ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಅರಿವಿದ್ದು, ಆ ಸಮಸ್ಯೆಗಳಿಗೆಧ್ವನಿಯಾಗುವ ನಿಟ್ಟಿನಲ್ಲಿ ಸ್ಪರ್ಧೆಗೆ ಇಳಿದಿದ್ದೇನೆ. ಈಗಾಗಲೇ ಅರಸೀಕೆರೆ, ಚನ್ನರಾಯಪಟ್ಟಣ, ಹಾಸನ ತಾಲ್ಲೂಕುಗಳ ವಿವಿಧ ಪದವಿ ಕಾಲೇಜುಗಳಿಗೆ ಭೇಟಿ ನೀಡಿದ್ದು, ಉತ್ತಮ ಬೆಂಬಲ ವ್ಯಕ್ತವಾಗಿದೆ ಎಂದುಹೇಳಿದರು.