<p><strong>ಅರಸೀಕೆರೆ</strong>: ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅರಸೀಕೆರೆಯಲ್ಲಿ ಜೂನ್ 2ರಂದು ಚಾಲನೆ ನೀಡುವರು. ಮೊದಲು ಮೇ31ಕ್ಕೆ ಈ ಕಾರ್ಯಕ್ರಮ ನಿಗದಿಯಾಗಿತ್ತು, ಆದರೆ ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ತಿಳಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದು 2 ವರ್ಷ ಪೂರೈಸಿದ ಸುಸಂದರ್ಭ ಹಾಗೂ ಸತತವಾಗಿ 4 ಬಾರಿ ಶಾಸಕರಾಗಿ ಆಯ್ಕೆ ಮಾಡಿರುವ ಜನತೆಯ ಕಲ್ಯಾಣದ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ನೂತನ ಬಸ್ ನಿಲ್ದಾಣ, ಫುಡ್ ಕೋರ್ಟ್, ಒಳಾಂಗಣ ಕ್ರೀಡಾಂಗಣ, ತಾಲ್ಲೂಕು ಪತ್ರಕರ್ತರ ಭವನ, ಸೌರ ಘಟಕ ಉತ್ಪಾದನೆ ಸೇರಿದಂತೆ ಇನ್ನಿತರ ಅಭಿವೃದ್ದಿ ಕಾರ್ಯಗಳಿಗೆ ಶಂಕುಸ್ಥಾಪನೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.</p>.<p>ಅಧಿಕಾರವಧಿಯಲ್ಲಿ ಶಾಶ್ವತ ಕೆಲಸಗಳು ಮಾಡಿದಾಗ ಮಾತ್ರ ಜನರ ಮನಸ್ಸಿನಲ್ಲಿಯೂ ಉಳಿಯಲು ಸಾಧ್ಯವಾಗಿರುತ್ತದೆ. ತಾಲ್ಲೂಕಿನ ವಿದ್ಯಾರ್ಥಿಗಳ ಅನೂಕೂಲಕ್ಕಾಗಿ ಪ್ರಸಕ್ತ ವರ್ಷದಿಂದಲೇ ಎಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕೋರ್ಸ್ಗಳು ಆರಂಭವಾಗಲಿದ್ದು, ಸೂಕ್ತ ವಸತಿ ನಿಲಯಗಳ ಸೌಲಭ್ಯವಿದ್ದು ಪೋಷಕರು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ</strong>: ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅರಸೀಕೆರೆಯಲ್ಲಿ ಜೂನ್ 2ರಂದು ಚಾಲನೆ ನೀಡುವರು. ಮೊದಲು ಮೇ31ಕ್ಕೆ ಈ ಕಾರ್ಯಕ್ರಮ ನಿಗದಿಯಾಗಿತ್ತು, ಆದರೆ ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ತಿಳಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದು 2 ವರ್ಷ ಪೂರೈಸಿದ ಸುಸಂದರ್ಭ ಹಾಗೂ ಸತತವಾಗಿ 4 ಬಾರಿ ಶಾಸಕರಾಗಿ ಆಯ್ಕೆ ಮಾಡಿರುವ ಜನತೆಯ ಕಲ್ಯಾಣದ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ನೂತನ ಬಸ್ ನಿಲ್ದಾಣ, ಫುಡ್ ಕೋರ್ಟ್, ಒಳಾಂಗಣ ಕ್ರೀಡಾಂಗಣ, ತಾಲ್ಲೂಕು ಪತ್ರಕರ್ತರ ಭವನ, ಸೌರ ಘಟಕ ಉತ್ಪಾದನೆ ಸೇರಿದಂತೆ ಇನ್ನಿತರ ಅಭಿವೃದ್ದಿ ಕಾರ್ಯಗಳಿಗೆ ಶಂಕುಸ್ಥಾಪನೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.</p>.<p>ಅಧಿಕಾರವಧಿಯಲ್ಲಿ ಶಾಶ್ವತ ಕೆಲಸಗಳು ಮಾಡಿದಾಗ ಮಾತ್ರ ಜನರ ಮನಸ್ಸಿನಲ್ಲಿಯೂ ಉಳಿಯಲು ಸಾಧ್ಯವಾಗಿರುತ್ತದೆ. ತಾಲ್ಲೂಕಿನ ವಿದ್ಯಾರ್ಥಿಗಳ ಅನೂಕೂಲಕ್ಕಾಗಿ ಪ್ರಸಕ್ತ ವರ್ಷದಿಂದಲೇ ಎಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕೋರ್ಸ್ಗಳು ಆರಂಭವಾಗಲಿದ್ದು, ಸೂಕ್ತ ವಸತಿ ನಿಲಯಗಳ ಸೌಲಭ್ಯವಿದ್ದು ಪೋಷಕರು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>