<p><strong>ಹಾಸನ</strong>: ‘ಮೂರು ರಾಜ್ಯಗಳಲ್ಲಷ್ಟೇ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದೆ. ಇಲ್ಲಿಂದ ಇತರೆ ರಾಜ್ಯಗಳ ಚುನಾವಣೆಗೆ ಹಣ ಹರಿಸಲಾಗುತ್ತಿದೆ’ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ದೂರಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಅಬಕಾರಿ ಇಲಾಖೆಯಲ್ಲಿ ನಡೆದಿರುವ ₹6 ಸಾವಿರ ಕೋಟಿ ಹಗರಣದಿಂದ ಸಂಕಷ್ಟಕ್ಕೆ ಸಿಲುಕಿದ್ದರೂ ಅಬಕಾರಿ ಸಚಿವರ ರಾಜೀನಾಮೆ ಪಡೆಯಲು ಸರ್ಕಾರ ಹಿಂದೇಟು ಹಾಕುತ್ತಿದೆ. ರಾಜೀನಾಮೆ ಪಡೆದರೆ ಆರೋಪ ಸಾಬೀತಾಗಲಿದೆ ಎಂಬ ಭಯ ಸರ್ಕಾರದ್ದು’ ಎಂದರು. </p>.<p>‘ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಪಾವತಿಸಿಲ್ಲ. ₹5 ಸಾವಿರ ಕೋಟಿ ಎಲ್ಲಿಗೆ ಹೋಯಿತು ಎಂಬುದಕ್ಕೆ ಸ್ಪಷ್ಟತೆ ಇಲ್ಲ. ಗೃಹಲಕ್ಷ್ಮಿಯರಿಗೆ ಕೊಡಬೇಕಾದ ಹಣ ಹೋಗಿದ್ದು ಬೆಳಗಾವಿ ಲಕ್ಷ್ಮಿಗೆ’ ಎಂದು ಟೀಕಿಸಿದರು. </p>.<p>‘ವಿಬಿ ರಾಮ್ ಜಿ ಯೋಜನೆ ವಿರುದ್ಧ ನಿರ್ಣಯ ಕೈಗೊಳ್ಳಲು ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನವನ್ನು ಕರೆದಿದ್ದು, ಸಾರ್ವಜನಿಕರ ₹30-40 ಕೋಟಿ ವೆಚ್ಚವಾಗಿದೆ. ಅದನ್ನು ಬಡವರಿಗೆ ನೀಡಬಹುದಿತ್ತು. ಅಧಿವೇಶನಕ್ಕೆ ರಾಜ್ಯಪಾಲರನ್ನು ಕರೆದು ಅವಮಾನಿಸಲಾಗಿದೆ’ ಎಂದು ದೂರಿದರು.</p>.<p>‘ಹಿಂದಿನ ಮತ್ತು ಇಂದಿನ ಸಿದ್ದರಾಮಯ್ಯ ನಡುವೆ ವ್ಯತ್ಯಾಸವಿದೆ. ಕಾಂಗ್ರೆಸ್ ನೆಲಕಚ್ಚುತ್ತಿದೆ. ಈಗ ಚುನಾವಣೆ ನಡೆದರೂ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಕೆಲ ಎಡಪಂಥೀಯ ಸಂಘಟನೆಗಳೊಂದಿಗೆ ಒಪ್ಪಂದ ಮಾಡಿಕೊಂಡು ರಾಜಕೀಯ ಲಾಭ ಪಡೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ’ ಎಂದು ಟೀಕಿಸಿದರು.</p>.<p>‘2028ರಲ್ಲಿ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗುತ್ತಾರೆ’ ಎಂಬ ನಿಖಿಲ್ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಜೆಡಿಎಸ್ 113 ಸ್ಥಾನ ಗೆದ್ದರೆ ಯಾರು ಬೇಕಾದರೂ ಸಿಎಂ ಆಗಬಹುದು. ಅದನ್ನು ತಡೆಯಲು ನಾವು ಯಾರು? ಅದೇ ರೀತಿ ನಾವು 113 ಗೆದ್ದರೆ ನಮ್ಮವರೇ ಸಿಎಂ ಆಗುತ್ತಾರೆ’ ಎಂದರು.</p>.