ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ‌ ಬಾವಿ ಒತ್ತುವರಿ ತೆರವಿಗೆ ಒತ್ತಾಯ: ಡಿ.ಸಿ ಕಚೇರಿ ಎದುರು ಪ್ರತಿಭಟನೆ

Last Updated 1 ಜುಲೈ 2021, 13:21 IST
ಅಕ್ಷರ ಗಾತ್ರ

ಹಾಸನ: ಆಲೂರು ತಾಲ್ಲೂಕು ಕೆಂಚಮ್ಮನ ಹೊಸಕೋಟೆ ಹೋಬಳಿ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿತ್ತಗಳಲೆ ಗ್ರಾಮದ ಸರ್ಕಾರಿ ಬಾವಿಯನ್ನು ಖಾಸಗಿ ವ್ಯಕ್ತಿಗಳುಒತ್ತುವರಿ ಮಾಡಿದ್ದು, ಕೂಡಲೇ ತೆರವುಗೊಳಿಸಿ ಕೊಡುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿಸದಸ್ಯೆ ಅಕ್ಷತಾ ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆನಡೆಸಲಾಯಿತು.

ಸರ್ವೆ ನಂ.66/1 ಸರ್ಕಾರಿ‌ ಜಾಗದಲ್ಲಿರುವ ಬಾವಿಯಿಂದ ಅನೇಕ ‌ಮನೆಗಳಿಗೆಅನುಕೂಲವಾಗುತ್ತದೆ. ಆದರೆ, ಬಾವಿ ಒತ್ತುವರಿ ಮಾಡಿರುವುದರಿಂದ ಕುಡಿಯುವ ನೀರಿಗೆತೊಂದರೆಯಾಗಿದೆ. ಐದು ವರ್ಷಗಳ‌ ಹಿಂದೆ ಒತ್ತುವರಿ ತೆರವುಗೊಳಿಸುವಂತೆ ಕೋರ್ಟ್ ಆದೇಶ ಮಾಡಿದ್ದರೂ ಪಾಲನೆಯಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.

ಒತ್ತುವರಿ ತೆರವುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿಮಾಡಲಾಗಿದೆ. ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದ್ದಾರೆ. ‌ಇದೇ ವ್ಯಕ್ತಿಗಳು ರಸ್ತೆಯನ್ನೂ ಒತ್ತುವರಿ ಮಾಡಿದ್ದಾರೆ. ಆದ್ದರಿಂದ ಪರಿಶೀಲಿಸಿ ಒತ್ತುವರಿಯಾಗಿರುವ ಬಾವಿ ಹಾಗೂ ರಸ್ತೆಯನ್ನು ತೆರವುಗೊಳಿಸಿ ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅವರಿಗೆ ಮನವಿ‌ ಸಲ್ಲಿಸಿದರು.

ಗ್ರಾಮ ಪಂಚಾಯಿತಿ ಸದಸ್ಯೆ ಅಕ್ಷತಾ ಪ್ರೀತಮ್, ಗ್ರಾಮಸ್ಥರಾದ ರಂಜನ್, ಮಂಜುನಾಥ್,ಲೋಹಿತ್, ಚಾಲುಕ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT