<p><strong>ಹಾಸನ</strong>: ‘ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಶೋಷಿತ ಸಮುದಾಯಗಳ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿಯೇ ಡಿ.5ರಂದು ಸ್ವಾಭಿಮಾನಿ ಸಮಾವೇಶ ಮಾಡಲಾಗುತ್ತಿದೆ. ಗುಣಾತ್ಮಕ ನಾಯಕತ್ವ ಬಲಪಡಿಸುವ ಸಮಾವೇಶ ಇದು’ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.</p>.<p>ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೂ ಈ ವಿಷಯವನ್ನು ತಂದಿದ್ದೇವೆ. ಎಲ್ಲರೂ ಒಪ್ಪಿದ್ದಾರೆ’ ಎಂದು ಸ್ಪಷ್ಟಪಡಿಸಿದರು.</p>.<p>‘ಹಲವಾರು ವರ್ಷಗಳಿಂದ ಹಿಂದುಳಿದ ವರ್ಗಗಳು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿವೆ. ಹಾಗಾಗಿ ಸಮಾವೇಶದಲ್ಲಿ ಕಾಂಗ್ರೆಸ್ನ ಚಿಹ್ನೆ, ಬಾವುಟಗಳೊಂದಿಗೆ ಶೋಷಿತ ಸಮುದಾಯಗಳ ಒಕ್ಕೂಟದ ಚಿಹ್ನೆ, ಬಾವುಟಗಳನ್ನು ಹಾಕುತ್ತೇವೆ’ ಎಂದರು.</p>.<p>‘ಮೈಸೂರಿನಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಹಾಸನದಲ್ಲೂ ಪಕ್ಷಕ್ಕೆ ಶಕ್ತಿ ತುಂಬಲೆಂದು ಆಯೋಜಿಸಲಾಗಿದೆ. ಯಾರ ವಿರುದ್ಧವೂ ತೊಡೆ ತಟ್ಟುವ ಕಾರ್ಯಕ್ರಮವಲ್ಲ’ ಎಂದು ಸಚಿವ ವೆಂಕಟೇಶ್ ಹೇಳಿದರು.</p>.<p>‘ಸಿದ್ದರಾಮಯ್ಯ ಅವರಿಗೆ ಮಸಿ ಬಳಿಯಲು ಪ್ರತಿಪಕ್ಷಗಳು ಪ್ರಯತ್ನಿಸುತ್ತಿದ್ದು, ಪಿತೂರಿ ಮಾಡಿದರೆ ಸುಮ್ಮನಿರುವುದಿಲ್ಲವೆಂಬ ಸಂದೇಶ ನೀಡಲು ಹಮ್ಮಿಕೊಳ್ಳಲಾಗಿದೆ’ ಎಂದು ಸಚಿವ ವೆಂಕಟೇಶ್ ಹಾಗೂ ಗೃಹ ಮಂಡಳಿ ಅಧ್ಯಕ್ಷ, ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು.</p>.<p>‘ಸಂವಿಧಾನ ಮತ್ತು ಜಾತ್ಯತೀತತೆಯ ಪರವಾಗಿ ಹಾಗೂ ದ್ವೇಷ ರಾಜಕಾರಣದ ವಿರುದ್ಧವಾಗಿ ಕಾಂಗ್ರೆಸ್ ಸರ್ಕಾರ ನಿಲ್ಲುತ್ತದೆ ಎಂಬ ಸಂದೇಶ ನೀಡುತ್ತೇವೆ’ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ‘ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಶೋಷಿತ ಸಮುದಾಯಗಳ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿಯೇ ಡಿ.5ರಂದು ಸ್ವಾಭಿಮಾನಿ ಸಮಾವೇಶ ಮಾಡಲಾಗುತ್ತಿದೆ. ಗುಣಾತ್ಮಕ ನಾಯಕತ್ವ ಬಲಪಡಿಸುವ ಸಮಾವೇಶ ಇದು’ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.</p>.<p>ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೂ ಈ ವಿಷಯವನ್ನು ತಂದಿದ್ದೇವೆ. ಎಲ್ಲರೂ ಒಪ್ಪಿದ್ದಾರೆ’ ಎಂದು ಸ್ಪಷ್ಟಪಡಿಸಿದರು.</p>.<p>‘ಹಲವಾರು ವರ್ಷಗಳಿಂದ ಹಿಂದುಳಿದ ವರ್ಗಗಳು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿವೆ. ಹಾಗಾಗಿ ಸಮಾವೇಶದಲ್ಲಿ ಕಾಂಗ್ರೆಸ್ನ ಚಿಹ್ನೆ, ಬಾವುಟಗಳೊಂದಿಗೆ ಶೋಷಿತ ಸಮುದಾಯಗಳ ಒಕ್ಕೂಟದ ಚಿಹ್ನೆ, ಬಾವುಟಗಳನ್ನು ಹಾಕುತ್ತೇವೆ’ ಎಂದರು.</p>.<p>‘ಮೈಸೂರಿನಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಹಾಸನದಲ್ಲೂ ಪಕ್ಷಕ್ಕೆ ಶಕ್ತಿ ತುಂಬಲೆಂದು ಆಯೋಜಿಸಲಾಗಿದೆ. ಯಾರ ವಿರುದ್ಧವೂ ತೊಡೆ ತಟ್ಟುವ ಕಾರ್ಯಕ್ರಮವಲ್ಲ’ ಎಂದು ಸಚಿವ ವೆಂಕಟೇಶ್ ಹೇಳಿದರು.</p>.<p>‘ಸಿದ್ದರಾಮಯ್ಯ ಅವರಿಗೆ ಮಸಿ ಬಳಿಯಲು ಪ್ರತಿಪಕ್ಷಗಳು ಪ್ರಯತ್ನಿಸುತ್ತಿದ್ದು, ಪಿತೂರಿ ಮಾಡಿದರೆ ಸುಮ್ಮನಿರುವುದಿಲ್ಲವೆಂಬ ಸಂದೇಶ ನೀಡಲು ಹಮ್ಮಿಕೊಳ್ಳಲಾಗಿದೆ’ ಎಂದು ಸಚಿವ ವೆಂಕಟೇಶ್ ಹಾಗೂ ಗೃಹ ಮಂಡಳಿ ಅಧ್ಯಕ್ಷ, ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು.</p>.<p>‘ಸಂವಿಧಾನ ಮತ್ತು ಜಾತ್ಯತೀತತೆಯ ಪರವಾಗಿ ಹಾಗೂ ದ್ವೇಷ ರಾಜಕಾರಣದ ವಿರುದ್ಧವಾಗಿ ಕಾಂಗ್ರೆಸ್ ಸರ್ಕಾರ ನಿಲ್ಲುತ್ತದೆ ಎಂಬ ಸಂದೇಶ ನೀಡುತ್ತೇವೆ’ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>