<p><strong>ಹಾಸನ: </strong>ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಕಾಂಗ್ರೆಸ್<br />ಮುಖಂಡ ಬಾಗೂರು ಮಂಜೇಗೌಡ ಹೇಳಿದರು.</p>.<p>ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಒಂಬತ್ತು ವರ್ಷ ಆರ್ಟಿಒ ಅಧಿಕಾರಿಯಾಗಿದ್ದ ನಾನು<br />ಕ್ಷೇತ್ರದ ಜನರ ನಾಡಿ ಮಿಡಿತ ಅರಿತಿದ್ದೇನೆ. ಮೂಲ ಸಮಸ್ಯೆಗಳೇನು ಎಂಬುದರ ಬಗ್ಗೆ ಮಾಹಿತಿ ಇದೆ. 2018ರಲ್ಲಿಯೂ ಈ ಕ್ಷೇತ್ರದಿಂದಲೇ ಟಿಕೆಟ್ ಕೇಳಿದ್ದೆ. ಆದರೆ ಹೈಕಮಾಂಡ್ ಹೊಳೆನರಸೀಪುರದಿಂದ ಸ್ಪರ್ಧಿಸಲು ಸೂಚಿಸಿತ್ತು’ ಎಂದರು.</p>.<p>‘ಈ ಬಾರಿ ಹಾಸನ ಕ್ಷೇತ್ರವೇ ಆದ್ಯತೆ ಆಗಿದ್ದು, ಈಗಿನಿಂದಲೇ ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ನಗರದಲ್ಲೇ ಮನೆ ಹಾಗೂ ಕಚೇರಿ ಮಾಡಿಕೊಂಡಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೂ ಮನದಾಸೆ ಹೇಳಿದ್ದೇನೆ. ಹಿರಿಯ ನಾಯಕ ಸಿದ್ದರಾಮಯ್ಯ ಅವರಿಗೂ ಮನವರಿಕೆ ಮಾಡಿದ್ದೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಕಾಂಗ್ರೆಸ್<br />ಮುಖಂಡ ಬಾಗೂರು ಮಂಜೇಗೌಡ ಹೇಳಿದರು.</p>.<p>ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಒಂಬತ್ತು ವರ್ಷ ಆರ್ಟಿಒ ಅಧಿಕಾರಿಯಾಗಿದ್ದ ನಾನು<br />ಕ್ಷೇತ್ರದ ಜನರ ನಾಡಿ ಮಿಡಿತ ಅರಿತಿದ್ದೇನೆ. ಮೂಲ ಸಮಸ್ಯೆಗಳೇನು ಎಂಬುದರ ಬಗ್ಗೆ ಮಾಹಿತಿ ಇದೆ. 2018ರಲ್ಲಿಯೂ ಈ ಕ್ಷೇತ್ರದಿಂದಲೇ ಟಿಕೆಟ್ ಕೇಳಿದ್ದೆ. ಆದರೆ ಹೈಕಮಾಂಡ್ ಹೊಳೆನರಸೀಪುರದಿಂದ ಸ್ಪರ್ಧಿಸಲು ಸೂಚಿಸಿತ್ತು’ ಎಂದರು.</p>.<p>‘ಈ ಬಾರಿ ಹಾಸನ ಕ್ಷೇತ್ರವೇ ಆದ್ಯತೆ ಆಗಿದ್ದು, ಈಗಿನಿಂದಲೇ ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ನಗರದಲ್ಲೇ ಮನೆ ಹಾಗೂ ಕಚೇರಿ ಮಾಡಿಕೊಂಡಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೂ ಮನದಾಸೆ ಹೇಳಿದ್ದೇನೆ. ಹಿರಿಯ ನಾಯಕ ಸಿದ್ದರಾಮಯ್ಯ ಅವರಿಗೂ ಮನವರಿಕೆ ಮಾಡಿದ್ದೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>