ಗ್ರಾಮ ಪಂಚಾಯಿತಿ ಚುನಾವಣೆ ಮುಗಿದು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ನಡೆಯುತ್ತಿದೆ. ಆದರೆ, ಹಾಸನ ತಾಲ್ಲೂಕಿನ ತೇಜೂರು, ಹರಳಹಳ್ಳಿ, ಬಿ.ಕಾಟಿಹಳ್ಳಿ, ಸತ್ಯಮಂಗಲ, ಬೂವನಹಳ್ಳಿ, ಕಂದಲಿ ಹಾಗೂ ಹನುಪಂತಪುರ ಗ್ರಾಮ ಪಂಚಾಯಿತಿಗಳನ್ನು ನಗರಸಭೆಗೆ ಸೇರ್ಪಡೆ ಮಾಡಿ ಗೆಜೆಟ್ ನೋಟಿಫಿಕೇಷನ್ ಆಗಿದೆ ಎಂದು ಹೇಳುವ ಸ್ಥಳೀಯ ಶಾಸಕರು, ಆ ಗ್ರಾಮಗಳ ಸ್ಥಿತಿಯನ್ನು ಅವಲೋಕಿಸಿದ್ದಾರೆಯೇ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.