<p>ಹಾಸನ: ಜಿಲ್ಲೆಯಲ್ಲಿ ಹೊಸದಾಗಿ ಬುಧವಾರ 226 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ ಐದು ಸಾವಿರ (5224) ದಾಟಿದೆ. 7 ಜನರ ಸಾವಿನೊಂದಿಗೆ ಮೃತರ ಸಂಖ್ಯೆ 150ಕ್ಕೆ ಏರಿಕೆಯಾಗಿದೆ.<br />ಚೇತರಿಸಿಕೊಂಡ 148 ಜನರು ಆಸ್ಪತ್ರೆಯಿಂದ ಮನೆಗೆ ಮರಳಿದ್ದು, ಈವರೆಗೆ 3318 ಜನರು ಬಿಡುಗಡೆಯಾಗಿದ್ದಾರೆ. 1756 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 60 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಹೊಸದಾಗಿ ಅರಸೀಕೆರೆ 45, ಚನ್ನರಾಯಪಟ್ಟಣ 14, ಆಲೂರು 4, ಹಾಸನ 80, ಹೊಳೆನರಸೀಪುರ 25, ಅರಕಲಗೂಡು 31, ಬೇಲೂರು 20, ಸಕಲೇಶಪುರ ತಾಲ್ಲೂಕಿನ 7 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಆಸ್ಪತ್ರೆಗೆ ಕರೆತರುವ ಮುನ್ನವೇ 14 ಜನರು ಕೋವಿಡ್ನಿಂದ ಮೃತಪಟ್ಟಿದ್ದಾರೆ. ಆದ್ದರಿಂದ ಸಾರ್ವಜನಿಕರು ಕೆಮ್ಮು, ಜ್ವರ, ನೆಗಡಿ ಅಂತಹ ಲಕ್ಷಣಗಳಿದ್ದರೆ ಹತ್ತಿರದ ಆಸ್ಪತ್ರೆಗೆ ತೆರಳಿ ಪರೀಕ್ಷೆಗೆ ಒಳಪಡಬೇಕು’ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಹೇಳಿದರು.</p>.<p>ಆಸ್ಪತ್ರೆಗೆ ತಡವಾಗಿ ಬರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಆದ್ದರಿಂದ ಚಿಕಿತ್ಸಗೆ ಸ್ಪಂದಿಸದೆ ಮೃತಪಡುತ್ತಿದ್ದಾರೆ. ಯಾವುದೇ ರೋಗ ಲಕ್ಷಣ ಇಲ್ಲದಿದ್ದರೂ ದೇಹದಲ್ಲಿ ಆಮ್ಲಜನಕ ಪ್ರಮಾಣ ಕಡಿಮೆ ಆಗುವುದು ಗೊತ್ತಾಗುವುದಿಲ್ಲ. ಆಕ್ಸಿಜನ್ ಪ್ರಮಾಣ ಶೇಕಡಾ 95ಕ್ಕಿಂತ ಕಡಿಮೆ ಇರಬಾರದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ಜಿಲ್ಲೆಯಲ್ಲಿ ಹೊಸದಾಗಿ ಬುಧವಾರ 226 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ ಐದು ಸಾವಿರ (5224) ದಾಟಿದೆ. 7 ಜನರ ಸಾವಿನೊಂದಿಗೆ ಮೃತರ ಸಂಖ್ಯೆ 150ಕ್ಕೆ ಏರಿಕೆಯಾಗಿದೆ.<br />ಚೇತರಿಸಿಕೊಂಡ 148 ಜನರು ಆಸ್ಪತ್ರೆಯಿಂದ ಮನೆಗೆ ಮರಳಿದ್ದು, ಈವರೆಗೆ 3318 ಜನರು ಬಿಡುಗಡೆಯಾಗಿದ್ದಾರೆ. 1756 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 60 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಹೊಸದಾಗಿ ಅರಸೀಕೆರೆ 45, ಚನ್ನರಾಯಪಟ್ಟಣ 14, ಆಲೂರು 4, ಹಾಸನ 80, ಹೊಳೆನರಸೀಪುರ 25, ಅರಕಲಗೂಡು 31, ಬೇಲೂರು 20, ಸಕಲೇಶಪುರ ತಾಲ್ಲೂಕಿನ 7 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಆಸ್ಪತ್ರೆಗೆ ಕರೆತರುವ ಮುನ್ನವೇ 14 ಜನರು ಕೋವಿಡ್ನಿಂದ ಮೃತಪಟ್ಟಿದ್ದಾರೆ. ಆದ್ದರಿಂದ ಸಾರ್ವಜನಿಕರು ಕೆಮ್ಮು, ಜ್ವರ, ನೆಗಡಿ ಅಂತಹ ಲಕ್ಷಣಗಳಿದ್ದರೆ ಹತ್ತಿರದ ಆಸ್ಪತ್ರೆಗೆ ತೆರಳಿ ಪರೀಕ್ಷೆಗೆ ಒಳಪಡಬೇಕು’ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಹೇಳಿದರು.</p>.<p>ಆಸ್ಪತ್ರೆಗೆ ತಡವಾಗಿ ಬರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಆದ್ದರಿಂದ ಚಿಕಿತ್ಸಗೆ ಸ್ಪಂದಿಸದೆ ಮೃತಪಡುತ್ತಿದ್ದಾರೆ. ಯಾವುದೇ ರೋಗ ಲಕ್ಷಣ ಇಲ್ಲದಿದ್ದರೂ ದೇಹದಲ್ಲಿ ಆಮ್ಲಜನಕ ಪ್ರಮಾಣ ಕಡಿಮೆ ಆಗುವುದು ಗೊತ್ತಾಗುವುದಿಲ್ಲ. ಆಕ್ಸಿಜನ್ ಪ್ರಮಾಣ ಶೇಕಡಾ 95ಕ್ಕಿಂತ ಕಡಿಮೆ ಇರಬಾರದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>