ಸರ್ಕಾರ ಈ ಮೊದಲು ಆದೇಶದಲ್ಲಿ 45 ದಿನಗಳವರೆಗೆ ನೊಂದಣಿಗೆ ಅವಕಾಶ ಕಲ್ಪಿಸಿರುವುದಾಗಿ ತಿಳಿಸಿತ್ತು.ಈಗ ಕೊಬ್ಬರಿ ಬೆಳೆಗಾರರಿಗೆ ಹೆಚ್ಚು ನಷ್ಟವಾಗಿದೆ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹೋಬಳಿ ಕೇಂದ್ರದಲ್ಲಿ ಸುಮಾರು 2000ಕ್ಕೂ ಹೆಚ್ಚು ರೈತರಿಗೆ ನೋಂದಣಿಗಾಗಿ ಟೋಕನ್ ವಿತರಿಸಲಾಯಿತು, ಆದರೆ 700 ಒಳಗಿನ ಟೋಕನ್ ಪಡೆದ ರೈತರಿಗೆ ಮಾತ್ರ ಅವಕಾಶ ಸಿಕ್ಕಿದೆ. ಇದರಿಂದ ಸಾವಿರಕ್ಕೂ ಹೆಚ್ಚು ರೈತರಿಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.