ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ

ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಅಧಿಕಾರಿಗಳಿಗೆ ಸೂಚನೆ
Last Updated 8 ಜನವರಿ 2021, 10:45 IST
ಅಕ್ಷರ ಗಾತ್ರ

ಹಾಸನ: ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಹಾಗೂ ಗುಣಮಟ್ಟ ಕಾಯ್ದುಕೊಂಡು ಪೂರ್ಣಗೊಳಿಸಿ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಇತ್ತೀಚೆಗೆ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕಾಮಗಾರಿ ಆಯ್ದುಕೊಳ್ಳುವಾಗ ಅದರ ಅನುಕೂಲ ಪಡೆಯುವ ಜನಸಂಖ್ಯೆ ಅಗತ್ಯಗಳು ಅವಶ್ಯಕತೆಗಳ ಬಗ್ಗೆ ಗಮನ ಹರಿಸುವುದು ಮುಖ್ಯ ಎಂದರು.

ನಿಯಮ ವ್ಯಾಪ್ತಿಯೊಳಗೆ ಬರುವ ಕಾಮಗಾರಿ ಹಾಗೂ ಸೇವಾ ಕಾರ್ಯಗಳಿಗೆ ಮಾತ್ರ ಅನುದಾನ ವೆಚ್ಚ ಮಾಡಬೇಕು. ಮಾಡಿದ ವೆಚ್ಚಗಳಿಗೆ ಸೂಕ್ತ ದಖಲಾತಿ ಒದಗಿಸಬೇಕು ಎಂದು ಹೇಳಿದರು.

ಅಂಗನವಾಡಿ ನಿರ್ಮಾಣ ಕಾರ್ಯದಲ್ಲಿ ಸಮ ಸ್ವರೂಪ ಇರುವಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಂಜುನಾಥ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್‌ ಮಂಜುನಾಥ್ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT