<p><strong>ಹಾಸನ</strong>: ಕೋವಿಡ್-19 ಸೋಂಕಿನ ಪ್ರಮಾಣ ಹೆಚ್ಚುತ್ತಿರುವುದರಿಂದ ಆಮ್ಲಜನಕ ಪೂರೈಕೆಯುಕ್ತ ಹಾಸಿಗೆಗಳ ಪ್ರಮಾಣ ಹೆಚ್ಚಿಸುವುದು ಅನಿವಾರ್ಯವಾಗಿದ್ದು, ಈ ಬಗ್ಗೆ ತುರ್ತಾಗಿ ಕ್ರಮ ವಹಿಸುವಂತೆ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರುಹಿಮ್ಸ್ ಹಾಗೂ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕೋವಿಡ್-19 ನಿಯಂತ್ರಣ ಕ್ರಮದ ಕುರಿತು ಅಧಿಕಾರಿಗಳೊಂದಿಗೆತುರ್ತು ಸಭೆ ನಡೆಸಿದ ಅವರು, ಹಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ಹಾಲಿ ಇರುವ 400 ಬೆಡ್ಗಳ ಜೊತೆಗೆ ಇನ್ನೂಕನಿಷ್ಠ 150 ಹಾಸಿಗೆಗಳನ್ನು ಹೆಚ್ಚಿಸುವಂತೆ ಮತ್ತು ಅವುಗಳಿಗೂ ಆಮ್ಲಜನಕ ಪೂರೈಕೆಯಾಗುವಂತೆ ನೋಡಿಕೊಳ್ಳಬೇಕುಎಂದು ನಿರ್ದೇಶನ ನೀಡಿದರು.</p>.<p>ತಾಲ್ಲೂಕುಗಳಲ್ಲಿಯೂ ಚಿಕಿತ್ಸಾ ಸೌಲಭ್ಯ ಹೆಚ್ಚಿಸುವ ಅಗತ್ಯವಿದೆ. ಆಮ್ಲಜನಕ ಪೂರೈಕೆಯ ಪೈಪ್ಲೈನ್ ಅಳವಡಿಕೆಯಾಗಿದ್ದು,ಉತ್ತಮ ಸೌಲಭ್ಯಗಳಿರುವ ಶಾಂತಿಗ್ರಾಮ, ಮೊಸಳೆ ಹೊಸಳ್ಳಿ, ಅರೇಹಳ್ಳಿ, ಉದಯಪುರ, ಜೆ.ಸಿ.ಪುರ ಆಸ್ಪತ್ರೆಗಳನ್ನು ತಕ್ಷಣಕೋವಿಡ್ ಚಿಕಿತ್ಸೆಗೆ ಸಿದ್ಧಪಡಿಸಿ, ಅದಕ್ಕೆ ಹೆಚ್ಚುವರಿ ಮಂಚ ಹಾಗೂ ಇತರೆ ಸೌಲಭ್ಯಗಳನ್ನು ಸರ್ಕಾರದ ವತಿಯಿಂದಒದಗಿಸಲಾಗುವುದು ಎಂದರು.</p>.<p>ಖಾಸಗಿ ಆಸ್ಪತ್ರೆಗಳು ಮುಂದಿನ ದಿನಗಳಲ್ಲಿ ಶೇಕಡಾ 80ರಷ್ಟು ಹಾಸಿಗೆಗಳನ್ನು ಸೋಂಕಿತರ ಚಿಕಿತ್ಸೆಗಾಗಿ ಸರ್ಕಾರಕ್ಕೆಒದಗಿಸಬೇಕು. ಸದ್ಯಕ್ಕೆ ಶೇಕಡಾ 50ರಷ್ಟು ಹಾಸಿಗೆ ಕಾಯ್ದಿರಿಸಿ, ಹಿಮ್ಸ್ನಲ್ಲಿ ಭರ್ತಿಯಾಗುತ್ತಿದ್ದಂತೆ ಸರ್ಕಾರದ ವತಿಯಿಂದಚಿಕಿತ್ಸೆಗೆಗಾಗಿ ಸೋಂಕಿತರನ್ನು ಖಾಸಗಿ ಆಸ್ಪತ್ರೆಗೆ ವರ್ಗಾಯಿಸುವಂತೆ ಸೂಚನೆ ನೀಡಿದರು.</p>.<p>ಆಮ್ಲಜನಕ ಪೂರೈಕೆ ಇರುವ ಬೆಡ್ಗಳ ಸಂಖ್ಯೆ ಹೆಚ್ಚಿಸಿದಷ್ಟು ಸೋಂಕಿತರನ್ನು ಉಳಿಸಿಕೊಳ್ಳುವ ಅವಶ್ಯಕತೆಅಧಿಕವಾಗುತ್ತಿದೆ. ಅಲ್ಲದೇ ತುರ್ತು ಅನಿವಾರ್ಯತೆಗಳಿಲ್ಲದ ಸೋಂಕಿತರನ್ನು ಆಸ್ಪತ್ರೆಗಳಲ್ಲಿ ಒಳರೋಗಿಗಳಾಗಿದಾಖಲಿಸಿಕೊಳ್ಳದೆ, ಇತರೆ ರೂಪದಲ್ಲಿ ಚಿಕಿತ್ಸೆ ಒದಗಿಸಬೇಕು ಎಂದು ಹೇಳಿದರು.