<p><strong>ಹಾಸನ: </strong>‘ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್ ಅಧಿಕಾರವಧಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಸಿಒಡಿ ತನಿಖೆ ನಡೆಸಬೇಕು’ ಎಂದು ಉಪಾಧ್ಯಕ್ಷ ಎ.ಪಿ.ಸ್ವರೂಪ್ ಆಗ್ರಹಿಸಿದರು.</p>.<p>‘ಕಚೇರಿಯ ಲಿಫ್ಟ್ ಅಳವಡಿಕೆ, ಪ್ರವಾಸ ಭತ್ಯೆಯಲ್ಲಿ ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆದಿದೆ. ಈ ಬಗ್ಗೆ ಮುಖ್ಯ<br />ಕಾರ್ಯನಿರ್ವಾಹಕ ಅಧಿಕಾರಿ ಸರ್ಕಾರಕ್ಕೆ ವರದಿ ನೀಡಿ, ಸಿಒಡಿ ತನಿಖೆ ನಡೆಸಬೇಕು. ಸಾರ್ವಜನಿಕ ತೆರಿಗೆ ಹಣ<br />ಪೋಲಾಗುವುದು ಸರಿಯಲ್ಲ ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘ಅಧ್ಯಕ್ಷರ ವಿವೇಚನಾ ಕೋಟಾದಡಿ ಬಿಡುಗಡೆಯಾದ ಅನುದಾನವನ್ನು ತಮಗೆ ಇಷ್ಟ ಬಂದಂತೆ ಬಳಸಿದ್ದಾರೆ.<br />ವಿಧಾನಸಭಾ ಕ್ಷೇತ್ರಗಳಿಗೆ ತಲಾ ₹10 ಲಕ್ಷ ಹಂಚಿಕೆ ಮಾಡುವ ಕುರಿತು ಶಾಸಕರ ಸಭೆಯಲ್ಲಿ ತೀರ್ಮಾನಿಸಿದ್ದರೂ<br />ಅಧಿಕಾರಿಗಳನ್ನು ಹೆದರಿಸಿ ಅದಕ್ಕೆ ತಡೆಯೊಡ್ಡಿದ್ದಾರೆ. ಕನಿಷ್ಟ ಪ್ರತಿ ಸದಸ್ಯರಿಗೆ ಎರಡು ಲಕ್ಷ ರೂಪಾಯಿ ಅನುದಾನ<br />ನೀಡಬಹುದಿತ್ತು’ ಎಂದು ಅಭಿಪ್ರಾಯಪಟ್ಟರು.</p>.<p>ಸೆ.5 ರ ಶಿಕ್ಷಕರ ದಿನಾಚರಣೆಯಂದು ಸರ್ಕಾರಿ ರಜೆ ಎಂದು ತಿಳಿದಿದ್ದರೂ ಉದ್ದೇಶ ಪೂರ್ವಕವಾಗಿ ಜಿಲ್ಲಾ ಪಂಚಾಯಿತಿ<br />ವಿಶೇಷ ಸಭೆ ದಿನಾಂಕ ನಿಗದಿ ಮಾಡಲಾಗಿದೆ. ಶಿಕ್ಷಕರ ದಿನಾಚರಣೆಯಲ್ಲಿ ಪ್ರತಿ ತಾಲ್ಲೂಕಿನಲ್ಲಿಯೂ ಕಾರ್ಯಕ್ರಮಗಳು<br />ನಡೆಯುತ್ತವೆ. ಶಾಸಕರು, ಸದಸ್ಯರು ಹಾಗೂ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವುದು ಕಡ್ಡಾಯ. ಇದರಿಂದ ಸಭೆಗೆ ಬರಲು ಸಾಧ್ಯವಾಗಿಲ್ಲ’ ಎಂದು ವಿವರಿಸಿದರು.</p>.<p>‘ಅಧ್ಯಕ್ಷರು ಪ್ರತಿ ಬಾರಿ ವಿಶೇಷ ಸಭೆ ಕರೆಯುವ ಬದಲಿಗೆ ಸಾಮಾನ್ಯ ಸಭೆ ನಿಗದಿಪಡಿಸಿದರೆ ಹಾಜರಾಗಲು ಸಿದ್ಧ. ಇಂದಿನ ಸಭೆಗೆ ಕಾಂಗ್ರೆಸ್ನ ಬಹುತೇಕ ಸದಸ್ಯರು ಗೈರಾಗಿದ್ದಾರೆ’ ಎಂದು ಹೇಳಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಲೋಕೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>‘ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್ ಅಧಿಕಾರವಧಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಸಿಒಡಿ ತನಿಖೆ ನಡೆಸಬೇಕು’ ಎಂದು ಉಪಾಧ್ಯಕ್ಷ ಎ.