ಹಳೇಬೀಡು ಸಂಪರ್ಕ ರಸ್ತೆಗಳು ಅಭಿವೃದ್ದಿಯಾಗುತ್ತಿದೆ. ಸರ್ಕಾರಿ ವಸತಿ ಶಾಲೆಗಳಿಗೆ ಸಂಪರ್ಕ ಕಲ್ಪಿಸುವ ಕುಂಟಮ್ಮ ಸೇತುವೆಯಿಂದ ದ್ವಾರಸಮುದ್ರ ಕೆರೆ ಕೋಡಿಗೆ ತಲುಪುವ ರಸ್ತೆಯ ಡಾಂಬರೀಕರಣ ಕಾಮಗಾರಿ ನಡೆಯುತ್ತಿದೆ. ಹಳೇಬೀಡಿನಿಂದ ಹಗರೆ ಸಂಪರ್ಕ ಕಲ್ಪಿಸುವ ರಸ್ತೆ ಕೆಲಸ ಪೂರ್ಣಗೊಂಡಿದೆ ಎಂದು ಅವರು ತಿಳಿಸಿದರು.
ನರೇಗಾ ಯೋಜನೆ ಅಡಿಯಲ್ಲಿ ವಾರ್ಡ್ ಸಭೆಯಲ್ಲಿ ನಿರ್ಣಯ ಕೈಗೊಂಡ ಕಾಮಗಾರಿಗಳಿಗೆ ಅನುಮೊದನೆ ನೀಡಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ನಿತ್ಯಾನಂದ ಅಧ್ಯಕ್ಷತೆವಹಿಸಿದ್ದರು. ಉಪಾಧ್ಯಕ್ಷೆ ಕವಿತ ರಮೇಶ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಸತೀಶ್. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಸಿ.ವಿರೂಪಾಕ್ಷ, ಕಾರ್ಯದರ್ಶಿ ಶೈಲಜ.ಬಿ.ಎನ್ ಗ್ರಾಮ ಪಂಚಾಯಿತಿ ಸದಸ್ಯರಾದ ಮಲ್ಲೇಶಪ್ಪ, ಚಂದ್ರಶೇಖರ್, ನಿಂಗಪ್ಪ, ಸಿ.ಆರ್.ಲಿಂಗಪ್ಪ, ಕಾಮತಮಣಿ, ಶಿವಕುಮಾರ್, ರಮೇಶ್, ಸುರೇಶ್. ಮಧು, ಲಕ್ಷ್ಮಿ. ಮೋಹನ್, ವಾಣಿ ಭಾಗವಹಿಸಿದ್ದರು.