<p>ಆರಸೀಕೆರೆ: ತಾಲ್ಲೂಕಿನ ಮಾಡಾಳು ಗ್ರಾಮದ ಹಾರನಹಳ್ಳಿ ಕೋಡಿಮಠದ ಲಿಂಗೈಕ್ಯ ಪರಮಪೂಜ್ಯ ಶಿವಲಿಂಗ ಸ್ವಾಮಿಗಳ 138ನೇ ಪುಣ್ಯಸ್ಮರಣೆ ಮೇ 12ರಿಂದ 17ರವರೆಗೆ ಜರುಗಲಿದೆ ಎಂದು ಸ್ವರ್ಣ ಗೌರಮ್ಮ ದೇವಿ ಸೇವಾ ಸಮಿತಿ ಅಧ್ಯಕ್ಷ ಎಂ.ಎಸ್. ನಟರಾಜ್ ತಿಳಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇಶ ವಿದೇಶಗಳಲ್ಲಿ ಕೋಡಿಮಠದ ಸಂಸ್ಕೃತಿ ಹಾಗೂ ವಿಚಾರಧಾರೆಗಳು ಹೆಸರಾಗಿದ್ದು ಲಿಂಗೈಕ್ಯ ಶಿವಲಿಂಗ ಸ್ವಾಮೀಜಿ ಪುಣ್ಯಸ್ಮರಣೆಯನ್ನು ಮೂಲಸ್ಥಾನ ಸ್ವರ್ಣ ಗೌರಮ್ಮ ದೇವಿ ದೇವಾಲಯದ ಆವರಣದಲ್ಲಿ 6 ದಿನ ವಿಶೇಷವಾಗಿ ನಡೆಯಲಿದ್ದು ಸದ್ಭಕ್ತರು ಭಾಗವಹಿಸಬೇಕು’ ಎಂದರು.</p>.<p>ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ನಿರ್ದೇಶನದಂತೆ ಎಲ್ಲ ಕೈಂಕರ್ಯಗಳು ಜರುಗಲಿದ್ದು, ಸಾನ್ನಿಧ್ಯ ವಹಿಸಲಿದ್ದಾರೆ ಹಾಗೂ ಉತ್ತರಾಧಿಕಾರಿ ಚೇತನ್ ಮರಿದೇವರು ಉಪಸ್ಥಿತರಿರುತ್ತಾರೆ. ಪ್ರತಿದಿನ ಸಂಜೆ 7 ಗಂಟೆಗೆ ಶಿವಲಿಂಗ ಸ್ವಾಮೀಜಿ ಪುರಾಣ ಪ್ರವಚನಗಳು ಕಲಾ ಸಾರ್ವಭೌಮ ಕಲ್ಲಿನಾಥ ಶಾಸ್ತ್ರಿಗಳು ನಡೆಸಲಿದ್ದಾರೆ.</p>.<p>‘ಪ್ರವಚನಕ್ಕೂ ಮುನ್ನ ರಾಂಪುರ ನಿರ್ವಾಣ ಸಿದ್ಧೇಶ್ವರ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ಆಗಮಿಸುವ ಭಕ್ತಾದಿಗಳಿಗೆ ದಾಸೋಹ ವ್ಯವಸ್ಥೆ ಇರುತ್ತದೆ’ ಎಂದು ಅವರು ತಿಳಿಸಿದರು.</p>.<p>ಗೌರವಾಧ್ಯಕ್ಷ ಎಸ್.ಮಲ್ಲಿಕಾರ್ಜುನಪ್ಪ, ಮುಖಂಡರಾದ ಕೊಡ್ಲಿ ಬಸವರಾಜ್, ಎಂ.ಸಿ. ನಟರಾಜ್, ಶಿವಲಿಂಗಪ್ಪ, ಚಂದ್ರಶೇಖರ್ ಎಂ.ಎಸ್., ಮರಳೇಗೌಡ ಎಂ.