ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ₹ 3 ಲಕ್ಷ ರೂಪಾಯಿ ಅಂದಾಜು ವೆಚ್ಚದಲ್ಲಿ ಒಟ್ಟು 1,238 ಮೀಟರ್ ಉದ್ದ, ಒಂದು ಮೀಟರ್ ಆಳ ನಾಲ್ಕು ಅಡಿ ಅಗಲದ ಕಾಲುವೆ ನಿರ್ಮಾಣ ಕಾಮಗಾರಿಯನ್ನು ಗ್ರಾ.ಪಂ. ಕೈಗೆತ್ತಿಕೊಂಡಿದೆ . ಈ ಒಂದು ಕಾಲುವೆಯಿಂದ ಹತ್ತಾರು ಎಕರೆ ಭತ್ತ ಬೆಳೆಯುವ ಗದ್ದೆಗಳಿಗೆ ನೀರು ಹರಿಸುವುದಕ್ಕೆ ಸಾಧ್ಯವಾಗಲಿದೆ. ಕಳೆದ ಎರಡು ದಶಕಗಳಿಂದ ಗ್ರಾಮಸ್ಥರು ಈ ಒಂದು ಕಾಲುವೆ ನಿರ್ಮಾಣ ಕಾಮಗಾರಿ ಮಾಡುವಂತೆ ಕೃಷಿ ಇಲಾಖೆ, ನೀರಾವರಿ ಇಲಾಖೆ, ಜಿಲ್ಲಾ ಪಂಚಾಯಿತಿ, ಶಾಸಕರು ಎಲ್ಲರಿಗೂ ಮೇಲಿಂದ ಮೇಲೆ ಮನವಿ ಸಲ್ಲಿಸುತ್ತಲೇ ಬಂದಿದ್ದರೂ ಯಾರಿಂದಲೂ ಈ ಕೆಲಸ ಆಗಿರಲಿಲ್ಲ. ಗ್ರಾಮ ಪಂಚಾಯಿತಿಯಿಂದಲೇ ಈ ಕಾಮಗಾರಿ ಕೈಗೆತ್ತಿ ಕೊಳ್ಳಲಾಗಿದೆ ಎಂದು ಗ್ರಾಮದ ಗೋಪಾಲ್ ಹೇಳುತ್ತಾರೆ.