</p>.<p>ಹಾಲಿ ಕೋವಿಡ್ ಆರೈಕೆ ಕೇಂದ್ರವಾಗಿರುವ ನಗರದ ಆಯುಷ್ ಆಸ್ಪತ್ರೆಗೆ ಆಮ್ಲಜನಕ ಪೈಪ್ಲೈನ್ ಮಾಡಿ, ಕೋವಿಡ್ಚಿಕಿತ್ಸೆಗೆ ಬಳಸಿಕೊಳ್ಳಲು ಪ್ರಯತ್ನಿಸಬೇಕು ಎಂದರು.</p>.<p>ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಜಿಲ್ಲೆಯಲ್ಲಿನ ಈವರೆಗಿನ ಕೋವಿಡ್ ಸ್ಥಿತಿಗತಿ, ಹಾಲಿ ಇರುವ ಬೆಡ್ ಸೌಲಭ್ಯ, ಔಷಧಲಭ್ಯತೆ, ಮುಂದಿನ ಸಾಧ್ಯತೆ ಹಾಗೂ ಆದ್ಯತೆ ಬಗ್ಗೆ ವಿವರಿಸಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್, ಹಿಮ್ಸ್ ನಿರ್ದೇಶಕ ಡಾ. ಬಿ.ಸಿ.ರವಿಕುಮಾರ್, ಜಿಲ್ಲಾಶಸ್ತ್ರಚಿಕಿತ್ಸಕ ಡಾ. ಕೃಷ್ಣಮೂರ್ತಿ ಅವರು ಕೋವಿಡ್ ಚಿಕಿತ್ಸಾ ವ್ಯವಸ್ಥೆ ನಿರ್ವಹಣೆ ಬಗ್ಗೆ ಬೇಕಿರುವ ಸೌಲಭ್ಯಗಳ ಬಗ್ಗೆಸಚಿವರಿಗೆ ಮನವರಿಕೆ ಮಾಡಿಕೊಟ್ಟರು.</p>.<p>ಬೆಡ್ಗಳ ಸಂಖ್ಯೆ ಹೆಚ್ಚಿಸಿದಂತೆ ವೈದ್ಯರು, ಶುಶ್ರೂಷಕರು, ಸಹಾಯಕರ ಅಗತ್ಯ ಬೀಳುತ್ತದೆ. ಅಲ್ಲದೇ ಆಮ್ಲಜನಕ ಪೂರೈಕೆಗೆಇನ್ನೊಂದು 13000 ಕೆ.ಎಂ ಟ್ಯಾಂಕ್ ಅಳವಡಿಕೆ ಅನಿವಾರ್ಯವಾಗಿದೆ. ಹೊಸ ಪೈಪ್ ಲೈನ್ ಅಳವಡಿಕೆಗಾಗಿಯೂ ಅನುದಾನಅವಶ್ಯಕವಾಗಿದೆ ಎಂದರು.</p>.<p>ರೆಮ್ಡಿಸಿವರ್ ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟವಾಗದಂತೆ ನಿಗಾವಹಿಸಬೇಕು. ದೈನಂದಿನ ಕರ್ಫ್ಯೂ ಹಾಗೂ ವಾರಂತ್ಯದ ಕರ್ಫ್ಯೂ ಅನುಷ್ಠಾನ ಸಮರ್ಪಕವಾಗಿ ಮಾಡಬೇಕು. ಜನರು ಇದಕ್ಕೆ ಸಹಕರಿಸಬೇಕು ಎಂದು ಸಚಿವರು ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ.ಪರಮೇಶ್, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ವಿವರಿಸಿ, ಸದ್ಯಕ್ಕೆ ತುರ್ತಾಗಿ ಪ್ರತಿ ತಾಲ್ಲೂಕಿಗೆ ₹25 ಲಕ್ಷ ಕುಡಿವ ನೀರು ಪೂರೈಕೆಗೆ ಯೋಜನೆ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೆಚ್ಚುವರಿ ಅನುದಾನ ಬೇಕಾಗುತ್ತದೆ, ಅದಕ್ಕೆ ಯೋಜನೆ ರೂಪಿಸಿ ಬೇಡಿಕೆ ಸಲ್ಲಿಸಲಾಗುತ್ತಿದೆ ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಕೋವಿಡ್-19 