<p><strong>ಹಾಸನ: </strong>‘ರಾಮನಗರದಲ್ಲಿ ಸಚಿವರು ಮತ್ತು ಸಂಸದರ ನಡುವೆ ನಡೆದ ಗಲಾಟೆ ಮುಂದಿಟ್ಟುಕೊಂಡು ಅಂಬೇಡ್ಕರ್ಗೆ ಅಪಮಾನ ಮಾಡಿದ್ದಾರೆ ಎಂದು ಸ್ಥಳೀಯ ಕ್ಷೇತ್ರದಶಾಸಕ ಪ್ರೀತಂ ಗೌಡ ಅವರು ಸುಳ್ಳು ಹೇಳಿಕೆ ನೀಡುವ ಮೂಲಕ ಪರಿಶಿಷ್ಟರನ್ನುದಾರಿ ತಪ್ಪಿಸುತ್ತಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ಬನವಾಸೆ ರಂಗಸ್ವಾಮಿ ಆರೋಪಿಸಿದರು.</p>.<p>‘ಸಚಿವ ಮತ್ತು ಸಂಸದರ ಗಲಾಟೆ ಬಳಸಿಕೊಂಡು ಕೀಳು ಮಟ್ಟದ ರಾಜಕಾರಣ ಮಾಡಲುಶಾಸಕರು ಪರಿಶಿಷ್ಟರನ್ನು ಬಳಸಿಕೊಳ್ಳುತ್ತಿದ್ದಾರೆ. ಶಾಸಕರಿಗೆ ಪರಿಶಿಷ್ಟರು ಮತ್ತು ಮುಸ್ಲಿಂರಮೇಲೆ ಪ್ರೀತಿ ಇದ್ದರೆ ಅವರ ಬಡಾವಣೆಯಲ್ಲಿರುವ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲಿ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಸವಾಲು ಹಾಕಿದರು.</p>.<p>‘ಶಾಸಕರು ಕ್ಷೇತ್ರದ ಅಭಿವೃದ್ಧಿ ಮರೆತ್ತಿದ್ದಾರೆ. ಜಿಲ್ಲೆಯ ಯಾವುದೇ ಇಲಾಖೆಯಲ್ಲಿ ಪರಿಶಿಷ್ಟರು ಅಥವಾ ಮುಸ್ಲಿಂ ಸಮುದಾಯದ ಉನ್ನತ ಮಟ್ಟದ ಅಧಿಕಾರಿಗಳಿಲ್ಲ. ಇದು ಶಾಸಕರ ದಲಿತ ಹಾಗೂಅಲ್ಪಸಂಖ್ಯಾತ ವಿರೋಧಿ ನಡೆ ಎಂದು ಸ್ಪಷ್ಟವಾಗಿ ತಿಳಿಯುತ್ತದೆ’ ಎಂದು ಹೇಳಿದರು.</p>.<p>‘ಬಿಜೆಪಿ ಸರ್ಕಾರದಲ್ಲಿ ಮೀಸಲಾತಿ ಸೇರಿದಂತೆ ಅನೇಕ ರೀತಿಯಲ್ಲಿ ಅಲ್ಪಸಂಖ್ಯಾತಸಮುದಾಯಕ್ಕೆ ಅನ್ಯಾಯ ಮಾಡಲಾಗುತ್ತಿದೆ. ಈ ಜನರಿಗೆ ಸಲ್ಲಬೇಕಾಗಿದ್ದ ಅನೇಕರೀತಿಯ ಪರಿಹಾರವನ್ನು ಈವರೆಗೂ ನೀಡಿಲ್ಲ. ಅಶ್ವತ್ಥನಾರಾಯಣ ಅವರನ್ನು ಒಲೈಕೆಮಾಡಲು ಪ್ರತಿಭಟನೆ ಮಾಡುತ್ತಿದ್ದಾರೆ. ಇವರ ರಾಜಕೀಯ ನಿಷ್ಠೆ ಯಾರ ಕಡೆ ಎಂಬುದನ್ನು ಬಹಿರಂಗ ಪಡಿಸಲಿ’ ಎಂದುಆಗ್ರಹಿಸಿದರು.