<p><strong>ಹಾಸನ:</strong> ಕೋವಿಡ್ ಪೀಡಿತರಲ್ಲಿ ಒಂದೇ ದಿನದಲ್ಲಿ ಚೇತರಿಕೆ ಹೊಂದಿದರ ಸಂಖ್ಯೆ ಸಾವಿರ ದಾಟಿದೆ. ಇದರಿಂದಾಗಿ ಹದಿನಾರು ಸಾವಿರ ದಾಟಿದ ಸಕ್ರಿಯ ಪ್ರಕರಣಗಳ ಸಂಖ್ಯೆ 13,822ಕ್ಕೆ ಇಳಿದಿದೆ.</p>.<p>ಕೋವಿಡ್ ಪೀಡಿತರಿಗೆ ಆಸ್ಪತ್ರೆ ಚಿಕಿತ್ಸೆ ಅವಧಿಯನ್ನು ಕಡಿಮ ಮಾಡುತ್ತಿರುವ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಅಲ್ಪಾವಧಿಯಲ್ಲೇ ಆಸ್ಪತ್ರೆಯಿಂದ ಮನೆಗೆ ಮರಳುತ್ತಿದ್ದಾರೆ. ಇದುವರೆಗೆ 53,275 ಮಂದಿಗೆ ಕಾಯಿಲೆ ವಾಸಿಯಾಗಿದೆ.</p>.<p>ಜಿಲ್ಲೆಯಲ್ಲಿ ಬುಧವಾರ 1375 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ 18 ಮಂದಿ ಮೃತಪಟ್ಟಿದ್ದಾರೆ. 2081 ಸೋಂಕಿತರ ಆರೋಗ್ಯದಲ್ಲಿ ಚೇತರಿಕೆಯಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 67964ಕ್ಕೆ ಏರಿಕೆಯಾಗಿದೆ. ಕಾಯಿಲೆಯಿಂದ ಈವರೆಗೆ ಮೃತಪಟ್ಟವರ ಸಂಖ್ಯೆ 867. 13,822 ಸಕ್ರಿಯ ಪ್ರಕರಣಗಳ ಪೈಕಿ 134 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.<br /><br />ಹೊಸದಾಗಿ ಆಲೂರು ತಾಲ್ಲೂಕಿನ 63, ಅರಕಲಗೂಡು 137, ಅರಸೀಕೆರೆ 169, ಬೇಲೂರು 155,<br />ಚನ್ನರಾಯಪಟ್ಟಣ 144, ಹಾಸನ 483, ಹೊಳೆನರಸೀಪುರ 148, ಸಕಲೇಶಪುರ 74 ಹಾಗೂ ಇತರೆ ಜಿಲ್ಲೆಯ ಇಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಹಾಸನ ತಾಲ್ಲೂಕಿನ 8, ಹೊಳೆನರಸೀಪುರ, ಅರಸೀಕೆರೆ, ಚನ್ನರಾಯಪಟ್ಟಣ ತಾಲ್ಲೂಕಿನ ಮೂವರು, ಬೇಲೂರಿನ ಒಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಕೋವಿಡ್ ಪೀಡಿತರಲ್ಲಿ ಒಂದೇ ದಿನದಲ್ಲಿ ಚೇತರಿಕೆ ಹೊಂದಿದರ ಸಂಖ್ಯೆ ಸಾವಿರ ದಾಟಿದೆ. ಇದರಿಂದಾಗಿ ಹದಿನಾರು ಸಾವಿರ ದಾಟಿದ ಸಕ್ರಿಯ ಪ್ರಕರಣಗಳ ಸಂಖ್ಯೆ 13,822ಕ್ಕೆ ಇಳಿದಿದೆ.</p>.<p>ಕೋವಿಡ್ ಪೀಡಿತರಿಗೆ ಆಸ್ಪತ್ರೆ ಚಿಕಿತ್ಸೆ ಅವಧಿಯನ್ನು ಕಡಿಮ ಮಾಡುತ್ತಿರುವ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಅಲ್ಪಾವಧಿಯಲ್ಲೇ ಆಸ್ಪತ್ರೆಯಿಂದ ಮನೆಗೆ ಮರಳುತ್ತಿದ್ದಾರೆ. ಇದುವರೆಗೆ 53,275 ಮಂದಿಗೆ ಕಾಯಿಲೆ ವಾಸಿಯಾಗಿದೆ.</p>.<p>ಜಿಲ್ಲೆಯಲ್ಲಿ ಬುಧವಾರ 1375 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ 18 ಮಂದಿ ಮೃತಪಟ್ಟಿದ್ದಾರೆ. 2081 ಸೋಂಕಿತರ ಆರೋಗ್ಯದಲ್ಲಿ ಚೇತರಿಕೆಯಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 67964ಕ್ಕೆ ಏರಿಕೆಯಾಗಿದೆ. ಕಾಯಿಲೆಯಿಂದ ಈವರೆಗೆ ಮೃತಪಟ್ಟವರ ಸಂಖ್ಯೆ 867. 13,822 ಸಕ್ರಿಯ ಪ್ರಕರಣಗಳ ಪೈಕಿ 134 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.<br /><br />ಹೊಸದಾಗಿ ಆಲೂರು ತಾಲ್ಲೂಕಿನ 63, ಅರಕಲಗೂಡು 137, ಅರಸೀಕೆರೆ 169, ಬೇಲೂರು 155,<br />ಚನ್ನರಾಯಪಟ್ಟಣ 144, ಹಾಸನ 483, ಹೊಳೆನರಸೀಪುರ 148, ಸಕಲೇಶಪುರ 74 ಹಾಗೂ ಇತರೆ ಜಿಲ್ಲೆಯ ಇಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಹಾಸನ ತಾಲ್ಲೂಕಿನ 8, ಹೊಳೆನರಸೀಪುರ, ಅರಸೀಕೆರೆ, ಚನ್ನರಾಯಪಟ್ಟಣ ತಾಲ್ಲೂಕಿನ ಮೂವರು, ಬೇಲೂರಿನ ಒಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>