ಸೋಂಕಿನ ಪ್ರಮಾಣ ಹೆಚ್ಚುತ್ತಿರುವುದರಿಂದ ಆಮ್ಲಜನಕ ಪೂರೈಕೆಯುಕ್ತ ಹಾಸಿಗೆಗಳ ಪ್ರಮಾಣ ಹೆಚ್ಚಿಸುವುದು ಅನಿವಾರ್ಯವಾಗಿದ್ದು, ಈ ಬಗ್ಗೆ ತುರ್ತಾಗಿ ಕ್ರಮ ವಹಿಸುವಂತೆ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರುಹಿಮ್ಸ್ ಹಾಗೂ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕೋವಿಡ್-19 ನಿಯಂತ್ರಣ ಕ್ರಮದ ಕುರಿತು ಅಧಿಕಾರಿಗಳೊಂದಿಗೆತುರ್ತು ಸಭೆ ನಡೆಸಿದ ಅವರು, ಹಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ಹಾಲಿ ಇರುವ 400 ಬೆಡ್ಗಳ ಜೊತೆಗೆ ಇನ್ನೂಕನಿಷ್ಠ 150 ಹಾಸಿಗೆಗಳನ್ನು ಹೆಚ್ಚಿಸುವಂತೆ ಮತ್ತು ಅವುಗಳಿಗೂ ಆಮ್ಲಜನಕ ಪೂರೈಕೆಯಾಗುವಂತೆ ನೋಡಿಕೊಳ್ಳಬೇಕುಎಂದು ನಿರ್ದೇಶನ ನೀಡಿದರು.</p>.<p>ತಾಲ್ಲೂಕುಗಳಲ್ಲಿಯೂ ಚಿಕಿತ್ಸಾ ಸೌಲಭ್ಯ ಹೆಚ್ಚಿಸುವ ಅಗತ್ಯವಿದೆ. ಆಮ್ಲಜನಕ ಪೂರೈಕೆಯ ಪೈಪ್ಲೈನ್ ಅಳವಡಿಕೆಯಾಗಿದ್ದು,ಉತ್ತಮ ಸೌಲಭ್ಯಗಳಿರುವ ಶಾಂತಿಗ್ರಾಮ, ಮೊಸಳೆ ಹೊಸಳ್ಳಿ, ಅರೇಹಳ್ಳಿ, ಉದಯಪುರ, ಜೆ.ಸಿ.ಪುರ ಆಸ್ಪತ್ರೆಗಳನ್ನು ತಕ್ಷಣಕೋವಿಡ್ ಚಿಕಿತ್ಸೆಗೆ ಸಿದ್ಧಪಡಿಸಿ, ಅದಕ್ಕೆ ಹೆಚ್ಚುವರಿ ಮಂಚ ಹಾಗೂ ಇತರೆ ಸೌಲಭ್ಯಗಳನ್ನು ಸರ್ಕಾರದ ವತಿಯಿಂದಒದಗಿಸಲಾಗುವುದು ಎಂದರು.</p>.<p>ಖಾಸಗಿ ಆಸ್ಪತ್ರೆಗಳು ಮುಂದಿನ ದಿನಗಳಲ್ಲಿ ಶೇಕಡಾ 80ರಷ್ಟು ಹಾಸಿಗೆಗಳನ್ನು ಸೋಂಕಿತರ ಚಿಕಿತ್ಸೆಗಾಗಿ ಸರ್ಕಾರಕ್ಕೆಒದಗಿಸಬೇಕು. ಸದ್ಯಕ್ಕೆ ಶೇಕಡಾ 50ರಷ್ಟು ಹಾಸಿಗೆ ಕಾಯ್ದಿರಿಸಿ, ಹಿಮ್ಸ್ನಲ್ಲಿ ಭರ್ತಿಯಾಗುತ್ತಿದ್ದಂತೆ ಸರ್ಕಾರದ ವತಿಯಿಂದಚಿಕಿತ್ಸೆಗೆಗಾಗಿ ಸೋಂಕಿತರನ್ನು ಖಾಸಗಿ ಆಸ್ಪತ್ರೆಗೆ ವರ್ಗಾಯಿಸುವಂತೆ ಸೂಚನೆ ನೀಡಿದರು.</p>.<p>ಆಮ್ಲಜನಕ ಪೂರೈಕೆ ಇರುವ ಬೆಡ್ಗಳ ಸಂಖ್ಯೆ ಹೆಚ್ಚಿಸಿದಷ್ಟು ಸೋಂಕಿತರನ್ನು ಉಳಿಸಿಕೊಳ್ಳುವ ಅವಶ್ಯಕತೆಅಧಿಕವಾಗುತ್ತಿದೆ. ಅಲ್ಲದೇ ತುರ್ತು ಅನಿವಾರ್ಯತೆಗಳಿಲ್ಲದ ಸೋಂಕಿತರನ್ನು ಆಸ್ಪತ್ರೆಗಳಲ್ಲಿ ಒಳರೋಗಿಗಳಾಗಿದಾಖಲಿಸಿಕೊಳ್ಳದೆ, ಇತರೆ ರೂಪದಲ್ಲಿ ಚಿಕಿತ್ಸೆ ಒದಗಿಸಬೇಕು ಎಂದು ಹೇಳಿದರು.