ಜಿಲ್ಲಾ ಬ್ಲಾಕ್ ಮಟ್ಟದ ಸಮಿತಿ ಜೊತೆಗೆ ಮುಂದಿನ ಚುನಾವಣೆ ಸ್ಪರ್ಧೆಯ ಹಿನ್ನೆಲೆ ಅಲ್ಲಲ್ಲಿ ಕಾರ್ಯಾಗಾರ ಏರ್ಪಡಿಸುವ ಮೂಲಕ ಪ್ರಚಾರ ಸಮಿತಿಗೆ ಚಾಲನೆ ನೀಡಲಾಗುತ್ತಿದೆ.
ವಿನಯ್ಕುಮಾರ್ ಸೊರಕೆ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ
ಮತಗಳ್ಳತನ: ಜನರಲ್ಲಿ ಜಾಗೃತಿ
ಈಗಾಗಲೇ ಜನರ ಜಾಗೃತಿಗಾಗಿ ರಾಹುಲ್ ಗಾಂಧಿಯವರು 1800 ಕಿ.ಮೀ. ಪಾದಯಾತ್ರೆ ಮಾಡಿದ್ದಾರೆ. ಮತಗಳ್ಳತನ ವಿಚಾರವಾಗಿ ಪಕ್ಷದಿಂದ ಮತದಾರರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ವಿನಯ್ಕುಮಾರ್ ಸೊರಕೆ ಹೇಳಿದರು. ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 80 ಸಾವಿರ ಹೆಚ್ಚುವರಿ ಮತಗಳು ಸೇರ್ಪಡೆಗೊಂಡಿದ್ದು ಪತ್ತೆಯಾಗಿದೆ. ಈ ಸಂಬಂಧ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ಮಾಡಲಾಗಿದೆ ಎಂದರು.