'ಏಕೆ ಕಮಲದ ಹೂ ಹಾಕಿದ್ದೀರಿ? ತೆಗೆಯಿರಿ’ ಎಂದು ಶಿಕ್ಷಕಿ ವಿರುದ್ಧ ಶಾಸಕ ಶಿವಲಿಂಗೇಗೌಡ ಸಿಟ್ಟಿಗೆದ್ದರು. ‘ಅದು ರಾಷ್ಟ್ರೀಯ ಹೂ ಸರ್. ಅದಕ್ಕೆ ಹಾಕಿದ್ದೇವೆ. ಅದರ ಜೊತೆಗೆ ಎಲ್ಲ ರಾಷ್ಟ್ರೀಯ ಚಿಹ್ನೆಗಳಿವೆ’ ಎಂದು ಶಿಕ್ಷಕಿ ಸಮಜಾಯಿಷಿ ನೀಡಲು ಮುಂದಾದರು. ಇದರಿಂದ ಮತ್ತಷ್ಟು ಕೆರಳಿದ ಶಾಸಕ ಶಿವಲಿಂಗೇಗೌಡ, 'ಏಯ್ ಏನ್ ಗೊತ್ತು ನಿಮಗೆ? ಇನ್ನೇನ ಉದ್ಧಾರ ಮಾಡ್ತೀರ ಮಕ್ಕಳನ್ನ’ ಎಂದು ಏಕವಚನದಲ್ಲಿ ನಿಂದಿಸಿದರು.
ಇದರಿಂದ ಶಿಕ್ಷಕಿ ಸಹ, 'ಈ ರೀತಿ ಮಾತಾಡೋದು ಸರಿ ಹೋಗಲ್ಲ ಸರ್’ ಎಂದು ಹೇಳಿದರು. ’ನನಗೆ ಎದುರು ಮಾತಾಡ್ತಿಯಾ ನಿನಗೆ ನೋಟಿಸ್ ನೀಡಬೇಕಾಗುತ್ತೆ’ ಎಂದು ಶಿವಲಿಂಗೇಗೌಡ ಎಚ್ಚರಿಕೆ ನೀಡಿದರು. ಶಾಸಕ ಹಾಗೂ ಶಿಕ್ಷಕಿ ಮಧ್ಯೆ ಮಾತಿಗೆ ಮಾತು ಬೆಳೆಯುತ್ತಿದ್ದಂತೆಯೇ, ಸ್ಥಳೀಯ ಮುಖಂಡರ ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.