<p><strong>ಅರಸೀಕೆರೆ:</strong> ಜುಲೈ 26 ರಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನಗರಕ್ಕೆ ಬರಲಿದ್ದು, ಶಿಕ್ಷಣ ಸಂಸ್ಥೆಗಳ ಉದ್ಘಾಟನೆ, ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವರು ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.</p><p>ಜಾಜೂರು ಗ್ರಾಮದ ಬಳಿ ನಗರಸಭೆ ನಿರ್ಮಿಸಿದ್ದ ಸ್ವಾಗತ ಕಮಾನನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.</p><p>ನಗರದ ಪ್ರವೇಶ ಜಾಗದಲ್ಲಿ ಮಾಲೇಕಲ್ಲು ತಿರುಪತಿಯ ವೆಂಕಟರಮಣ ಸ್ವಾಮಿ, ಮೈಸೂರು – ಹಾಸನ ರಸ್ತೆಯಲ್ಲಿ ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ಹೆಸರಲ್ಲಿ ₹39 ಲಕ್ಷ ವೆಚ್ಚದ ಸ್ವಾಗತ ಹಾಗೂ ವಂದನೆ ಕಮಾನುಗಳು, ₹18 ಲಕ್ಷ ವೆಚ್ಚದಲ್ಲಿ ಗರುಡನಗಿರಿ ರಸ್ತೆಯಲ್ಲಿ ಬೀದಿ ದೀಪಗಳನ್ನು ಅಳವಡಿಸಲಾಗಿದೆ. ₹8 ಕೋಟಿ ವೆಚ್ಚದಲ್ಲಿ ಬಿ.ಎಚ್.ರಸ್ತೆ, ಸಾಯಿನಾಥ ರಸ್ತೆ ಡಾಂಬರೀಕರಣ ಮಾಡಲಾಗಿದೆ ಎಂದು ಹೇಳಿದರು.</p><p>ಎಂಜಿನಿ ಯರಿಂಗ್, ಪಾಲಿ ಟೆಕ್ನಿಕ್ ಕಾಲೇಜು, ತರಕಾರಿ ಮಾರುಕಟ್ಟೆ , ಈಜುಕೊಳ , ಕೋರ್ಟ್ ಸೇರಿದಂತೆ ಹಲವು ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಜುಲೈ 26 ರಂದು ನೆರವೇರಿಸುವರು ಎಂದರು.</p><p>ನಗರಸಭೆ ಅಧ್ಯಕ್ಷ ಎಂ.ಸಮೀವುಲ್ಲಾ ಮಾತನಾಡಿ, ಇನ್ನಷ್ಟು ಸೌಕರ್ಯಗಳನ್ನು ಶಾಸಕರ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂ ದರು. ಪೌರಯುಕ್ತ ಕೃಷ್ಣಮೂರ್ತಿ , ಉಪಾಧ್ಯಕ್ಷ ಮನೋಹರ್ ಮೇಸ್ತ್ರಿ , ಸ್ಥಳೀಯ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬಿ.ಎಸ್.ಅರುಣ್ಕುಮಾರ್ , ನಗರಸಭೆಯ ಸದಸ್ಯರು, ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ:</strong> ಜುಲೈ 26 ರಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನಗರಕ್ಕೆ ಬರಲಿದ್ದು, ಶಿಕ್ಷಣ ಸಂಸ್ಥೆಗಳ ಉದ್ಘಾಟನೆ, ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವರು ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.</p><p>ಜಾಜೂರು ಗ್ರಾಮದ ಬಳಿ ನಗರಸಭೆ ನಿರ್ಮಿಸಿದ್ದ ಸ್ವಾಗತ ಕಮಾನನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.</p><p>ನಗರದ ಪ್ರವೇಶ ಜಾಗದಲ್ಲಿ ಮಾಲೇಕಲ್ಲು ತಿರುಪತಿಯ ವೆಂಕಟರಮಣ ಸ್ವಾಮಿ, ಮೈಸೂರು – ಹಾಸನ ರಸ್ತೆಯಲ್ಲಿ ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ಹೆಸರಲ್ಲಿ ₹39 ಲಕ್ಷ ವೆಚ್ಚದ ಸ್ವಾಗತ ಹಾಗೂ ವಂದನೆ ಕಮಾನುಗಳು, ₹18 ಲಕ್ಷ ವೆಚ್ಚದಲ್ಲಿ ಗರುಡನಗಿರಿ ರಸ್ತೆಯಲ್ಲಿ ಬೀದಿ ದೀಪಗಳನ್ನು ಅಳವಡಿಸಲಾಗಿದೆ. ₹8 ಕೋಟಿ ವೆಚ್ಚದಲ್ಲಿ ಬಿ.ಎಚ್.ರಸ್ತೆ, ಸಾಯಿನಾಥ ರಸ್ತೆ ಡಾಂಬರೀಕರಣ ಮಾಡಲಾಗಿದೆ ಎಂದು ಹೇಳಿದರು.</p><p>ಎಂಜಿನಿ ಯರಿಂಗ್, ಪಾಲಿ ಟೆಕ್ನಿಕ್ ಕಾಲೇಜು, ತರಕಾರಿ ಮಾರುಕಟ್ಟೆ , ಈಜುಕೊಳ , ಕೋರ್ಟ್ ಸೇರಿದಂತೆ ಹಲವು ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಜುಲೈ 26 ರಂದು ನೆರವೇರಿಸುವರು ಎಂದರು.</p><p>ನಗರಸಭೆ ಅಧ್ಯಕ್ಷ ಎಂ.ಸಮೀವುಲ್ಲಾ ಮಾತನಾಡಿ, ಇನ್ನಷ್ಟು ಸೌಕರ್ಯಗಳನ್ನು ಶಾಸಕರ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂ ದರು. ಪೌರಯುಕ್ತ ಕೃಷ್ಣಮೂರ್ತಿ , ಉಪಾಧ್ಯಕ್ಷ ಮನೋಹರ್ ಮೇಸ್ತ್ರಿ , ಸ್ಥಳೀಯ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬಿ.ಎಸ್.ಅರುಣ್ಕುಮಾರ್ , ನಗರಸಭೆಯ ಸದಸ್ಯರು, ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>