<p><strong>ಹಾಸನ: </strong>ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕಚೇರಿ ಎದುರುನಡೆಸುತ್ತಿರುವ ಧರಣಿ ಮಂಗಳವಾರ ಎರಡನೇ ದಿನಕ್ಕೆ ಕಾಲಿರಿಸಿದೆ.</p>.<p>ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಕಡ್ಡಾಯ ಮಾಡಬೇಕು. ಐಸಿಡಿಎಸ್ ಕೆಲಸ ಹೊರತು ಪಡಿಸಿ ಉಳಿದ ಕೆಲಸ ನಿರ್ಬಂಧಿಸಬೇಕು. ಕನಿಷ್ಠ ವೇತನ ಜಾರಿ ಮಾಡಬೇಕು. ಅಂಗನವಾಡಿನೌಕರರನ್ನು ಕಾಯಂ ಮಾಡುವ ತನಕ ಕಾರ್ಯಕರ್ತೆಯರಿಗೆ ₹30 ಸಾವಿರ ಮತ್ತು ಸಹಾಯಕರಿಗೆ₹21 ಸಾವಿರ ವೇತನ ನೀಡಬೇಕು ಎಂದು ಆಗ್ರಹಿಸಿದರು.</p>.<p>ಮಿನಿ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರನ್ನು ನೀಡಬೇಕು. ಮುಂಬಡ್ತಿ, ವರ್ಗಾವಣೆ, ಪೌಷ್ಟಿಕ ಆಹಾರ ಸರಬರಾಜು ಮಾಡುವ ಎಂಎಸ್ಪಿಟಿಸಿ ಗಳಲ್ಲಿ ರಾಜಕೀಯ ಮಧ್ಯ ಪ್ರವೇಶ ತಡೆಯಬೇಕು. ಖಾಲಿಯಿರುವ ಸಹಾಯಕಿಯರು, ಕಾರ್ಯಕರ್ತೆಯರ ಹುದ್ದೆ ಭರ್ತಿ ಮಾಡಬೇಕು. ಬಜೆಟ್ನಲ್ಲಿಕಡಿತವಾಗಿರುವ ₹8452.38 ಕೋಟಿ ಹಣ ವಾಪಸ್ ನೀಡಬೇಕು. ಐಸಿಡಿಎಸ್ ಯೋಜನೆಗೆಅನುದಾನ ಹೆಚ್ಚಿಸಿ ಮಕ್ಕಳು ಮತ್ತು ಮಹಿಳೆಯರನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.</p>.<p>ಸೇವಾ ಜೇಷ್ಠತೆಯ ಆಧಾರದಲ್ಲಿ ವೇತನ ನಿಗದಿ ಮಾಡಿ, ಸಹಾಯಕಿಯರು ಮತ್ತುಕಾರ್ಯಕರ್ತೆಯರ ವೇತನದ ಅಂತರ ಕಡಿಮೆ ಮಾಡಬೇಕು. ಮೊಟ್ಟೆಗಳನ್ನು ಕುಕ್ಕುಟೋದ್ಯಮ ಮಹಾ ಮಂಡಳಿಯಿಂದಲೇ ಸರಬರಾಜು ಮಾಡಿ ಮುಂಗಡವಾಗಿ ಹಣ ನೀಡಬೇಕು. ಕೋಳಿ ಮೊಟ್ಟೆ ಖರೀದಿಯಲ್ಲಿ ಆಗಿರುವ ಭ್ರಷ್ಟಾಚಾರದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.</p>.<p>ಧರಣಿಯಲ್ಲಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷೆ ಇಂದ್ರಮ್ಮ, ಜೆ.ಪಿ.ಶೈಲಜಾ, ಜಯಂತಿ, ಅರವಿಂದ್ ಇದ್ದರು.</p>.<p>ಕೆ.ಆರ್.ಪುರಂನಲ್ಲಿರುವ ಉಪ ನಿರ್ದೇಶಕರ ಕಚೇರಿ ರಸ್ತೆಯುದ್ದಕ್ಕೂ ಧರಣಿ ಕುಳಿತಿದ್ದ ನೂರಾರುಅಂಗನವಾಡಿ ಕಾರ್ಯಕರ್ತೆಯರು ಕೋವಿಡ್ ನಿಯಂತ್ರಣ ನಿಯಮಗಳನ್ನು ಗಾಳಿಗೆ ತೂರಿದ್ದರು. ಮಾಸ್ಕ್ಧರಿಸದೆ, ಅಂತರವನ್ನೂ ಪಾಲಿಸದೆ ಧರಣಿ ಕುಳಿತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕಚೇರಿ ಎದುರುನಡೆಸುತ್ತಿರುವ ಧರಣಿ ಮಂಗಳವಾರ ಎರಡನೇ ದಿನಕ್ಕೆ ಕಾಲಿರಿಸಿದೆ.