</p>.<p>‘ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಡಿ.ಕೆ.ಶಿವಕುಮಾರ್ ಅವರ ಕುಟುಂಬವನ್ನು ಬೈದುಕೊಂಡು ತಿರುಗಾಡಿದರೆ ರಾಷ್ಟ್ರ ಮಟ್ಟದ ನಾಯಕನಾಗುತ್ತೇನೆ ಎಂಬ ಭ್ರಮೆಯಲ್ಲಿಶಾಸಕರಿದ್ದಾರೆ. ರಾಮನಗರವನ್ನು ಡಿಕೆಶಿ ಅವರು ಜಿಪಿಎ ಬರೆಸಿಕೊಂಡಿಲ್ಲ, ಅದೇ ರೀತಿಹಾಸನವನ್ನು ಪ್ರೀತಂಗೆ ಜಿಪಿಎ ಬರೆದುಕೊಟ್ಟಿಲ್ಲ’ ಎಂದರು.</p>.<p>‘ರಾಮನಗರ ಘಟನೆಯನ್ನು ದೊಡ್ಡ ನಾಯಕರು ನೋಡಿಕೊಳ್ಳುತ್ತಾರೆ. ಹಾಸನದಲ್ಲಿಯಾವುದೇ ಅಭಿವೃದ್ಧಿ ಕೆಲಸ ಮಾಡದ ಶಾಸಕರು, ಈ ವಿಚಾರದಲ್ಲಿ ಮೂಗುತೂರಿಸುವುದು ಏಕೆ’ ಎಂದು ಪ್ರಶ್ನಿಸಿದರು.</p>.<p>ಗೋಷ್ಠಿಯಲ್ಲಿ ಮುಖಂಡರಾದ ಸಮೀರ್, ರವಿಕುಮಾರ್, ಕುಮಾರ್ ದಿನೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>‘ರಾಮನಗರದಲ್ಲಿ ಸಚಿವರು ಮತ್ತು ಸಂಸದರ ನಡುವೆ ನಡೆದ ಗಲಾಟೆ ಮುಂದಿಟ್ಟುಕೊಂಡು ಅಂಬೇಡ್ಕರ್ಗೆ ಅಪಮಾನ ಮಾಡಿದ್ದಾರೆ ಎಂದು ಸ್ಥಳೀಯ ಕ್ಷೇತ್ರದಶಾಸಕ ಪ್ರೀತಂ ಗೌಡ ಅವರು ಸುಳ್ಳು ಹೇಳಿಕೆ ನೀಡುವ ಮೂಲಕ ಪರಿಶಿಷ್ಟರನ್ನುದಾರಿ ತಪ್ಪಿಸುತ್ತಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ಬನವಾಸೆ ರಂಗಸ್ವಾಮಿ ಆರೋಪಿಸಿದರು.</p>.<p>‘ಸಚಿವ ಮತ್ತು ಸಂಸದರ ಗಲಾಟೆ ಬಳಸಿಕೊಂಡು ಕೀಳು ಮಟ್ಟದ ರಾಜಕಾರಣ ಮಾಡಲುಶಾಸಕರು ಪರಿಶಿಷ್ಟರನ್ನು ಬಳಸಿಕೊಳ್ಳುತ್ತಿದ್ದಾರೆ. ಶಾಸಕರಿಗೆ ಪರಿಶಿಷ್ಟರು ಮತ್ತು ಮುಸ್ಲಿಂರಮೇಲೆ ಪ್ರೀತಿ ಇದ್ದರೆ ಅವರ ಬಡಾವಣೆಯಲ್ಲಿರುವ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲಿ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಸವಾಲು ಹಾಕಿದರು.