ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೌಡರ ನಿವಾಸಕ್ಕೆ ಸಿಎಂ ಭೇಟಿ ಹಿಂದೆ ರಾಜಕೀಯ: ಧ್ರುವನಾರಾಯಣ

Last Updated 4 ಆಗಸ್ಟ್ 2021, 14:07 IST
ಅಕ್ಷರ ಗಾತ್ರ

ಹಾಸನ: ರಾಜಕೀಯ ಉದ್ದೇಶಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರುಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ್ದಾರೆ ಎಂದು ಕೆಪಿಸಿಸಿಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಸವರಾಜಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿರುವುದರಲ್ಲಿ ರಾಜಕೀಯ ಅಡಗಿದ್ದು, ಮುಂದಿನ ರಾಜಕೀಯ ಬೆಳವಣಿಗೆಗೆ ಸಹಕರಿಸಲು ಮನವಿ ಮಾಡಲು ಭೇಟಿ ಮಾಡಿದ್ದರು ಎಂದರು.

‘ಕೇವಲ ಸೌಜನ್ಯದ ಭೇಟಿ ಎಂದು ಹೇಳಿ ಬೊಮ್ಮಾಯಿ ಸಮರ್ಥಿಸಿ ಕೊಂಡಿರುವುದು ಸರಿಯಲ್ಲ. ಸೌಜನ್ಯದ ಭೇಟಿಯಾಗಿದ್ದರೆ ಒಳ್ಳೆಯದು. ದೇವೇಗೌಡರ ಸಲಹೆಯಂತೆ ಉತ್ತಮ ಆಡಳಿತ ನೀಡಲಿ’ ಎಂದರು.

ಬಿಎಸ್‌ಪಿ ಶಾಸಕ ಎನ್. ಮಹೇಶ್ ಅವರು ಬಿಜೆಪಿ ಸೇರುವುದಾಗಿ ಹೇಳಿದ್ದಾರೆ. ಬಿಎಸ್ಪಿಯಿಂದ ಗೆದ್ದು ಈಗ ಅಧಿಕಾರಕ್ಕೆ ಏಕಾಏಕಿ ಬಿಜೆಪಿ ಸೇರುವುದು ಸರಿಯಲ್ಲ. ರಾಜೀನಾಮೆ ನೀಡಿ ನಂತರಸ್ಪರ್ಧಿಸಿ ಗೆಲ್ಲುವ ಮೂಲಕ ಸೇರುವುದು ಸೂಕ್ತ. ಇಷ್ಟು ವರ್ಷದ ಬಳಿಕ ಬಿಎಸ್ ಪಿ ಬಿಟ್ಟು ಈಗಬಿಜೆಪಿ ಸೇರುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT