<p><strong>ಅರಸೀಕೆರೆ:</strong> ಇಲ್ಲಿನ ನಗರಸಭೆ ನೌಕರರು ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ ಗುರುವಾರ ಮುಷ್ಕರ ನಡೆಸಿದರು.</p>.<p> ನಗರಸಭಾ ಕಾರ್ಯಾಲಯದ ಆವರಣದಲ್ಲಿ ಜಮಾಯಿಸಿದ ನೌಕರರು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ರಾಜ್ಯ ಪೌರ ನೌಕರರ ಸಂಘದ ಖಂಜಾಚಿ ಜಮೀಲ್ ಮಾತನಾಡಿ, ವಿವಿಧ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ತಿಳಿಸಲಾಗಿದೆ. ಈಡೇರಿಸದಿದ್ದಲ್ಲಿ ಕರ್ತವ್ಯಕ್ಕೆ ಗೈರಾಗಿ ಅನಿರ್ದಿಷ್ಟವಧಿ ಮುಷ್ಕರ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.</p>.<p>ನಗರಸಭಾ ಆಯುಕ್ತ ಕೃಷ್ಣಮೂರ್ತಿ ಮಾತನಾಡಿ, ರಾಜ್ಯದಾದ್ಯಂತ ಪೌರ ನೌಕರರು ಮುಷ್ಕರ ನಡೆಸುತ್ತಿದ್ದಾರೆ, ಸಾರ್ವಜನಿಕರು ಸಹಕರಿಸಬೇಕು ಎಂದರು.</p>.<p>ನಗರಸಭೆ ಪ್ರಥಮ ದರ್ಜೆ ಸಹಾಯಕಿ ಅನಿತಾ ,ವ್ಯವಸ್ಥಾಪಕರು ಕಲಾವತಿ ,ಎಂ ಜಿನಿಯರ್ಗಳಾದ ರವಿಕುಮಾರ್ , ಸುನೀಲ್ ಕುಮಾರ್ , ಕಂದಾಯ ಅಧಿಕಾರಿ ಮಂಜುನಾಥ್, ರೇವಣಸಿದ್ದಪ್ಪ, ಲಿಂಗರಾಜು , ಸಿಬ್ಬಂದಿ, ಪೌರಕಾರ್ಮಿಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ:</strong> ಇಲ್ಲಿನ ನಗರಸಭೆ ನೌಕರರು ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ ಗುರುವಾರ ಮುಷ್ಕರ ನಡೆಸಿದರು.</p>.<p> ನಗರಸಭಾ ಕಾರ್ಯಾಲಯದ ಆವರಣದಲ್ಲಿ ಜಮಾಯಿಸಿದ ನೌಕರರು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ರಾಜ್ಯ ಪೌರ ನೌಕರರ ಸಂಘದ ಖಂಜಾಚಿ ಜಮೀಲ್ ಮಾತನಾಡಿ, ವಿವಿಧ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ತಿಳಿಸಲಾಗಿದೆ. ಈಡೇರಿಸದಿದ್ದಲ್ಲಿ ಕರ್ತವ್ಯಕ್ಕೆ ಗೈರಾಗಿ ಅನಿರ್ದಿಷ್ಟವಧಿ ಮುಷ್ಕರ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.</p>.<p>ನಗರಸಭಾ ಆಯುಕ್ತ ಕೃಷ್ಣಮೂರ್ತಿ ಮಾತನಾಡಿ, ರಾಜ್ಯದಾದ್ಯಂತ ಪೌರ ನೌಕರರು ಮುಷ್ಕರ ನಡೆಸುತ್ತಿದ್ದಾರೆ, ಸಾರ್ವಜನಿಕರು ಸಹಕರಿಸಬೇಕು ಎಂದರು.</p>.<p>ನಗರಸಭೆ ಪ್ರಥಮ ದರ್ಜೆ ಸಹಾಯಕಿ ಅನಿತಾ ,ವ್ಯವಸ್ಥಾಪಕರು ಕಲಾವತಿ ,ಎಂ ಜಿನಿಯರ್ಗಳಾದ ರವಿಕುಮಾರ್ , ಸುನೀಲ್ ಕುಮಾರ್ , ಕಂದಾಯ ಅಧಿಕಾರಿ ಮಂಜುನಾಥ್, ರೇವಣಸಿದ್ದಪ್ಪ, ಲಿಂಗರಾಜು , ಸಿಬ್ಬಂದಿ, ಪೌರಕಾರ್ಮಿಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>