<p><strong>ಹಾಸನ</strong>: ‘ಮನೆಗೆ ಸೇರಿದ ಕಾಂಪೌಂಡ್ ಅನ್ನು ದೇವರಾಜ್ ಧ್ವಂಸಗೊಳಿಸಿದ್ದಾರೆ’ ಎಂದು ಆರೋಪಿಸಿ ನಟ ಯಶ್ ತಾಯಿ ಪುಷ್ಪಾ ಅವರು ಶನಿವಾರ ಹಾಸನ ಬಡಾವಣೆಯಲ್ಲಿ ದೂರು ನೀಡಿದ್ದು, ಅತಿಕ್ರಮ ಪ್ರವೇಶ, ಕಳ್ಳತನ ಹಾಗೂ ಕೊಲೆ ಬೆದರಿಕೆ ಆರೋಪದಡಿ ಪ್ರಕರಣ ದಾಖಲಾಗಿದೆ.</p>.<p>‘ಇಲ್ಲಿನ ವಿದ್ಯಾನಗರದಲ್ಲಿರುವ ಮನೆಯ ಪಕ್ಕದ ಜಾಗ, ನಮ್ಮ ಸ್ವಂತ ಸ್ವತ್ತು’ ಎಂದು ಪ್ರತಿಪಾದಿಸಿದ ಪುಷ್ಪಾ, ‘ಜಾಗವನ್ನು ಆರು ವರ್ಷಗಳ ಹಿಂದೆ ಖರೀದಿಸಿದ್ದೆವು. ನಗರಸಭೆಯ ಇ-ಖಾತೆಯೂ ನಮ್ಮ ಹೆಸರಲ್ಲಿದ್ದು, ಸಂಪೂರ್ಣ ದಾಖಲೆಗಳಿವೆ. ನ್ಯಾಯಾಲಯದಿಂದ ನೋಟಿಸ್ ಬಂದಿಲ್ಲ’ ಎಂದು ತಿಳಿಸಿದರು.</p>.<p>‘ನಾವು ಇಲ್ಲದ ಸಮಯದಲ್ಲಿ ದೇವರಾಜ್ ಅತಿಕ್ರಮ ಪ್ರವೇಶ ಮಾಡಿ ಬೆಲೆಬಾಳುವ ವಸ್ತುಗಳನ್ನು ನಾಶಪಡಿಸಿದ್ದಾನೆ. ಅವನನ್ನು ಏಕೆ ಬಂಧಿಸಿಲ್ಲ’ ಎಂದು ಪ್ರಶ್ನಿಸಿದರು. ದೇವರಾಜ್ ಅವರನ್ನು ಠಾಣೆಗೆ ಕರೆಸಿದ ಪೊಲೀಸರು ವಿಚಾರಣೆ ನಡೆಸಿದರು.</p>.<p>ಲಕ್ಷಮ್ಮ ಅವರಿಂದ ಜಿಪಿಎ ಪಡೆದಿರುವ ದೇವರಾಜ್ ಅವರು, ಕಳೆದ ಭಾನುವಾರ ಜೆಸಿಬಿಯಿಂದ ಕಾಂಪೌಂಡ್ ಹಾಗೂ ಶೆಡ್ ಅನ್ನು ತೆರವುಗೊಳಿಸಿದ್ದರು. ‘ಕೋರ್ಟ್ ಆದೇಶದಂತೆ ಅತಿಕ್ರಮಣ ತೆರವು ಮಾಡಲಾಗಿದೆ’ ಎಂದು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ‘ಮನೆಗೆ ಸೇರಿದ ಕಾಂಪೌಂಡ್ ಅನ್ನು ದೇವರಾಜ್ ಧ್ವಂಸಗೊಳಿಸಿದ್ದಾರೆ’ ಎಂದು ಆರೋಪಿಸಿ ನಟ ಯಶ್ ತಾಯಿ ಪುಷ್ಪಾ ಅವರು ಶನಿವಾರ ಹಾಸನ ಬಡಾವಣೆಯಲ್ಲಿ ದೂರು ನೀಡಿದ್ದು, ಅತಿಕ್ರಮ ಪ್ರವೇಶ, ಕಳ್ಳತನ ಹಾಗೂ ಕೊಲೆ ಬೆದರಿಕೆ ಆರೋಪದಡಿ ಪ್ರಕರಣ ದಾಖಲಾಗಿದೆ.</p>.<p>‘ಇಲ್ಲಿನ ವಿದ್ಯಾನಗರದಲ್ಲಿರುವ ಮನೆಯ ಪಕ್ಕದ ಜಾಗ, ನಮ್ಮ ಸ್ವಂತ ಸ್ವತ್ತು’ ಎಂದು ಪ್ರತಿಪಾದಿಸಿದ ಪುಷ್ಪಾ, ‘ಜಾಗವನ್ನು ಆರು ವರ್ಷಗಳ ಹಿಂದೆ ಖರೀದಿಸಿದ್ದೆವು. ನಗರಸಭೆಯ ಇ-ಖಾತೆಯೂ ನಮ್ಮ ಹೆಸರಲ್ಲಿದ್ದು, ಸಂಪೂರ್ಣ ದಾಖಲೆಗಳಿವೆ. ನ್ಯಾಯಾಲಯದಿಂದ ನೋಟಿಸ್ ಬಂದಿಲ್ಲ’ ಎಂದು ತಿಳಿಸಿದರು.</p>.<p>‘ನಾವು ಇಲ್ಲದ ಸಮಯದಲ್ಲಿ ದೇವರಾಜ್ ಅತಿಕ್ರಮ ಪ್ರವೇಶ ಮಾಡಿ ಬೆಲೆಬಾಳುವ ವಸ್ತುಗಳನ್ನು ನಾಶಪಡಿಸಿದ್ದಾನೆ. ಅವನನ್ನು ಏಕೆ ಬಂಧಿಸಿಲ್ಲ’ ಎಂದು ಪ್ರಶ್ನಿಸಿದರು. ದೇವರಾಜ್ ಅವರನ್ನು ಠಾಣೆಗೆ ಕರೆಸಿದ ಪೊಲೀಸರು ವಿಚಾರಣೆ ನಡೆಸಿದರು.</p>.<p>ಲಕ್ಷಮ್ಮ ಅವರಿಂದ ಜಿಪಿಎ ಪಡೆದಿರುವ ದೇವರಾಜ್ ಅವರು, ಕಳೆದ ಭಾನುವಾರ ಜೆಸಿಬಿಯಿಂದ ಕಾಂಪೌಂಡ್ ಹಾಗೂ ಶೆಡ್ ಅನ್ನು ತೆರವುಗೊಳಿಸಿದ್ದರು. ‘ಕೋರ್ಟ್ ಆದೇಶದಂತೆ ಅತಿಕ್ರಮಣ ತೆರವು ಮಾಡಲಾಗಿದೆ’ ಎಂದು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>