<p><strong>ಸಕಲೇಶಪುರ (ಹಾಸನ ಜಿಲ್ಲೆ):</strong> ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆಯಲ್ಲಿ (ಸಿಸಿಆರ್ಐ) ಕಾಫಿ ಕೌಶಲಾಭಿವೃದ್ಧಿ ಕೇಂದ್ರ ಆರಂಭಿಸಲು ನಿರ್ಧರಿಸಲಾಗಿದೆ. ಇದಕ್ಕೆ ಅಗತ್ಯ ಅನುದಾನ ಒದಗಿಸಲು ಕೇಂದ್ರ ಬದ್ಧವಾಗಿದೆ’ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದರು.</p>.<p>ಕಾಫಿ ಬೆಳೆಗಾರರ ಒಕ್ಕೂಟದಿಂದ ಪಟ್ಟಣದಲ್ಲಿ ಸೋಮವಾರ ಆಯೋಜಿಸಿದ್ದ ಕಾಫಿ ಬೆಳೆಗಾರರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕಾಫಿ ಬೆಳವಣಿಗೆಗೆ ಮುಂದೆ ಬರುವ ನವೋದ್ಯಮಗಳಿಗೆ ಅಗತ್ಯ ಸೌಕರ್ಯ ನೀಡಲು ನಿರ್ಧರಿಸಲಾಗಿದೆ. ಇದರಿಂದ ಕಾಫಿ ಸಂಸ್ಕರಣೆ, ಬ್ರ್ಯಾಂಡ್, ಮಾರಾಟಕ್ಕೆ ಹೆಚ್ಚು ಸಹಕಾರಿ ಆಗಲಿದೆ’ ಎಂದರು.</p>.<p>‘ಸಮಗ್ರ ಕಾಫಿ ಅಭಿವೃದ್ಧಿ ಯೋಜನೆಯು 2011ರಿಂದ ಸ್ಥಗಿತಗೊಂಡಿದ್ದು, ಅದನ್ನು ಮರು ಜಾರಿಗೊಳಿಸಲಾಗಿದೆ. ಈ ಮೂಲಕ ಕಾಫಿ ಗುಣಮಟ್ಟದ ವೃದ್ಧಿ, ಯಾಂತ್ರೀಕರಣಕ್ಕೆ ಒತ್ತು ನೀಡಲಾಗುವುದು. ಕಾಫಿ ಬೆಳೆಗಾರರಿಗೆ ಸಹಾಯಧನ ನೀಡಲು ₹100 ಕೋಟಿ ಹೆಚ್ಚುವರಿ ಅನುದಾನ ನೀಡುವಂತೆ ಕೇಂದ್ರ ಹಣಕಾಸು ಸಚಿವರೊಂದಿಗೆ ಚರ್ಚಿಸಲಾಗುವುದು’ ಎಂದರು.</p>.<p>‘ಬೆಳೆ ಸಾಲವು ಸರ್ಫೇಸಿ ಕಾಯ್ದೆಯಡಿ ಬರುವುದಿಲ್ಲ. ಆದರೆ, ಬಹುತೇಕ ಬೆಳೆಗಾರರು ಜಮೀನು ಅಡಮಾನವಿಟ್ಟು ಸಾಲ ಪಡೆದಿದ್ದಾರೆ. ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಕೆನರಾ ಬ್ಯಾಂಕ್ ಡಿಸೆಂಬರ್ 26 ಹಾಗೂ 27ರಂದು ಕೊಡಗು, ಚಿಕ್ಕಮಗಳೂರು, ಹಾಸನದಲ್ಲಿ ಲೋಕ ಅದಾಲತ್ ಆಯೋಜಿಸಿದೆ’ ಎಂದರು.</p>.<p>‘ಮಾನವ–ವನ್ಯಜೀವಿ ಸಂಘರ್ಷಕ್ಕೆ ಕಡಿವಾಣ ಹಾಕಲು ಬೆಂಗಳೂರಿನ ಐಐಎಸ್ಸಿ ಪ್ರಾಧ್ಯಾಪಕ ಸುರೇಂದ್ರ ವರ್ಮಾ ನೇತೃತ್ವದ ಸಮಿತಿ ನೀಡುವ ವರದಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಕಲೇಶಪುರ (ಹಾಸನ ಜಿಲ್ಲೆ):</strong> ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆಯಲ್ಲಿ (ಸಿಸಿಆರ್ಐ) ಕಾಫಿ ಕೌಶಲಾಭಿವೃದ್ಧಿ ಕೇಂದ್ರ ಆರಂಭಿಸಲು ನಿರ್ಧರಿಸಲಾಗಿದೆ. ಇದಕ್ಕೆ ಅಗತ್ಯ ಅನುದಾನ ಒದಗಿಸಲು ಕೇಂದ್ರ ಬದ್ಧವಾಗಿದೆ’ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದರು.</p>.<p>ಕಾಫಿ ಬೆಳೆಗಾರರ ಒಕ್ಕೂಟದಿಂದ ಪಟ್ಟಣದಲ್ಲಿ ಸೋಮವಾರ ಆಯೋಜಿಸಿದ್ದ ಕಾಫಿ ಬೆಳೆಗಾರರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕಾಫಿ ಬೆಳವಣಿಗೆಗೆ ಮುಂದೆ ಬರುವ ನವೋದ್ಯಮಗಳಿಗೆ ಅಗತ್ಯ ಸೌಕರ್ಯ ನೀಡಲು ನಿರ್ಧರಿಸಲಾಗಿದೆ. ಇದರಿಂದ ಕಾಫಿ ಸಂಸ್ಕರಣೆ, ಬ್ರ್ಯಾಂಡ್, ಮಾರಾಟಕ್ಕೆ ಹೆಚ್ಚು ಸಹಕಾರಿ ಆಗಲಿದೆ’ ಎಂದರು.</p>.<p>‘ಸಮಗ್ರ ಕಾಫಿ ಅಭಿವೃದ್ಧಿ ಯೋಜನೆಯು 2011ರಿಂದ ಸ್ಥಗಿತಗೊಂಡಿದ್ದು, ಅದನ್ನು ಮರು ಜಾರಿಗೊಳಿಸಲಾಗಿದೆ. ಈ ಮೂಲಕ ಕಾಫಿ ಗುಣಮಟ್ಟದ ವೃದ್ಧಿ, ಯಾಂತ್ರೀಕರಣಕ್ಕೆ ಒತ್ತು ನೀಡಲಾಗುವುದು. ಕಾಫಿ ಬೆಳೆಗಾರರಿಗೆ ಸಹಾಯಧನ ನೀಡಲು ₹100 ಕೋಟಿ ಹೆಚ್ಚುವರಿ ಅನುದಾನ ನೀಡುವಂತೆ ಕೇಂದ್ರ ಹಣಕಾಸು ಸಚಿವರೊಂದಿಗೆ ಚರ್ಚಿಸಲಾಗುವುದು’ ಎಂದರು.</p>.<p>‘ಬೆಳೆ ಸಾಲವು ಸರ್ಫೇಸಿ ಕಾಯ್ದೆಯಡಿ ಬರುವುದಿಲ್ಲ. ಆದರೆ, ಬಹುತೇಕ ಬೆಳೆಗಾರರು ಜಮೀನು ಅಡಮಾನವಿಟ್ಟು ಸಾಲ ಪಡೆದಿದ್ದಾರೆ. ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಕೆನರಾ ಬ್ಯಾಂಕ್ ಡಿಸೆಂಬರ್ 26 ಹಾಗೂ 27ರಂದು ಕೊಡಗು, ಚಿಕ್ಕಮಗಳೂರು, ಹಾಸನದಲ್ಲಿ ಲೋಕ ಅದಾಲತ್ ಆಯೋಜಿಸಿದೆ’ ಎಂದರು.</p>.<p>‘ಮಾನವ–ವನ್ಯಜೀವಿ ಸಂಘರ್ಷಕ್ಕೆ ಕಡಿವಾಣ ಹಾಕಲು ಬೆಂಗಳೂರಿನ ಐಐಎಸ್ಸಿ ಪ್ರಾಧ್ಯಾಪಕ ಸುರೇಂದ್ರ ವರ್ಮಾ ನೇತೃತ್ವದ ಸಮಿತಿ ನೀಡುವ ವರದಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>