</p>.<p>‘ಶಾಸಕರು ಕ್ಷೇತ್ರದ ಅಭಿವೃದ್ಧಿ ಮರೆತ್ತಿದ್ದಾರೆ. ಜಿಲ್ಲೆಯ ಯಾವುದೇ ಇಲಾಖೆಯಲ್ಲಿ ಪರಿಶಿಷ್ಟರು ಅಥವಾ ಮುಸ್ಲಿಂ ಸಮುದಾಯದ ಉನ್ನತ ಮಟ್ಟದ ಅಧಿಕಾರಿಗಳಿಲ್ಲ. ಇದು ಶಾಸಕರ ದಲಿತ ಹಾಗೂಅಲ್ಪಸಂಖ್ಯಾತ ವಿರೋಧಿ ನಡೆ ಎಂದು ಸ್ಪಷ್ಟವಾಗಿ ತಿಳಿಯುತ್ತದೆ’ ಎಂದು ಹೇಳಿದರು.</p>.<p>‘ಬಿಜೆಪಿ ಸರ್ಕಾರದಲ್ಲಿ ಮೀಸಲಾತಿ ಸೇರಿದಂತೆ ಅನೇಕ ರೀತಿಯಲ್ಲಿ ಅಲ್ಪಸಂಖ್ಯಾತಸಮುದಾಯಕ್ಕೆ ಅನ್ಯಾಯ ಮಾಡಲಾಗುತ್ತಿದೆ. ಈ ಜನರಿಗೆ ಸಲ್ಲಬೇಕಾಗಿದ್ದ ಅನೇಕರೀತಿಯ ಪರಿಹಾರವನ್ನು ಈವರೆಗೂ ನೀಡಿಲ್ಲ. ಅಶ್ವತ್ಥನಾರಾಯಣ ಅವರನ್ನು ಒಲೈಕೆಮಾಡಲು ಪ್ರತಿಭಟನೆ ಮಾಡುತ್ತಿದ್ದಾರೆ. ಇವರ ರಾಜಕೀಯ ನಿಷ್ಠೆ ಯಾರ ಕಡೆ ಎಂಬುದನ್ನು ಬಹಿರಂಗ ಪಡಿಸಲಿ’ ಎಂದುಆಗ್ರಹಿಸಿದರು.</p>.<p>‘ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಡಿ.ಕೆ.ಶಿವಕುಮಾರ್ ಅವರ ಕುಟುಂಬವನ್ನು ಬೈದುಕೊಂಡು ತಿರುಗಾಡಿದರೆ ರಾಷ್ಟ್ರ ಮಟ್ಟದ ನಾಯಕನಾಗುತ್ತೇನೆ ಎಂಬ ಭ್ರಮೆಯಲ್ಲಿಶಾಸಕರಿದ್ದಾರೆ. ರಾಮನಗರವನ್ನು ಡಿಕೆಶಿ ಅವರು ಜಿಪಿಎ ಬರೆಸಿಕೊಂಡಿಲ್ಲ, ಅದೇ ರೀತಿಹಾಸನವನ್ನು ಪ್ರೀತಂಗೆ ಜಿಪಿಎ ಬರೆದುಕೊಟ್ಟಿಲ್ಲ’ ಎಂದರು.</p>.<p>‘ರಾಮನಗರ ಘಟನೆಯನ್ನು ದೊಡ್ಡ ನಾಯಕರು ನೋಡಿಕೊಳ್ಳುತ್ತಾರೆ. ಹಾಸನದಲ್ಲಿಯಾವುದೇ ಅಭಿವೃದ್ಧಿ ಕೆಲಸ ಮಾಡದ ಶಾಸಕರು, ಈ ವಿಚಾರದಲ್ಲಿ ಮೂಗುತೂರಿಸುವುದು ಏಕೆ’ ಎಂದು ಪ್ರಶ್ನಿಸಿದರು.</p>.<p>ಗೋಷ್ಠಿಯಲ್ಲಿ ಮುಖಂಡರಾದ ಸಮೀರ್, ರವಿಕುಮಾರ್, ಕುಮಾರ್ ದಿನೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>