ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಸೈಕಲ್ ಜಾಥಾ

Last Updated 9 ಜುಲೈ 2021, 13:28 IST
ಅಕ್ಷರ ಗಾತ್ರ

ಹಾಸನ: ತೈಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಸಂಸದ ಡಿ.ಕೆ.ಸುರೇಶ್‌ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣನೇತೃತ್ವದಲ್ಲಿ ಕಾರ್ಯಕರ್ತರು ಶುಕ್ರವಾರ ಸೈಕಲ್ ಜಾಥಾ ನಡೆಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಬೆಳಿಗ್ಗೆ 11.30 ಗಂಟೆಗೆ ಆರಂಭವಾದ ಜಾಥಾಎನ್ .ಆರ್. ವೃತದ ಮೂಲಕ ಕಸ್ತೂರಿ ಬಾ ರಸ್ತೆಯಲ್ಲಿ ಸಂಚರಿಸಿ ಪ್ರವಾಸಿಮಂದಿರದಲ್ಲಿ ಮುಕ್ತಾಯವಾಯಿತು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕಾರ್ಯಕರ್ತರು ಘೋಷಣೆಕೂಗಿದರು. ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಬೇಕು. ಇಲ್ಲದಿದ್ದರೆಅಧಿಕಾರದಿಂದ ಕೆಳಗಿಳಿಯಬೇಕು ಎಂದು ಒತ್ತಾಯಿಸಿದರು.

ಸಂಸದ ಡಿ.ಕೆ. ಸುರೇಶ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳದುರಾಡಳಿತದಿಂದಾಗಿ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ₹60,ಗ್ಯಾಸ್ ₹440 ಇತ್ತು. ಆದರೆ ಇದೀಗ ಪೆಟ್ರೋಲ್ ₹103 ದಾಟಿದೆಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ರೈತರು ಸಂಕಷ್ಟಕ್ಕೀಡಾಗಿದ್ದು, ಗೊಬ್ಬರ ಹಾಗೂ ಕೃಷಿಪರಿಕರಗಳ ದರದಲ್ಲಿ ಏರಿಕೆ ಕಂಡಿದೆ ಎಂದು ಆರೋಪಿಸಿದರು.

ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷಜಾವಗಲ್‌ ಮಂಜುನಾಥ್‌, ಮುಖಂಡರಾದ ಬನವಾಸೆ ರಂಗಸ್ವಾಮಿ,ಬಿ.ಪಿ.ಮಂಜೇಗೌಡ, ಎಚ್‌.ಕೆ.ಮಹೇಶ್‌, ಬಿ.ಶಿವರಾಂ, ಮಾಜಿ ಮೇಯರ್ ಹುಚ್ಚಪ್ಪ ಹಾಗೂ ಮಂಜುನಾಥ್ ಭಂಡಾರಿ ಸೇರಿದಂತೆ ನೂರಾರು ಮಂದಿ ಜಾಥಾದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT