<p><strong>ಹಾಸನ:</strong> ನಾಯಕತ್ವಕ್ಕಾಗಿ ‘ಅಂತರ್ಯುದ್ಧ’ ನಡೆಸುತ್ತಲೇ ‘ಉಪಾಹಾರ ಸಭೆ’ಗಳ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಶನಿವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀಡಿರುವ ಹೇಳಿಕೆಗಳು ರಾಜಕೀಯ ವಲಯದಲ್ಲಿ ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿವೆ. </p>.<p>‘ಮಾತು ಕೊಡಲ್ಲ. ಕೊಟ್ಟ ಮೇಲೆ ಮಾಡಿಯೇ ಮಾಡುತ್ತೇವೆ’ ಎಂದು ಸಿದ್ದರಾಮಯ್ಯ ಹೇಳಿದರು.</p>.<p>ಹೇಮಾವತಿ ಜಲಾಶಯದ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಸ್ತಾಪಿಸಿದ್ದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ’ ಎಂದರು. </p>.<p>‘ಹೇಮಾವತಿ ಜಲಾಶಯದ ಬಳಿ ಉದ್ಯಾನ, ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ’ ಎಂದು ಅವರು ತಿಳಿಸಿದರು.</p>.<p><strong>ಹೊಸ ಪರ್ವ ಮಾಡೋಣ– ಡಿಕೆಶಿ</strong></p>.<p>‘ಮುಂದಿನ ದಿನದಲ್ಲಿ ಮತ್ತೆ ಈ ರಾಜ್ಯದಲ್ಲಿ ಹೊಸ ಶಕ್ತಿ ತುಂಬಿ, ಹೊಸ ಬದಲಾವಣೆ, ಹೊಸ ಪರ್ವ ಮಾಡೋಣ’ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.</p>.<p>‘ನಮ್ಮ ಹುಟ್ಟು ನಮ್ಮ ಕೈಯಲ್ಲಿ ಇಲ್ಲ. ಆದರೆ ನಾವು ಮುಟ್ಟಬೇಕಾದ ಗುರಿ ನಮ್ಮ ಕೈಯಲ್ಲೇ ಇದೆ. ನಿಮ್ಮ ವಿಶ್ವಾಸ ಇದೇ ರೀತಿ ಇರಲಿ’ ಎಂದು ಅವರು ಭಾಷಣದ ವೇಳೆ ತಿಳಿಸಿದರು.</p>.<p>ಈ ಕುರಿತು ಸುದ್ದಿಗಾರರಿಗೆ ಸ್ಪಷ್ಟನೆ ನೀಡಿದ ಅವರು, ‘ನಾವು ಜನರ ಪರವಾಗಿ ಕೆಲಸ ಮಾಡಿದಾಗ ಮಾತ್ರವಲ್ಲವೇ ಗುರಿ ಮುಟ್ಟುವುದು? ನಮ್ಮ ಸಾಧನೆಗಳು ಜನರನ್ನು ತಲುಪುತ್ತಿವೆ. ಗ್ಯಾರಂಟಿ ಯೋಜನೆಯಿಂದ ಜನರಿಗೆ ₹ 1.11 ಲಕ್ಷ ಕೋಟಿಯಷ್ಟು ತಲುಪುತ್ತಿದ್ದಂತೆ ಗ್ಯಾರಂಟಿ ಸಮಾವೇಶ ಮಾಡಬೇಕು ಎಂದು ನಾನು ಹಾಗೂ ಕೃಷ್ಣ ಬೈರೇಗೌಡರು ಚರ್ಚೆ ಮಾಡುತ್ತಿದ್ದೆವು. ಹೀಗೆ ನಮ್ಮ ಹೊಸ ಆಲೋಚನೆಗಳಿವೆ. ಅವುಗಳನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ನಾಯಕತ್ವಕ್ಕಾಗಿ ‘ಅಂತರ್ಯುದ್ಧ’ ನಡೆಸುತ್ತಲೇ ‘ಉಪಾಹಾರ ಸಭೆ’ಗಳ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಶನಿವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀಡಿರುವ ಹೇಳಿಕೆಗಳು ರಾಜಕೀಯ ವಲಯದಲ್ಲಿ ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿವೆ. </p>.<p>‘ಮಾತು ಕೊಡಲ್ಲ. ಕೊಟ್ಟ ಮೇಲೆ ಮಾಡಿಯೇ ಮಾಡುತ್ತೇವೆ’ ಎಂದು ಸಿದ್ದರಾಮಯ್ಯ ಹೇಳಿದರು.</p>.<p>ಹೇಮಾವತಿ ಜಲಾಶಯದ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಸ್ತಾಪಿಸಿದ್ದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ’ ಎಂದರು. </p>.<p>‘ಹೇಮಾವತಿ ಜಲಾಶಯದ ಬಳಿ ಉದ್ಯಾನ, ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ’ ಎಂದು ಅವರು ತಿಳಿಸಿದರು.</p>.<p><strong>ಹೊಸ ಪರ್ವ ಮಾಡೋಣ– ಡಿಕೆಶಿ</strong></p>.<p>‘ಮುಂದಿನ ದಿನದಲ್ಲಿ ಮತ್ತೆ ಈ ರಾಜ್ಯದಲ್ಲಿ ಹೊಸ ಶಕ್ತಿ ತುಂಬಿ, ಹೊಸ ಬದಲಾವಣೆ, ಹೊಸ ಪರ್ವ ಮಾಡೋಣ’ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.</p>.<p>‘ನಮ್ಮ ಹುಟ್ಟು ನಮ್ಮ ಕೈಯಲ್ಲಿ ಇಲ್ಲ. ಆದರೆ ನಾವು ಮುಟ್ಟಬೇಕಾದ ಗುರಿ ನಮ್ಮ ಕೈಯಲ್ಲೇ ಇದೆ. ನಿಮ್ಮ ವಿಶ್ವಾಸ ಇದೇ ರೀತಿ ಇರಲಿ’ ಎಂದು ಅವರು ಭಾಷಣದ ವೇಳೆ ತಿಳಿಸಿದರು.</p>.<p>ಈ ಕುರಿತು ಸುದ್ದಿಗಾರರಿಗೆ ಸ್ಪಷ್ಟನೆ ನೀಡಿದ ಅವರು, ‘ನಾವು ಜನರ ಪರವಾಗಿ ಕೆಲಸ ಮಾಡಿದಾಗ ಮಾತ್ರವಲ್ಲವೇ ಗುರಿ ಮುಟ್ಟುವುದು? ನಮ್ಮ ಸಾಧನೆಗಳು ಜನರನ್ನು ತಲುಪುತ್ತಿವೆ. ಗ್ಯಾರಂಟಿ ಯೋಜನೆಯಿಂದ ಜನರಿಗೆ ₹ 1.11 ಲಕ್ಷ ಕೋಟಿಯಷ್ಟು ತಲುಪುತ್ತಿದ್ದಂತೆ ಗ್ಯಾರಂಟಿ ಸಮಾವೇಶ ಮಾಡಬೇಕು ಎಂದು ನಾನು ಹಾಗೂ ಕೃಷ್ಣ ಬೈರೇಗೌಡರು ಚರ್ಚೆ ಮಾಡುತ್ತಿದ್ದೆವು. ಹೀಗೆ ನಮ್ಮ ಹೊಸ ಆಲೋಚನೆಗಳಿವೆ. ಅವುಗಳನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>