ವಲಯ ಅರಣ್ಯಾಧಿಕಾರಿ ಲಕ್ಷ್ಮಿಕಾಂತ್ ಮಾತನಾಡಿ, ‘ಅರಣ್ಯ ಪ್ರದೇಶಗಳ ಒತ್ತುವರಿ ಅಥವಾ ನಾಶದಿಂದ ಕಾಡು ಪ್ರಾಣಿಗಳು ಆಹಾರ ಹುಡುಕಿಕೊಂಡು ಗ್ರಾಮಗಳಿಗೆ ಬರುತ್ತಿವೆ. ಮತ್ತು ಪರಿಸರದಲ್ಲಿ ತಾಪಮಾನ ಹೆಚ್ಚುತ್ತಿದೆ. ಆದ್ದರಿಂದ ಅರಣ್ಯ ಪ್ರದೇಶಗಳ ಅಭಿವೃದ್ಧಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಒತ್ತುವರಿ ತೆರವಿಗೆ ಕ್ರಮ ಕೈಗೊಂಡಿದ್ದೇವೆ’ ಎಂದರು.