<p><strong>ನುಗ್ಗೇಹಳ್ಳಿ</strong>: ಭಾರತವು ವಿಶ್ವಮಟ್ಟದಲ್ಲಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಆದರೂ ದೇಶದಲ್ಲಿ ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ಸಾಧ್ಯವಾಗುತ್ತಿಲ್ಲ. ಈ ಪದ್ಧತಿಯನ್ನು ಹೋಗಲಾಡಿಸಲು ಎಲ್ಲರ ಸಹಕಾರ ಮುಖ್ಯ ಎಂದು ನುಗ್ಗೇಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ಭರತ್ ರೆಡ್ಡಿ ಅಭಿಪ್ರಾಯಪಟ್ಟರು.</p>.<p>ಹೋಬಳಿ ಕೇಂದ್ರದಲ್ಲಿ ಚನ್ನರಾಯಪಟ್ಟಣ ಪೂರ್ಣಚಂದ್ರ ಪಬ್ಲಿಕ್ ಶಾಲೆ ಹಾಗೂ ಮಲ್ನಾಡ್ ಅಂತರರಾಷ್ಟ್ರೀಯ ಶಾಲೆ ವತಿಯಿಂದ ಹಮ್ಮಿಕೊಂಡಿದ್ದ ಬಾಲಕಾರ್ಮಿಕ ಪದ್ಧತಿ ವಿರೋಧಿ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮಕ್ಕಳಿಗೆ ಉಚಿತ ಶಿಕ್ಷಣ ಕೊಡುತ್ತಿವೆ. ಆದರೆ, ಕೆಲ ಬಡ ಕುಟುಂಬಗಳು ಜೀವನ ನಡೆಸುವುದು ಕಷ್ಟವಾಗಿ, ಮಕ್ಕಳಿಗೆ ಶಿಕ್ಷಣ ಕೊಡಿಸದೆ ಜೀತ ಪದ್ಧತಿಗೆ ದೂಡುತ್ತಾರೆ. ಇದರಿಂದ ಅಂತಹ ಮಕ್ಕಳ ಭವಿಷ್ಯದ ಮೇಲೆ ಕತ್ತಲು ಆವರಿಸಿದೆ ಎಂದರು.</p>.<p>ಬಾಲಕಾರ್ಮಿಕ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದರೆ ಬಾಲಕಾರ್ಮಿಕ ಪದ್ಧತಿಯನ್ನು ಬೇರು ಸಮೇತ ಕಿತ್ತು ಹಾಕಬಹುದು ಎಂದರು.</p>.<p>ಪೂರ್ಣಚಂದ್ರ ಪಬ್ಲಿಕ್ ಶಾಲೆ ಹಾಗೂ ಮಲ್ನಾಡ್ ಅಂತರರಾಷ್ಟ್ರೀಯ ಶಾಲೆಯ ಮಕ್ಕಳಿಂದ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿ, ನಂತರ ಹೋಬಳಿ ಕೇಂದ್ರದ ಕೆಲವು ಕಡೆಗಳಲ್ಲಿ ಬಾಲಕಾರ್ಮಿಕ ವಿರೋಧಿ ಜಾಗೃತಿ ಮೂಡಿಸಲು ಕಿರು ನಾಟಕಗಳನ್ನು ಮಕ್ಕಳು ಪ್ರದರ್ಶಿಸಿದರು. </p>.<p>ಪೂರ್ಣಚಂದ್ರ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಧನಲಕ್ಷ್ಮಿ, ಮಲ್ನಾಡ್ ಅಂತರರಾಷ್ಟ್ರೀಯ ಶಾಲೆಯ ಪ್ರಾಂಶುಪಾಲರಾದ ಸಾವಿತ್ರಿ, ಶಿಕ್ಷಕರಾದ ಮಂಜುನಾಥ್, ರವಿ ನಾಯಕ್, ಭಾವನ, ಚೇತನ್, ಕವಿತಾ, ವಿವೇಕ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನುಗ್ಗೇಹಳ್ಳಿ</strong>: ಭಾರತವು ವಿಶ್ವಮಟ್ಟದಲ್ಲಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಆದರೂ ದೇಶದಲ್ಲಿ ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ಸಾಧ್ಯವಾಗುತ್ತಿಲ್ಲ. ಈ ಪದ್ಧತಿಯನ್ನು ಹೋಗಲಾಡಿಸಲು ಎಲ್ಲರ ಸಹಕಾರ ಮುಖ್ಯ ಎಂದು ನುಗ್ಗೇಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ಭರತ್ ರೆಡ್ಡಿ ಅಭಿಪ್ರಾಯಪಟ್ಟರು.</p>.<p>ಹೋಬಳಿ ಕೇಂದ್ರದಲ್ಲಿ ಚನ್ನರಾಯಪಟ್ಟಣ ಪೂರ್ಣಚಂದ್ರ ಪಬ್ಲಿಕ್ ಶಾಲೆ ಹಾಗೂ ಮಲ್ನಾಡ್ ಅಂತರರಾಷ್ಟ್ರೀಯ ಶಾಲೆ ವತಿಯಿಂದ ಹಮ್ಮಿಕೊಂಡಿದ್ದ ಬಾಲಕಾರ್ಮಿಕ ಪದ್ಧತಿ ವಿರೋಧಿ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮಕ್ಕಳಿಗೆ ಉಚಿತ ಶಿಕ್ಷಣ ಕೊಡುತ್ತಿವೆ. ಆದರೆ, ಕೆಲ ಬಡ ಕುಟುಂಬಗಳು ಜೀವನ ನಡೆಸುವುದು ಕಷ್ಟವಾಗಿ, ಮಕ್ಕಳಿಗೆ ಶಿಕ್ಷಣ ಕೊಡಿಸದೆ ಜೀತ ಪದ್ಧತಿಗೆ ದೂಡುತ್ತಾರೆ. ಇದರಿಂದ ಅಂತಹ ಮಕ್ಕಳ ಭವಿಷ್ಯದ ಮೇಲೆ ಕತ್ತಲು ಆವರಿಸಿದೆ ಎಂದರು.</p>.<p>ಬಾಲಕಾರ್ಮಿಕ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದರೆ ಬಾಲಕಾರ್ಮಿಕ ಪದ್ಧತಿಯನ್ನು ಬೇರು ಸಮೇತ ಕಿತ್ತು ಹಾಕಬಹುದು ಎಂದರು.</p>.<p>ಪೂರ್ಣಚಂದ್ರ ಪಬ್ಲಿಕ್ ಶಾಲೆ ಹಾಗೂ ಮಲ್ನಾಡ್ ಅಂತರರಾಷ್ಟ್ರೀಯ ಶಾಲೆಯ ಮಕ್ಕಳಿಂದ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿ, ನಂತರ ಹೋಬಳಿ ಕೇಂದ್ರದ ಕೆಲವು ಕಡೆಗಳಲ್ಲಿ ಬಾಲಕಾರ್ಮಿಕ ವಿರೋಧಿ ಜಾಗೃತಿ ಮೂಡಿಸಲು ಕಿರು ನಾಟಕಗಳನ್ನು ಮಕ್ಕಳು ಪ್ರದರ್ಶಿಸಿದರು. </p>.<p>ಪೂರ್ಣಚಂದ್ರ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಧನಲಕ್ಷ್ಮಿ, ಮಲ್ನಾಡ್ ಅಂತರರಾಷ್ಟ್ರೀಯ ಶಾಲೆಯ ಪ್ರಾಂಶುಪಾಲರಾದ ಸಾವಿತ್ರಿ, ಶಿಕ್ಷಕರಾದ ಮಂಜುನಾಥ್, ರವಿ ನಾಯಕ್, ಭಾವನ, ಚೇತನ್, ಕವಿತಾ, ವಿವೇಕ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>