‘ರಾಜ್ಯದಲ್ಲಿ ಸಿ. ಎಂ ಹುದ್ದೆ ಖಾಲಿ ಇಲ್ಲ, ನಾವು ಅಣ್ಣ, ತಮ್ಮಂದಿರು ಹೊಡೆದಾಡುವ ಪ್ರಶ್ನೆಯೇ ಇಲ್ಲ’ ಎಂದು ಸ್ಪಷ್ಪಪಡಿಸಿದರು.
ಪ್ರಜ್ವಲ್ ರೇವಣ್ಣ ಅವರ ಸುಳ್ಳು ಅಫಿಡವಿಟ್ ಸಲ್ಲಿಕೆ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ರೇವಣ್ಣ, ‘ಚುನಾವಣಾ ಆಯೋಗದ ನಿರ್ದೇಶನ ಪ್ರಕಾರ ಒಮ್ಮೆ ಚುನಾವಣಾ ಅಧಿಕಾರಿ ನಾಮಪತ್ರ ಅಂಗೀಕರಿಸಿದ ಮೇಲೆ ಅದನ್ನ ತಿರಸ್ಕರಿಸುವ ಅಧಿಕಾರ ಇಲ್ಲ. ಏನಿದ್ದರೂ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು. ಚುನಾವಣಾ ಆಯೋಗ ಯಾವ ಆಧಾರದ ಮೇಲೆ ಹೀಗೆ ಮಾಡುತ್ತಿದೆ ಎಂಬುದು ಗೊತ್ತಿಲ್ಲ. ಆ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ. ಉದ್ದೇಶ ಪೂರ್ವಕವಾಗಿಯೇ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ’ ಬಿಜೆಪಿ ಅಭ್ಯರ್ಥಿ ಎ.ಮಂಜು ವಿರುದ್ಧ ಪರೋಕ್ಷವಾಗಿ ಆಕ್ರೋಶ ವ್ಯಕ್ತಪಡಿಸಿದರು.