<p><strong>ಹಾಸನ</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ.6 ರಂದು ಜಿಲ್ಲೆಗೆ ಭೇಟಿ ನೀಡಲಿದ್ದು, ತಮ್ಮ ಇಲಾಖೆಯಲ್ಲಿ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧವಿರುವ ಕಾಮಗಾರಿ, ಶಂಕುಸ್ಥಾಪನೆ ಕಾಮಗಾರಿಗಳು ಹಾಗೂ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತು ವಿತರಣೆಯ ಸಂಪೂರ್ಣ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ತಮಗೆ ವಹಿಸಿರುವ ಜವಾಬ್ದಾರಿಯನ್ನು ಎಚ್ಚರ ವಹಿಸಿ ನಿರ್ವಹಿಸುವಂತೆ ನಿರ್ದೇಶನ ನೀಡಿದರು.</p>.<p>ಇಲಾಖಾವಾರು ಮಾಹಿತಿ ಸಿದ್ಧಪಡಿಸಿ ನೀಡಬೇಕು. ಜಿಲ್ಲಾ ಪಂಚಾಯಿತಿ ಅಡಿಯಲ್ಲಿ ಬರುವ ಇಲಾಖೆಗಳ ಪಟ್ಟಿ ಸಿದ್ಧಪಡಿಸಿ ನೀಡಬೇಕು. ಆಯಾ ತಾಲ್ಲೂಕು ತಹಶೀಲ್ದಾರರೂ ಮಾಹಿತಿ ನೀಡಬೇಕು. ಮುಂದುವರಿದ ಕಾಮಗಾರಿಗಳಲ್ಲಿ ಶೇ 80 ರಷ್ಟು ಪೂರ್ಣಗೊಂಡಿರುವ ಕಾಮಗಾರಿಗಳ ಬಗ್ಗೆಯೂ ಪಟ್ಟಿ ತಯಾರಿಸಿ ನೀಡುವಂತೆ ತಿಳಿಸಿದರು. </p>.<p>ಸಕಾಲ ಮತ್ತು ಐಪಿಜಿಆರ್ಎಸ್ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಬೇಕು ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ, ಬಾಬು, ಉಪ ವಿಭಾಗಾಧಿಕಾರಿಗಳಾದ ಜಗದೀಶ್ ಗಂಗಣ್ಣನವರ್, ರಾಜೇಶ್, ಮತ್ತಿತರ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ.6 ರಂದು ಜಿಲ್ಲೆಗೆ ಭೇಟಿ ನೀಡಲಿದ್ದು, ತಮ್ಮ ಇಲಾಖೆಯಲ್ಲಿ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧವಿರುವ ಕಾಮಗಾರಿ, ಶಂಕುಸ್ಥಾಪನೆ ಕಾಮಗಾರಿಗಳು ಹಾಗೂ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತು ವಿತರಣೆಯ ಸಂಪೂರ್ಣ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ತಮಗೆ ವಹಿಸಿರುವ ಜವಾಬ್ದಾರಿಯನ್ನು ಎಚ್ಚರ ವಹಿಸಿ ನಿರ್ವಹಿಸುವಂತೆ ನಿರ್ದೇಶನ ನೀಡಿದರು.</p>.<p>ಇಲಾಖಾವಾರು ಮಾಹಿತಿ ಸಿದ್ಧಪಡಿಸಿ ನೀಡಬೇಕು. ಜಿಲ್ಲಾ ಪಂಚಾಯಿತಿ ಅಡಿಯಲ್ಲಿ ಬರುವ ಇಲಾಖೆಗಳ ಪಟ್ಟಿ ಸಿದ್ಧಪಡಿಸಿ ನೀಡಬೇಕು. ಆಯಾ ತಾಲ್ಲೂಕು ತಹಶೀಲ್ದಾರರೂ ಮಾಹಿತಿ ನೀಡಬೇಕು. ಮುಂದುವರಿದ ಕಾಮಗಾರಿಗಳಲ್ಲಿ ಶೇ 80 ರಷ್ಟು ಪೂರ್ಣಗೊಂಡಿರುವ ಕಾಮಗಾರಿಗಳ ಬಗ್ಗೆಯೂ ಪಟ್ಟಿ ತಯಾರಿಸಿ ನೀಡುವಂತೆ ತಿಳಿಸಿದರು. </p>.<p>ಸಕಾಲ ಮತ್ತು ಐಪಿಜಿಆರ್ಎಸ್ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಬೇಕು ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ, ಬಾಬು, ಉಪ ವಿಭಾಗಾಧಿಕಾರಿಗಳಾದ ಜಗದೀಶ್ ಗಂಗಣ್ಣನವರ್, ರಾಜೇಶ್, ಮತ್ತಿತರ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>