ಪಿ.ಸ್ವರೂಪ್ ಆಗ್ರಹಿಸಿದರು.</p>.<p>‘ಕಚೇರಿಯ ಲಿಫ್ಟ್ ಅಳವಡಿಕೆ, ಪ್ರವಾಸ ಭತ್ಯೆಯಲ್ಲಿ ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆದಿದೆ. ಈ ಬಗ್ಗೆ ಮುಖ್ಯ<br />ಕಾರ್ಯನಿರ್ವಾಹಕ ಅಧಿಕಾರಿ ಸರ್ಕಾರಕ್ಕೆ ವರದಿ ನೀಡಿ, ಸಿಒಡಿ ತನಿಖೆ ನಡೆಸಬೇಕು. ಸಾರ್ವಜನಿಕ ತೆರಿಗೆ ಹಣ<br />ಪೋಲಾಗುವುದು ಸರಿಯಲ್ಲ ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘ಅಧ್ಯಕ್ಷರ ವಿವೇಚನಾ ಕೋಟಾದಡಿ ಬಿಡುಗಡೆಯಾದ ಅನುದಾನವನ್ನು ತಮಗೆ ಇಷ್ಟ ಬಂದಂತೆ ಬಳಸಿದ್ದಾರೆ.<br />ವಿಧಾನಸಭಾ ಕ್ಷೇತ್ರಗಳಿಗೆ ತಲಾ ₹10 ಲಕ್ಷ ಹಂಚಿಕೆ ಮಾಡುವ ಕುರಿತು ಶಾಸಕರ ಸಭೆಯಲ್ಲಿ ತೀರ್ಮಾನಿಸಿದ್ದರೂ<br />ಅಧಿಕಾರಿಗಳನ್ನು ಹೆದರಿಸಿ ಅದಕ್ಕೆ ತಡೆಯೊಡ್ಡಿದ್ದಾರೆ. ಕನಿಷ್ಟ ಪ್ರತಿ ಸದಸ್ಯರಿಗೆ ಎರಡು ಲಕ್ಷ ರೂಪಾಯಿ ಅನುದಾನ<br />ನೀಡಬಹುದಿತ್ತು’ ಎಂದು ಅಭಿಪ್ರಾಯಪಟ್ಟರು.</p>.<p>ಸೆ.5 ರ ಶಿಕ್ಷಕರ ದಿನಾಚರಣೆಯಂದು ಸರ್ಕಾರಿ ರಜೆ ಎಂದು ತಿಳಿದಿದ್ದರೂ ಉದ್ದೇಶ ಪೂರ್ವಕವಾಗಿ ಜಿಲ್ಲಾ ಪಂಚಾಯಿತಿ<br />ವಿಶೇಷ ಸಭೆ ದಿನಾಂಕ ನಿಗದಿ ಮಾಡಲಾಗಿದೆ. ಶಿಕ್ಷಕರ ದಿನಾಚರಣೆಯಲ್ಲಿ ಪ್ರತಿ ತಾಲ್ಲೂಕಿನಲ್ಲಿಯೂ ಕಾರ್ಯಕ್ರಮಗಳು<br />ನಡೆಯುತ್ತವೆ. ಶಾಸಕರು, ಸದಸ್ಯರು ಹಾಗೂ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವುದು ಕಡ್ಡಾಯ. ಇದರಿಂದ ಸಭೆಗೆ ಬರಲು ಸಾಧ್ಯವಾಗಿಲ್ಲ’ ಎಂದು ವಿವರಿಸಿದರು.</p>.<p>‘ಅಧ್ಯಕ್ಷರು ಪ್ರತಿ ಬಾರಿ ವಿಶೇಷ ಸಭೆ ಕರೆಯುವ ಬದಲಿಗೆ ಸಾಮಾನ್ಯ ಸಭೆ ನಿಗದಿಪಡಿಸಿದರೆ ಹಾಜರಾಗಲು ಸಿದ್ಧ. ಇಂದಿನ ಸಭೆಗೆ ಕಾಂಗ್ರೆಸ್ನ ಬಹುತೇಕ ಸದಸ್ಯರು ಗೈರಾಗಿದ್ದಾರೆ’ ಎಂದು ಹೇಳಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಲೋಕೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>