</p>.<p>ಹಾಲಿ ಕೋವಿಡ್ ಆರೈಕೆ ಕೇಂದ್ರವಾಗಿರುವ ನಗರದ ಆಯುಷ್ ಆಸ್ಪತ್ರೆಗೆ ಆಮ್ಲಜನಕ ಪೈಪ್ಲೈನ್ ಮಾಡಿ, ಕೋವಿಡ್ಚಿಕಿತ್ಸೆಗೆ ಬಳಸಿಕೊಳ್ಳಲು ಪ್ರಯತ್ನಿಸಬೇಕು ಎಂದರು.</p>.<p>ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಜಿಲ್ಲೆಯಲ್ಲಿನ ಈವರೆಗಿನ ಕೋವಿಡ್ ಸ್ಥಿತಿಗತಿ, ಹಾಲಿ ಇರುವ ಬೆಡ್ ಸೌಲಭ್ಯ, ಔಷಧಲಭ್ಯತೆ, ಮುಂದಿನ ಸಾಧ್ಯತೆ ಹಾಗೂ ಆದ್ಯತೆ ಬಗ್ಗೆ ವಿವರಿಸಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್, ಹಿಮ್ಸ್ ನಿರ್ದೇಶಕ ಡಾ. ಬಿ.ಸಿ.ರವಿಕುಮಾರ್, ಜಿಲ್ಲಾಶಸ್ತ್ರಚಿಕಿತ್ಸಕ ಡಾ. ಕೃಷ್ಣಮೂರ್ತಿ ಅವರು ಕೋವಿಡ್ ಚಿಕಿತ್ಸಾ ವ್ಯವಸ್ಥೆ ನಿರ್ವಹಣೆ ಬಗ್ಗೆ ಬೇಕಿರುವ ಸೌಲಭ್ಯಗಳ ಬಗ್ಗೆಸಚಿವರಿಗೆ ಮನವರಿಕೆ ಮಾಡಿಕೊಟ್ಟರು.</p>.<p>ಬೆಡ್ಗಳ ಸಂಖ್ಯೆ ಹೆಚ್ಚಿಸಿದಂತೆ ವೈದ್ಯರು, ಶುಶ್ರೂಷಕರು, ಸಹಾಯಕರ ಅಗತ್ಯ ಬೀಳುತ್ತದೆ. ಅಲ್ಲದೇ ಆಮ್ಲಜನಕ ಪೂರೈಕೆಗೆಇನ್ನೊಂದು 13000 ಕೆ.ಎಂ ಟ್ಯಾಂಕ್ ಅಳವಡಿಕೆ ಅನಿವಾರ್ಯವಾಗಿದೆ. ಹೊಸ ಪೈಪ್ ಲೈನ್ ಅಳವಡಿಕೆಗಾಗಿಯೂ ಅನುದಾನಅವಶ್ಯಕವಾಗಿದೆ ಎಂದರು.</p>.<p>ರೆಮ್ಡಿಸಿವರ್ ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟವಾಗದಂತೆ ನಿಗಾವಹಿಸಬೇಕು. ದೈನಂದಿನ ಕರ್ಫ್ಯೂ ಹಾಗೂ ವಾರಂತ್ಯದ ಕರ್ಫ್ಯೂ ಅನುಷ್ಠಾನ ಸಮರ್ಪಕವಾಗಿ ಮಾಡಬೇಕು. ಜನರು ಇದಕ್ಕೆ ಸಹಕರಿಸಬೇಕು ಎಂದು ಸಚಿವರು ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ.ಪರಮೇಶ್, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ವಿವರಿಸಿ, ಸದ್ಯಕ್ಕೆ ತುರ್ತಾಗಿ ಪ್ರತಿ ತಾಲ್ಲೂಕಿಗೆ ₹25 ಲಕ್ಷ ಕುಡಿವ ನೀರು ಪೂರೈಕೆಗೆ ಯೋಜನೆ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೆಚ್ಚುವರಿ ಅನುದಾನ ಬೇಕಾಗುತ್ತದೆ, ಅದಕ್ಕೆ ಯೋಜನೆ ರೂಪಿಸಿ ಬೇಡಿಕೆ ಸಲ್ಲಿಸಲಾಗುತ್ತಿದೆ ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>