<p><strong>ಹಾಸನ</strong>: ತೈಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಸಂಸದ ಡಿ.ಕೆ.ಸುರೇಶ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣನೇತೃತ್ವದಲ್ಲಿ ಕಾರ್ಯಕರ್ತರು ಶುಕ್ರವಾರ ಸೈಕಲ್ ಜಾಥಾ ನಡೆಸಿದರು.</p>.<p>ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಬೆಳಿಗ್ಗೆ 11.30 ಗಂಟೆಗೆ ಆರಂಭವಾದ ಜಾಥಾಎನ್ .ಆರ್. ವೃತದ ಮೂಲಕ ಕಸ್ತೂರಿ ಬಾ ರಸ್ತೆಯಲ್ಲಿ ಸಂಚರಿಸಿ ಪ್ರವಾಸಿಮಂದಿರದಲ್ಲಿ ಮುಕ್ತಾಯವಾಯಿತು.</p>.<p>ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕಾರ್ಯಕರ್ತರು ಘೋಷಣೆಕೂಗಿದರು. ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಬೇಕು. ಇಲ್ಲದಿದ್ದರೆಅಧಿಕಾರದಿಂದ ಕೆಳಗಿಳಿಯಬೇಕು ಎಂದು ಒತ್ತಾಯಿಸಿದರು.</p>.<p>ಸಂಸದ ಡಿ.ಕೆ. ಸುರೇಶ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳದುರಾಡಳಿತದಿಂದಾಗಿ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ₹60,ಗ್ಯಾಸ್ ₹440 ಇತ್ತು. ಆದರೆ ಇದೀಗ ಪೆಟ್ರೋಲ್ ₹103 ದಾಟಿದೆಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ರಾಜ್ಯದ ರೈತರು ಸಂಕಷ್ಟಕ್ಕೀಡಾಗಿದ್ದು, ಗೊಬ್ಬರ ಹಾಗೂ ಕೃಷಿಪರಿಕರಗಳ ದರದಲ್ಲಿ ಏರಿಕೆ ಕಂಡಿದೆ ಎಂದು ಆರೋಪಿಸಿದರು.</p>.<p>ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷಜಾವಗಲ್ ಮಂಜುನಾಥ್, ಮುಖಂಡರಾದ ಬನವಾಸೆ ರಂಗಸ್ವಾಮಿ,ಬಿ.ಪಿ.ಮಂಜೇಗೌಡ, ಎಚ್.ಕೆ.ಮಹೇಶ್, ಬಿ.ಶಿವರಾಂ, ಮಾಜಿ ಮೇಯರ್ ಹುಚ್ಚಪ್ಪ ಹಾಗೂ ಮಂಜುನಾಥ್ ಭಂಡಾರಿ ಸೇರಿದಂತೆ ನೂರಾರು ಮಂದಿ ಜಾಥಾದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ತೈಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಸಂಸದ ಡಿ.ಕೆ.ಸುರೇಶ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣನೇತೃತ್ವದಲ್ಲಿ ಕಾರ್ಯಕರ್ತರು ಶುಕ್ರವಾರ ಸೈಕಲ್ ಜಾಥಾ ನಡೆಸಿದರು.</p>.<p>ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಬೆಳಿಗ್ಗೆ 11.30 ಗಂಟೆಗೆ ಆರಂಭವಾದ ಜಾಥಾಎನ್ .ಆರ್. ವೃತದ ಮೂಲಕ ಕಸ್ತೂರಿ ಬಾ ರಸ್ತೆಯಲ್ಲಿ ಸಂಚರಿಸಿ ಪ್ರವಾಸಿಮಂದಿರದಲ್ಲಿ ಮುಕ್ತಾಯವಾಯಿತು.</p>.<p>ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕಾರ್ಯಕರ್ತರು ಘೋಷಣೆಕೂಗಿದರು. ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಬೇಕು. ಇಲ್ಲದಿದ್ದರೆಅಧಿಕಾರದಿಂದ ಕೆಳಗಿಳಿಯಬೇಕು ಎಂದು ಒತ್ತಾಯಿಸಿದರು.</p>.<p>ಸಂಸದ ಡಿ.ಕೆ. ಸುರೇಶ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳದುರಾಡಳಿತದಿಂದಾಗಿ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ₹60,ಗ್ಯಾಸ್ ₹440 ಇತ್ತು. ಆದರೆ ಇದೀಗ ಪೆಟ್ರೋಲ್ ₹103 ದಾಟಿದೆಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ರಾಜ್ಯದ ರೈತರು ಸಂಕಷ್ಟಕ್ಕೀಡಾಗಿದ್ದು, ಗೊಬ್ಬರ ಹಾಗೂ ಕೃಷಿಪರಿಕರಗಳ ದರದಲ್ಲಿ ಏರಿಕೆ ಕಂಡಿದೆ ಎಂದು ಆರೋಪಿಸಿದರು.</p>.<p>ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷಜಾವಗಲ್ ಮಂಜುನಾಥ್, ಮುಖಂಡರಾದ ಬನವಾಸೆ ರಂಗಸ್ವಾಮಿ,ಬಿ.ಪಿ.ಮಂಜೇಗೌಡ, ಎಚ್.ಕೆ.ಮಹೇಶ್, ಬಿ.ಶಿವರಾಂ, ಮಾಜಿ ಮೇಯರ್ ಹುಚ್ಚಪ್ಪ ಹಾಗೂ ಮಂಜುನಾಥ್ ಭಂಡಾರಿ ಸೇರಿದಂತೆ ನೂರಾರು ಮಂದಿ ಜಾಥಾದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>