<p>‘ಬಿಜೆಪಿ–ಜೆಡಿಎಸ್ ಮೈತ್ರಿಗೆ ಸಂಬಂಧಿಸಿ ಕೇಂದ್ರ ನಾಯಕರೇ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ’ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ‘ಮೂರು ರಾಜ್ಯಗಳಲ್ಲಷ್ಟೇ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದೆ. ಇಲ್ಲಿಂದ ಇತರೆ ರಾಜ್ಯಗಳ ಚುನಾವಣೆಗೆ ಹಣ ಹರಿಸಲಾಗುತ್ತಿದೆ’ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ದೂರಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಅಬಕಾರಿ ಇಲಾಖೆಯಲ್ಲಿ ನಡೆದಿರುವ ₹6 ಸಾವಿರ ಕೋಟಿ ಹಗರಣದಿಂದ ಸಂಕಷ್ಟಕ್ಕೆ ಸಿಲುಕಿದ್ದರೂ ಅಬಕಾರಿ ಸಚಿವರ ರಾಜೀನಾಮೆ ಪಡೆಯಲು ಸರ್ಕಾರ ಹಿಂದೇಟು ಹಾಕುತ್ತಿದೆ. ರಾಜೀನಾಮೆ ಪಡೆದರೆ ಆರೋಪ ಸಾಬೀತಾಗಲಿದೆ ಎಂಬ ಭಯ ಸರ್ಕಾರದ್ದು’ ಎಂದರು. </p>.<p>‘ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಪಾವತಿಸಿಲ್ಲ. ₹5 ಸಾವಿರ ಕೋಟಿ ಎಲ್ಲಿಗೆ ಹೋಯಿತು ಎಂಬುದಕ್ಕೆ ಸ್ಪಷ್ಟತೆ ಇಲ್ಲ. ಗೃಹಲಕ್ಷ್ಮಿಯರಿಗೆ ಕೊಡಬೇಕಾದ ಹಣ ಹೋಗಿದ್ದು ಬೆಳಗಾವಿ ಲಕ್ಷ್ಮಿಗೆ’ ಎಂದು ಟೀಕಿಸಿದರು. </p>.<p>‘ವಿಬಿ ರಾಮ್ ಜಿ ಯೋಜನೆ ವಿರುದ್ಧ ನಿರ್ಣಯ ಕೈಗೊಳ್ಳಲು ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನವನ್ನು ಕರೆದಿದ್ದು, ಸಾರ್ವಜನಿಕರ ₹30-40 ಕೋಟಿ ವೆಚ್ಚವಾಗಿದೆ. ಅದನ್ನು ಬಡವರಿಗೆ ನೀಡಬಹುದಿತ್ತು. ಅಧಿವೇಶನಕ್ಕೆ ರಾಜ್ಯಪಾಲರನ್ನು ಕರೆದು ಅವಮಾನಿಸಲಾಗಿದೆ’ ಎಂದು ದೂರಿದರು.</p>.<p>‘ಹಿಂದಿನ ಮತ್ತು ಇಂದಿನ ಸಿದ್ದರಾಮಯ್ಯ ನಡುವೆ ವ್ಯತ್ಯಾಸವಿದೆ. ಕಾಂಗ್ರೆಸ್ ನೆಲಕಚ್ಚುತ್ತಿದೆ. ಈಗ ಚುನಾವಣೆ ನಡೆದರೂ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಕೆಲ ಎಡಪಂಥೀಯ ಸಂಘಟನೆಗಳೊಂದಿಗೆ ಒಪ್ಪಂದ ಮಾಡಿಕೊಂಡು ರಾಜಕೀಯ ಲಾಭ ಪಡೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ’ ಎಂದು ಟೀಕಿಸಿದರು.</p>.<p>‘2028ರಲ್ಲಿ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗುತ್ತಾರೆ’ ಎಂಬ ನಿಖಿಲ್ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಜೆಡಿಎಸ್ 113 ಸ್ಥಾನ ಗೆದ್ದರೆ ಯಾರು ಬೇಕಾದರೂ ಸಿಎಂ ಆಗಬಹುದು. ಅದನ್ನು ತಡೆಯಲು ನಾವು ಯಾರು? ಅದೇ ರೀತಿ ನಾವು 113 ಗೆದ್ದರೆ ನಮ್ಮವರೇ ಸಿಎಂ ಆಗುತ್ತಾರೆ’ ಎಂದರು.</p>.<p>‘ಬಿಜೆಪಿ–ಜೆಡಿಎಸ್ ಮೈತ್ರಿಗೆ ಸಂಬಂಧಿಸಿ ಕೇಂದ್ರ ನಾಯಕರೇ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ’ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>