ಜಿ., ಶಿವಣ್ಣ, ಅಶೋಕ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆರಸೀಕೆರೆ: ತಾಲ್ಲೂಕಿನ ಮಾಡಾಳು ಗ್ರಾಮದ ಹಾರನಹಳ್ಳಿ ಕೋಡಿಮಠದ ಲಿಂಗೈಕ್ಯ ಪರಮಪೂಜ್ಯ ಶಿವಲಿಂಗ ಸ್ವಾಮಿಗಳ 138ನೇ ಪುಣ್ಯಸ್ಮರಣೆ ಮೇ 12ರಿಂದ 17ರವರೆಗೆ ಜರುಗಲಿದೆ ಎಂದು ಸ್ವರ್ಣ ಗೌರಮ್ಮ ದೇವಿ ಸೇವಾ ಸಮಿತಿ ಅಧ್ಯಕ್ಷ ಎಂ.ಎಸ್. ನಟರಾಜ್ ತಿಳಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇಶ ವಿದೇಶಗಳಲ್ಲಿ ಕೋಡಿಮಠದ ಸಂಸ್ಕೃತಿ ಹಾಗೂ ವಿಚಾರಧಾರೆಗಳು ಹೆಸರಾಗಿದ್ದು ಲಿಂಗೈಕ್ಯ ಶಿವಲಿಂಗ ಸ್ವಾಮೀಜಿ ಪುಣ್ಯಸ್ಮರಣೆಯನ್ನು ಮೂಲಸ್ಥಾನ ಸ್ವರ್ಣ ಗೌರಮ್ಮ ದೇವಿ ದೇವಾಲಯದ ಆವರಣದಲ್ಲಿ 6 ದಿನ ವಿಶೇಷವಾಗಿ ನಡೆಯಲಿದ್ದು ಸದ್ಭಕ್ತರು ಭಾಗವಹಿಸಬೇಕು’ ಎಂದರು.</p>.<p>ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ನಿರ್ದೇಶನದಂತೆ ಎಲ್ಲ ಕೈಂಕರ್ಯಗಳು ಜರುಗಲಿದ್ದು, ಸಾನ್ನಿಧ್ಯ ವಹಿಸಲಿದ್ದಾರೆ ಹಾಗೂ ಉತ್ತರಾಧಿಕಾರಿ ಚೇತನ್ ಮರಿದೇವರು ಉಪಸ್ಥಿತರಿರುತ್ತಾರೆ. ಪ್ರತಿದಿನ ಸಂಜೆ 7 ಗಂಟೆಗೆ ಶಿವಲಿಂಗ ಸ್ವಾಮೀಜಿ ಪುರಾಣ ಪ್ರವಚನಗಳು ಕಲಾ ಸಾರ್ವಭೌಮ ಕಲ್ಲಿನಾಥ ಶಾಸ್ತ್ರಿಗಳು ನಡೆಸಲಿದ್ದಾರೆ.</p>.<p>‘ಪ್ರವಚನಕ್ಕೂ ಮುನ್ನ ರಾಂಪುರ ನಿರ್ವಾಣ ಸಿದ್ಧೇಶ್ವರ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ಆಗಮಿಸುವ ಭಕ್ತಾದಿಗಳಿಗೆ ದಾಸೋಹ ವ್ಯವಸ್ಥೆ ಇರುತ್ತದೆ’ ಎಂದು ಅವರು ತಿಳಿಸಿದರು.</p>.<p>ಗೌರವಾಧ್ಯಕ್ಷ ಎಸ್.ಮಲ್ಲಿಕಾರ್ಜುನಪ್ಪ, ಮುಖಂಡರಾದ ಕೊಡ್ಲಿ ಬಸವರಾಜ್, ಎಂ.ಸಿ. ನಟರಾಜ್, ಶಿವಲಿಂಗಪ್ಪ, ಚಂದ್ರಶೇಖರ್ ಎಂ.ಎಸ್., ಮರಳೇಗೌಡ ಎಂ.ಜಿ., ಶಿವಣ್ಣ, ಅಶೋಕ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>