</p>.<p>ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಕಡ್ಡಾಯ ಮಾಡಬೇಕು. ಐಸಿಡಿಎಸ್ ಕೆಲಸ ಹೊರತು ಪಡಿಸಿ ಉಳಿದ ಕೆಲಸ ನಿರ್ಬಂಧಿಸಬೇಕು. ಕನಿಷ್ಠ ವೇತನ ಜಾರಿ ಮಾಡಬೇಕು. ಅಂಗನವಾಡಿನೌಕರರನ್ನು ಕಾಯಂ ಮಾಡುವ ತನಕ ಕಾರ್ಯಕರ್ತೆಯರಿಗೆ ₹30 ಸಾವಿರ ಮತ್ತು ಸಹಾಯಕರಿಗೆ₹21 ಸಾವಿರ ವೇತನ ನೀಡಬೇಕು ಎಂದು ಆಗ್ರಹಿಸಿದರು.</p>.<p>ಮಿನಿ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರನ್ನು ನೀಡಬೇಕು. ಮುಂಬಡ್ತಿ, ವರ್ಗಾವಣೆ, ಪೌಷ್ಟಿಕ ಆಹಾರ ಸರಬರಾಜು ಮಾಡುವ ಎಂಎಸ್ಪಿಟಿಸಿ ಗಳಲ್ಲಿ ರಾಜಕೀಯ ಮಧ್ಯ ಪ್ರವೇಶ ತಡೆಯಬೇಕು. ಖಾಲಿಯಿರುವ ಸಹಾಯಕಿಯರು, ಕಾರ್ಯಕರ್ತೆಯರ ಹುದ್ದೆ ಭರ್ತಿ ಮಾಡಬೇಕು. ಬಜೆಟ್ನಲ್ಲಿಕಡಿತವಾಗಿರುವ ₹8452.38 ಕೋಟಿ ಹಣ ವಾಪಸ್ ನೀಡಬೇಕು. ಐಸಿಡಿಎಸ್ ಯೋಜನೆಗೆಅನುದಾನ ಹೆಚ್ಚಿಸಿ ಮಕ್ಕಳು ಮತ್ತು ಮಹಿಳೆಯರನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.</p>.<p>ಸೇವಾ ಜೇಷ್ಠತೆಯ ಆಧಾರದಲ್ಲಿ ವೇತನ ನಿಗದಿ ಮಾಡಿ, ಸಹಾಯಕಿಯರು ಮತ್ತುಕಾರ್ಯಕರ್ತೆಯರ ವೇತನದ ಅಂತರ ಕಡಿಮೆ ಮಾಡಬೇಕು. ಮೊಟ್ಟೆಗಳನ್ನು ಕುಕ್ಕುಟೋದ್ಯಮ ಮಹಾ ಮಂಡಳಿಯಿಂದಲೇ ಸರಬರಾಜು ಮಾಡಿ ಮುಂಗಡವಾಗಿ ಹಣ ನೀಡಬೇಕು. ಕೋಳಿ ಮೊಟ್ಟೆ ಖರೀದಿಯಲ್ಲಿ ಆಗಿರುವ ಭ್ರಷ್ಟಾಚಾರದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.</p>.<p>ಧರಣಿಯಲ್ಲಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷೆ ಇಂದ್ರಮ್ಮ, ಜೆ.ಪಿ.ಶೈಲಜಾ, ಜಯಂತಿ, ಅರವಿಂದ್ ಇದ್ದರು.</p>.<p>ಕೆ.ಆರ್.ಪುರಂನಲ್ಲಿರುವ ಉಪ ನಿರ್ದೇಶಕರ ಕಚೇರಿ ರಸ್ತೆಯುದ್ದಕ್ಕೂ ಧರಣಿ ಕುಳಿತಿದ್ದ ನೂರಾರುಅಂಗನವಾಡಿ ಕಾರ್ಯಕರ್ತೆಯರು ಕೋವಿಡ್ ನಿಯಂತ್ರಣ ನಿಯಮಗಳನ್ನು ಗಾಳಿಗೆ ತೂರಿದ್ದರು. ಮಾಸ್ಕ್ಧರಿಸದೆ, ಅಂತರವನ್ನೂ ಪಾಲಿಸದೆ ಧರಣಿ ಕುಳಿತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>