<p><strong>ಹಾಸನ: </strong>ತಾಲ್ಲೂಕಿನ ಕೊಕ್ಕನಘಟ್ಟ ಕೆರೆ ನೀರು ಕಲುಷಿತಗೊಂಡು ಸೋಮವಾರ ನೂರಾರು ಮೀನುಗಳು ಮೃತಪಟ್ಟಿವೆ.</p>.<p>ಕೊಕ್ಕನಘಟ್ಟ ಗ್ರಾಮದ ಸಮೀಪದಲ್ಲಿರುವ ಹಿಮತ್ ಸಿಂಗ್ ಕಾ ಲೆನಿಲ್ ಕಾರ್ಖಾನೆಯಿಂದ ಕಲುಷಿತ ನೀರು ಕೆರೆಯನ್ನು ಸೇರುತ್ತಿದ್ದು, ಪರಿಣಾಮ ನೂರಾರು ಮೀನುಗಳು ಸಾವಿಗೀಡಾಗುತ್ತಿವೆ. ಹಿಂದೆಯೂ ಕೆರೆಗೆ ಕಲುಷಿತ ನೀರು ಬಿಡಲಾಗಿತ್ತು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>‘ಕೆರೆ ನೀರು ಕಪ್ಪು ಬಣ್ಣಕ್ಕೆ ತಿರುಗುತ್ತಿದೆ. ಎಚ್ಚೆತ್ತುಕೊಳ್ಳದಿದ್ದರೆ ಮತ್ತಷ್ಟು ಮೀನುಗಳು ಸಾವಿಗೀಡಾಬೇಕಾಗುತ್ತವೆ.<br />ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ ಕಲುಷಿತ ನೀರು ಬಿಡದಂತೆ ಹಿಮತ್ಸಿಂಗ್ ಕಾ ಕಂಪನಿಗೆ ಎಚ್ಚರಿಕೆ ನೀಡಬೇಕು’ಎಂದು ಕೊಕ್ಕನಘಟ್ಟ ಗ್ರಾಮಸ್ಥರಾದ ಮಹೇಶ್, ಚಂದ್ರೇಗೌಡ, ಸತೀಶ್ಗೌಡ, ಲೊಕೇಶ್ಗೌಡ, ನಾಗೇಶ್, ಕೆ.ಎಂ. ಲೋಕೇಶ್, ಉಮೇಶ್, ಗೌಡೇಶ್, ಮಂಜುನಾಥ್, ಚಂದ್ರು ಆಗ್ರಹಿಸಿದರು.</p>.<p>‘ಕೆರೆಯಲ್ಲಿ ಮೀನುಗಳು ಮೃತಪಟ್ಟಿರುವ ಬಗ್ಗೆ ಮಾಹಿತಿ ಇಲ್ಲ. ಅಧಿಕಾರಿಗಳಿಂದ ಮಾಹಿತಿ ಪಡೆದು, ಕಲುಷಿತ ನೀರು ಕೆರೆ ಸೇರದಂತೆ ಕ್ರಮ ಕೈಗೊಳ್ಳಲಾಗುವುದು’ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ತಾಲ್ಲೂಕಿನ ಕೊಕ್ಕನಘಟ್ಟ ಕೆರೆ ನೀರು ಕಲುಷಿತಗೊಂಡು ಸೋಮವಾರ ನೂರಾರು ಮೀನುಗಳು ಮೃತಪಟ್ಟಿವೆ.</p>.<p>ಕೊಕ್ಕನಘಟ್ಟ ಗ್ರಾಮದ ಸಮೀಪದಲ್ಲಿರುವ ಹಿಮತ್ ಸಿಂಗ್ ಕಾ ಲೆನಿಲ್ ಕಾರ್ಖಾನೆಯಿಂದ ಕಲುಷಿತ ನೀರು ಕೆರೆಯನ್ನು ಸೇರುತ್ತಿದ್ದು, ಪರಿಣಾಮ ನೂರಾರು ಮೀನುಗಳು ಸಾವಿಗೀಡಾಗುತ್ತಿವೆ. ಹಿಂದೆಯೂ ಕೆರೆಗೆ ಕಲುಷಿತ ನೀರು ಬಿಡಲಾಗಿತ್ತು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>‘ಕೆರೆ ನೀರು ಕಪ್ಪು ಬಣ್ಣಕ್ಕೆ ತಿರುಗುತ್ತಿದೆ. ಎಚ್ಚೆತ್ತುಕೊಳ್ಳದಿದ್ದರೆ ಮತ್ತಷ್ಟು ಮೀನುಗಳು ಸಾವಿಗೀಡಾಬೇಕಾಗುತ್ತವೆ.<br />ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ ಕಲುಷಿತ ನೀರು ಬಿಡದಂತೆ ಹಿಮತ್ಸಿಂಗ್ ಕಾ ಕಂಪನಿಗೆ ಎಚ್ಚರಿಕೆ ನೀಡಬೇಕು’ಎಂದು ಕೊಕ್ಕನಘಟ್ಟ ಗ್ರಾಮಸ್ಥರಾದ ಮಹೇಶ್, ಚಂದ್ರೇಗೌಡ, ಸತೀಶ್ಗೌಡ, ಲೊಕೇಶ್ಗೌಡ, ನಾಗೇಶ್, ಕೆ.ಎಂ. ಲೋಕೇಶ್, ಉಮೇಶ್, ಗೌಡೇಶ್, ಮಂಜುನಾಥ್, ಚಂದ್ರು ಆಗ್ರಹಿಸಿದರು.</p>.<p>‘ಕೆರೆಯಲ್ಲಿ ಮೀನುಗಳು ಮೃತಪಟ್ಟಿರುವ ಬಗ್ಗೆ ಮಾಹಿತಿ ಇಲ್ಲ. ಅಧಿಕಾರಿಗಳಿಂದ ಮಾಹಿತಿ ಪಡೆದು, ಕಲುಷಿತ ನೀರು ಕೆರೆ ಸೇರದಂತೆ ಕ್ರಮ ಕೈಗೊಳ್ಳಲಾಗುವುದು’ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>