<p><strong>ಬೇಲೂರು:</strong> ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆಯಡಿಯಲ್ಲಿ ನೀಡುವ ವಾಹನವನ್ನು ಶಾಸಕ ಎಚ್.ಕೆ.ಸುರೇಶ್ ಫಲಾನುಭವಿಗೆ ಹಸ್ತಾಂತರ ಮಾಡಿದರು.</p>.<p>ಇಲ್ಲಿನ ಶಾಸಕರ ಕಚೇರಿಯಲ್ಲಿ ಸೋಮವಾರ ದೊಡ್ಡಬ್ಯಾಡಿಗೆರೆಯ ಕೀರ್ತನಾ ಅವರಿಗೆ ವಾಹನದ ಕೀ ಹಸ್ತಾಂತರಿಸಿ ಅವರು ಮಾತನಾಡಿ, ‘ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಹಿರಿಯರವರೆಗೆ ಜನರನ್ನು ಗುರುತಿಸಿ, ಸ್ವಾವಲಂಬಿ ಜೀವನ ನಡೆಸಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ’ ಎಂದು ತಿಳಿಸಿದರು.</p>.<p>‘ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಮಾಜದ ಹಿಂದುಳಿದ ವರ್ಗಗಳು ಆರ್ಥಿಕವಾಗಿ ಬಲಿಷ್ಠರಾಗಬೇಕು ಎಂಬ ಉದ್ದೇಶದಿಂದ ಸಂವಿಧಾನ ರೂಪಿಸಿದ್ದರು. ಅದಕ್ಕೆ ಪೂರಕವಾಗಿ ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಸ್ವಂತ ಉದ್ಯೋಗದ ಮೂಲಕ ಬದುಕು ಕಟ್ಟಿಕೊಳ್ಳಲು ವಾಹನ ಸೌಲಭ್ಯ ನೀಡಲಾಗುತ್ತಿದೆ’ ಎಂದು ಹೇಳಿದರು.</p>.<p>‘2025-26ನೇ ಸಾಲಿನಲ್ಲಿ ಒಟ್ಟು ಎಂಟು ಫಲಾನುಭವಿಗಳಿಗೆ ವಾಹನಗಳನ್ನು ವಿತರಿಸಲಾಗುತ್ತಿದ್ದು, ಪ್ರತಿಯೊಂದು ವಾಹನಕ್ಕೂ ಸುಮಾರು ₹4 ಲಕ್ಷ ಸಹಾಯಧನ ನೀಡಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.</p>.<p>ಬಿಜೆಪಿ ಮುಖಂಡ ಪರ್ವತಯ್ಯ, ಸಿ.ಎಸ್. ಪ್ರಕಾಶ್, ಮಂಜುನಾಥ್ ಹಾಗೂ ಮುಖಂಡರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-36-1222892801</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು:</strong> ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆಯಡಿಯಲ್ಲಿ ನೀಡುವ ವಾಹನವನ್ನು ಶಾಸಕ ಎಚ್.ಕೆ.ಸುರೇಶ್ ಫಲಾನುಭವಿಗೆ ಹಸ್ತಾಂತರ ಮಾಡಿದರು.</p>.<p>ಇಲ್ಲಿನ ಶಾಸಕರ ಕಚೇರಿಯಲ್ಲಿ ಸೋಮವಾರ ದೊಡ್ಡಬ್ಯಾಡಿಗೆರೆಯ ಕೀರ್ತನಾ ಅವರಿಗೆ ವಾಹನದ ಕೀ ಹಸ್ತಾಂತರಿಸಿ ಅವರು ಮಾತನಾಡಿ, ‘ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಹಿರಿಯರವರೆಗೆ ಜನರನ್ನು ಗುರುತಿಸಿ, ಸ್ವಾವಲಂಬಿ ಜೀವನ ನಡೆಸಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ’ ಎಂದು ತಿಳಿಸಿದರು.</p>.<p>‘ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಮಾಜದ ಹಿಂದುಳಿದ ವರ್ಗಗಳು ಆರ್ಥಿಕವಾಗಿ ಬಲಿಷ್ಠರಾಗಬೇಕು ಎಂಬ ಉದ್ದೇಶದಿಂದ ಸಂವಿಧಾನ ರೂಪಿಸಿದ್ದರು. ಅದಕ್ಕೆ ಪೂರಕವಾಗಿ ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಸ್ವಂತ ಉದ್ಯೋಗದ ಮೂಲಕ ಬದುಕು ಕಟ್ಟಿಕೊಳ್ಳಲು ವಾಹನ ಸೌಲಭ್ಯ ನೀಡಲಾಗುತ್ತಿದೆ’ ಎಂದು ಹೇಳಿದರು.</p>.<p>‘2025-26ನೇ ಸಾಲಿನಲ್ಲಿ ಒಟ್ಟು ಎಂಟು ಫಲಾನುಭವಿಗಳಿಗೆ ವಾಹನಗಳನ್ನು ವಿತರಿಸಲಾಗುತ್ತಿದ್ದು, ಪ್ರತಿಯೊಂದು ವಾಹನಕ್ಕೂ ಸುಮಾರು ₹4 ಲಕ್ಷ ಸಹಾಯಧನ ನೀಡಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.</p>.<p>ಬಿಜೆಪಿ ಮುಖಂಡ ಪರ್ವತಯ್ಯ, ಸಿ.ಎಸ್. ಪ್ರಕಾಶ್, ಮಂಜುನಾಥ್ ಹಾಗೂ ಮುಖಂಡರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-36-1222892801</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>