ಈ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಅಗ್ನಿಶಾಮಕ ಇಲಾಖೆ, ಲೋಕೋಪಯೋಗಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ವಿದ್ಯುತ್ ಪ್ರಸರಣ ನಿಗಮದ ಅಧಿಕಾರಿಗಳಿಗೆ ಸ್ಥಳ ಪರಿಶೀಲನೆ ನಡೆಸಿ ನಿಯಮಬದ್ದವಾಗಿದ್ದಲ್ಲಿ ನಿರಾಕ್ಷೇಪಣಾ ಪತ್ರ ನೀಡುವಂತೆ ಕೋರಲಾಗಿದ್ದು, ಆದಷ್ಟು ಶೀಘ್ರವಾಗಿ ಒದಗಿಸಿ ಕಾಮಗಾರಿ ತ್ವರಿತವಾಗಿ ನಡೆಸಲು ಸಹಕರಿಸುವಂತೆ ಜಿಲ್ಲಾಧಿಕಾರಿ ಆರ್. ಗಿರೀಶ್ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.