<p><strong>ಹಾಸನ</strong>: ‘ಶ್ರಮ ಶಕ್ತಿ ನೀತಿಯು ಸಂವಿಧಾನಾತ್ಮಕ ಹಕ್ಕುಗಳನ್ನು ನಾಶ ಮಾಡುವ, ಮನುಸ್ಮೃತಿ ಆಧಾರಿತ ನೀತಿಗಳನ್ನು ಜಾರಿಗೊಳಿಸುವ ಸಂಚು’ ಎಂದು ಸಿಐಟಿಯು ರಾಷ್ಟ್ರೀಯ ಅಧ್ಯಕ್ಷೆ ಡಾ.ಹೇಮಲತಾ ಪ್ರತಿಪಾದಿಸಿದರು.</p>.<p>ನಗರದಲ್ಲಿ ಗುರುವಾರ ಆರಂಭವಾದ 3 ದಿನಗಳ ಸಿಐಟಿಯು 16 ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿ, ‘ಈ ನೀತಿಯಲ್ಲಿ ಮಹಿಳಾ ಶೋಷಣೆ, ದೀನ ದಲಿತರ ಶೋಷಣೆ ಅಡಗಿದೆ. ಇದು ದುಡಿಯುವ ಜನರ ಮೇಲೆ ಆರ್ಎಸ್ಎಸ್ ನೀತಿಗಳನ್ನು ಹೇರುವ ಪ್ರಯತ್ನ’ ಎಂದು ಅಭಿಪ್ರಾಯಪಟ್ಟರು. </p>.<p>‘ಕಾರ್ಮಿಕರು ಶತಮಾನಗಳಿಂದ ಹೋರಾಟದ ಮೂಲಕ ಪಡೆದ ಹಕ್ಕುಗಳನ್ನ ಕಾನೂನು ತಿದ್ದುಪಡಿ ಮೂಲಕ ನಾಶ ಮಾಡಲಾಗುತ್ತಿದೆ.ಕಾರ್ಮಿಕ ಇಲಾಖೆ ಕಾರ್ಮಿಕರನ್ನು ರಕ್ಷಿಸುವ ಬದಲು, ಮಾಲೀಕರ ಪರವಾಗಿ ವಕಾಲತ್ತು ವಹಿಸುವ ಸಂಪರ್ಕ ಸಾಧನವಾಗುತ್ತಿದೆ’ ಎಂದು ದೂರಿದರು.</p>.<p>‘ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ, ಶ್ರಮ ಶಕ್ತಿ ನೀತಿಗಳ ವಿರುದ್ದ ಹೋರಾಟ ತೀವ್ರಗೊಳಿಸಬೇಕಾಗಿದೆ’ ಎಂದರು.</p>.<p>ಸಿಐಟಿಯು ರಾಜ್ಯ ಘಟಕದ ಅಧ್ಯಕ್ಷೆ ಎಸ್. ವರಲಕ್ಷ್ಮಿ, ರಾಷ್ಟ್ರೀಯ ಕಾರ್ಯದರ್ಶಿ ಕೆ.ಎನ್. ಉಮೇಶ್, ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ, ರಾಜ್ಯ ಘಟಕದ ಉಪಾಧ್ಯಕ್ಷ ವಿ.ಜೆ.ಕೆ ನಾಯರ್, ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಧರ್ಮೇಶ್ ವೇದಿಕೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ‘ಶ್ರಮ ಶಕ್ತಿ ನೀತಿಯು ಸಂವಿಧಾನಾತ್ಮಕ ಹಕ್ಕುಗಳನ್ನು ನಾಶ ಮಾಡುವ, ಮನುಸ್ಮೃತಿ ಆಧಾರಿತ ನೀತಿಗಳನ್ನು ಜಾರಿಗೊಳಿಸುವ ಸಂಚು’ ಎಂದು ಸಿಐಟಿಯು ರಾಷ್ಟ್ರೀಯ ಅಧ್ಯಕ್ಷೆ ಡಾ.ಹೇಮಲತಾ ಪ್ರತಿಪಾದಿಸಿದರು.</p>.<p>ನಗರದಲ್ಲಿ ಗುರುವಾರ ಆರಂಭವಾದ 3 ದಿನಗಳ ಸಿಐಟಿಯು 16 ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿ, ‘ಈ ನೀತಿಯಲ್ಲಿ ಮಹಿಳಾ ಶೋಷಣೆ, ದೀನ ದಲಿತರ ಶೋಷಣೆ ಅಡಗಿದೆ. ಇದು ದುಡಿಯುವ ಜನರ ಮೇಲೆ ಆರ್ಎಸ್ಎಸ್ ನೀತಿಗಳನ್ನು ಹೇರುವ ಪ್ರಯತ್ನ’ ಎಂದು ಅಭಿಪ್ರಾಯಪಟ್ಟರು. </p>.<p>‘ಕಾರ್ಮಿಕರು ಶತಮಾನಗಳಿಂದ ಹೋರಾಟದ ಮೂಲಕ ಪಡೆದ ಹಕ್ಕುಗಳನ್ನ ಕಾನೂನು ತಿದ್ದುಪಡಿ ಮೂಲಕ ನಾಶ ಮಾಡಲಾಗುತ್ತಿದೆ.ಕಾರ್ಮಿಕ ಇಲಾಖೆ ಕಾರ್ಮಿಕರನ್ನು ರಕ್ಷಿಸುವ ಬದಲು, ಮಾಲೀಕರ ಪರವಾಗಿ ವಕಾಲತ್ತು ವಹಿಸುವ ಸಂಪರ್ಕ ಸಾಧನವಾಗುತ್ತಿದೆ’ ಎಂದು ದೂರಿದರು.</p>.<p>‘ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ, ಶ್ರಮ ಶಕ್ತಿ ನೀತಿಗಳ ವಿರುದ್ದ ಹೋರಾಟ ತೀವ್ರಗೊಳಿಸಬೇಕಾಗಿದೆ’ ಎಂದರು.</p>.<p>ಸಿಐಟಿಯು ರಾಜ್ಯ ಘಟಕದ ಅಧ್ಯಕ್ಷೆ ಎಸ್. ವರಲಕ್ಷ್ಮಿ, ರಾಷ್ಟ್ರೀಯ ಕಾರ್ಯದರ್ಶಿ ಕೆ.ಎನ್. ಉಮೇಶ್, ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ, ರಾಜ್ಯ ಘಟಕದ ಉಪಾಧ್ಯಕ್ಷ ವಿ.ಜೆ.ಕೆ ನಾಯರ್, ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಧರ್ಮೇಶ್ ವೇದಿಕೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>