಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ದೇವಸ್ಥಾನದ ಸಮೀಪ ಇರುವ ಶೌಚಾಲಯ ದುರಸ್ತಿಗೊಳಿಸಿ ನೀರಿನ ವ್ಯವಸ್ಥೆ ಮಾಡಬೇಕು ಎಂದರು.</p>.<p>ತಹಶೀಲ್ದಾರ್ ಕೆ.ಎಸ್. ಸುಪ್ರೀತಾ, ಡಿವೈಎಸ್ಪಿ ಎಸ್.ಕೆ.ಮಾಲತೀಶ್, ಇನ್ಸ್ಪೆಕ್ಟರ್ಗಳಾದ ಬಿ.ಕೆ. ಪಾಟೀಲ್, ವಿ.ಸಿ. ವನರಾಜು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ್, ಅಬಕಾರಿ ಇಲಾಖೆ ಅಧಿಕಾರಿ ಕೇಶವಮೂರ್ತಿ, ವಲಯ ಅರಣ್ಯ ಅಧಿಕಾರಿ ಎಚ್.ಆರ್. ಹೇಮಂತ್ ಕುಮಾರ್, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಾದ ಪಿ. ರಮೇಶ್ ಕುಮಾರ್, ಜಿ. ನಾಗರಾಜ್, ರೆಸಾರ್ಟ್ ಮಾಲೀಕರ ಸಂಘದ ಅಧ್ಯಕ್ಷ ಮಸ್ತಾರೆ ಲೋಕೇಶ್, ಕಾರ್ಯದರ್ಶಿ ಕಾಡುಮಕ್ಕಿ ಹರೀಶ್, ಹೋಂ ಸ್ಟೇ ಮಾಲೀಕರ ಸಂಘದ ಅಧ್ಯಕ್ಷ ಪುರುಷೋತ್ತಮ್, ಕಾರ್ಯದರ್ಶಿ ಜಯಪ್ರಕಾಶ್, ಜಿ.ಪಂ. ಮಾಜಿ ಸದಸ್ಯ ಕೆ.ಎಸ್. ಕುಮಾರಸ್ವಾಮಿ ಹಾಗೂ ಇತರರು ಇದ್ದರು.</p>.<div><blockquote>ಟ್ರಕ್ಕಿಂಗ್ ಪುನರಾರಂಭಿಸಲು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಲಾಗುವುದು. ಟ್ರಕ್ಕಿಂಗ್ ತೆರಳುವವರಿಗೆ ನಿಗದಿತ ಶುಲ್ಕ ಹಾಗೂ ಕಟ್ಟುನಿಟ್ಟಿನ ಕಾನೂನು ಕ್ರಮ ಹೇರಲಾಗುವುದು. </blockquote><span class="attribution">ಕೆ.ಎಸ್.ಲತಾಕುಮಾರಿ, ಜಿಲ್ಲಾಧಿಕಾರಿ</span></div>.<h2>‘ಪ್ರವಾಸೋದ್ಯಮ ಅಭಿವೃದ್ಧಿ ಆಗಬೇಕು’</h2><p>‘ಇಲ್ಲಿಯ ನಿವಾಸಿಗಳು ಕೇವಲ ಕಾಫಿ ಬೆಳೆ ನಂಬಿಕೊಂಡು ಬದುಕು ಸಾಗಿಸುವುದಕ್ಕೆ ಸಾಧ್ಯವಿಲ್ಲ. ಇಲ್ಲಿರುವ ಪ್ರವಾಸಿ ತಾಣಗಳನ್ನು ಸಂರಕ್ಷಣೆ ಮಾಡಿಕೊಂಡು ಪ್ರವಾಸಿಗರಿಗೆ ಒಳ್ಳೆಯ ಆತಿಥ್ಯ ನೀಡಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಬೇಕು. ಆಗ ಮಾತ್ರ ಈ ಭಾಗದ ಆರ್ಥಿಕ ಚಟುವಟಿಕೆ, ಉದ್ಯೋಗ ಹೆಚ್ಚಾಗಿ ಜನರ ಜೀವನ ಮಟ್ಟ ಸುಧಾರಣೆ ಆಗುತ್ತದೆ ಎಂದು ಜಿಲ್ಲಾಧಿಕಾರಿ ಲತಾಕುಮಾರಿ ಹೇಳಿದರು.</p><p>‘ಶಿರಾಡಿಘಾಟ್ ಹಾಗೂ ತಾಲ್ಲೂಕಿನ ಹಲವು ಸ್ಥಳಗಳಲ್ಲಿ ರಸ್ತೆಯಲ್ಲಿ ಪ್ರಯಾಣ ಮಾಡುತ್ತಿದ್ದರೆ ಗುಡ್ಡಬೆಟ್ಟ ಆಕರ್ಷಿಸುತ್ತವೆ. ಅಂತಹ ಕಡೆಗಳಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ವೀಕ್ಷಣಾ ಗೋಪುರ ನಿರ್ಮಾಣ ಮಾಡಲಾಗುವುದು. ಹಾನುಬಾಳು ಹೋಬಳಿ ಕೇಂದ್ರದಲ್ಲಿ ಪೊಲೀಸ್ ಹೊರಠಾಣೆ ತೆರೆಯಲು ಕ್ರಮ ಕೈಗೊಳ್ಳಲಾಗುವುದು’ ಎಂದರು.</p> <h2>ಬಾಲಕಿಯರಿದ್ದರೆ ಪೊಲೀಸರ ಗಮನಕ್ಕೆ ತನ್ನಿ</h2><p>18 ವರ್ಷದ ಒಳಗಿನ ಹೆಣ್ಣು ಮಕ್ಕಳನ್ನು ಯಾರಾದರೂ ಕರೆದುಕೊಂಡು ಬಂದರೆ ತಕ್ಷಣ ಅವರನ್ನು ವಿಚಾರಿಸಿ, ಪೊಲೀಸರ ಗಮನಕ್ಕೆ ತರಬೇಕು. ಹೋಂ ಸ್ಟೇ, ರೆಸಾರ್ಟ್ ಹಾಗೂ ಲಾಡ್ಜ್ಗಳಲ್ಲಿ ಅಂಥವರಿಗೆ ಉಳಿಯಲು ಕೊಠಡಿ ನೀಡಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿ.ಸಿ. ಲತಾಕುಮಾರಿ ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>