ಇದಕ್ಕೂ ಮುನ್ನ ಹೊಳೆನರಸೀಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅವರನ್ನು ಭೇಟಿ ಮಾಡಿ, ‘ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ಎ.ಮಂಜು ಅವರನ್ನ ಮತ್ತೆ ಕಾಂಗ್ರೆಸ್ ಸೇರಿಸಿಕೊಂಡು, ಮುಂದಿನ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಿಂದ ಟಿಕೆಟ್ ನೀಡುವಂತೆ’ ಒತ್ತಾಯಿಸಿದರು.
‘ಈ ವಿಚಾರವನ್ನು ಕೆಪಿಸಿಸಿ ಅಧ್ಯಕ್ಷ, ಶಾಸಕಾಂಗ ಪಕ್ಷದ ನಾಯಕರ ಗಮನಕ್ಕೆ ತರಲಾಗುವುದು. ಕಾಂಗ್ರೆಸ್ ಸರ್ಕಾರದಲ್ಲಿ ಉತ್ತಮ ಕೆಲಸ ಮಾಡಿದ್ದರು. ಕೋಮುವಾದಿ ಪಕ್ಷಕ್ಕೆ ಅವರು ಹೋಗಿದ್ದು ತಪ್ಪು. ಜಿಲ್ಲಾ ಮುಖಂಡರು ಹಾಗೂ ಮಂಜು ಜತೆಯೂ ಚರ್ಚಿಸಲಾಗುವುದು’ ಎಂದು ತಿಳಿಸಿದರು.