<p><strong>ಹಾಸನ:</strong> ಜಿಲ್ಲೆಯಲ್ಲಿ ಹೊಸದಾಗಿ ಗುರುವಾರ 159 ಕೋವಿಡ್-19 ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3031ಕ್ಕೆ ಏರಿಕೆಯಾಗಿದೆ. ನಾಲ್ಕು ಜನರು ಅಸುನೀಗಿದ್ದು, ಈ ವರೆಗೆ 79 ರೋಗಿಗಳು ಸಾವಿಗೀಡಾಗಿದ್ದಾರೆ.</p>.<p>ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಅರಸೀಕೆರೆ ತಾಲ್ಲೂಕಿನ 70 ವರ್ಷದ ಮಹಿಳೆ, ಹೊಳೆನರಸೀಪುರ ತಾಲ್ಲೂಕಿನ 80 ವರ್ಷದ ವೃದ್ಧೆ, ಹಾಸನ ತಾಲ್ಲೂಕಿನ 60 ವರ್ಷದ ಪುರುಷ ಹಾಗೂ 55 ವರ್ಷದ ವ್ಯಕ್ತಿ ಹಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಾಲ್ವರಿಗೂ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆಗೆ ಸ್ಪಂದಿಸಲಿಲ್ಲ. ನಿಯಮದ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.</p>.<p>ಹೊಸದಾಗಿ ಅರಸೀಕೆರೆ 10, ಚನ್ನರಾಯಪಟ್ಟಣ 11, ಆಲೂರು 2, ಹಾಸನ 103, ಹೊಳೆನರಸೀಪುರ 13, ಅರಕಲಗೂಡು 11 ಹಾಗೂ ಸಕಲೇಶಪುರ ತಾಲ್ಲೂಕಿನ 9 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದರು.</p>.<p>ತೆಲಂಗಾಣ, ಬೆಂಗಳೂರು ಪ್ರಯಾಣ ಹಿನ್ನೆಲೆ, ಶೀತ, ಜ್ವರ ಮಾದರಿ ಅನಾರೋಗ್ಯ, ಉಸಿರಾಟದ ತೊಂದರೆ ಹಾಗೂ ಪ್ರಾಥಮಿಕ ಸಂಪರ್ಕ ಹೊಂದಿದ ಬಹುತೇಕ ಜನರಿಗೆ ಸೋಂಕು ತಗುಲಿದೆ. ಚೇತರಿಸಿಕೊಂಡ 34 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ 1224 ಮಂದಿ ಗುಣಮುಖರಾಗಿದ್ದಾರೆ. 1728 ಸಕ್ರಿಯ ಪ್ರಕರಣಗಳಿವೆ. 40 ಜನರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಜಿಲ್ಲೆಯಲ್ಲಿ ಹೊಸದಾಗಿ ಗುರುವಾರ 159 ಕೋವಿಡ್-19 ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3031ಕ್ಕೆ ಏರಿಕೆಯಾಗಿದೆ. ನಾಲ್ಕು ಜನರು ಅಸುನೀಗಿದ್ದು, ಈ ವರೆಗೆ 79 ರೋಗಿಗಳು ಸಾವಿಗೀಡಾಗಿದ್ದಾರೆ.</p>.<p>ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಅರಸೀಕೆರೆ ತಾಲ್ಲೂಕಿನ 70 ವರ್ಷದ ಮಹಿಳೆ, ಹೊಳೆನರಸೀಪುರ ತಾಲ್ಲೂಕಿನ 80 ವರ್ಷದ ವೃದ್ಧೆ, ಹಾಸನ ತಾಲ್ಲೂಕಿನ 60 ವರ್ಷದ ಪುರುಷ ಹಾಗೂ 55 ವರ್ಷದ ವ್ಯಕ್ತಿ ಹಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಾಲ್ವರಿಗೂ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆಗೆ ಸ್ಪಂದಿಸಲಿಲ್ಲ. ನಿಯಮದ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.</p>.<p>ಹೊಸದಾಗಿ ಅರಸೀಕೆರೆ 10, ಚನ್ನರಾಯಪಟ್ಟಣ 11, ಆಲೂರು 2, ಹಾಸನ 103, ಹೊಳೆನರಸೀಪುರ 13, ಅರಕಲಗೂಡು 11 ಹಾಗೂ ಸಕಲೇಶಪುರ ತಾಲ್ಲೂಕಿನ 9 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದರು.</p>.<p>ತೆಲಂಗಾಣ, ಬೆಂಗಳೂರು ಪ್ರಯಾಣ ಹಿನ್ನೆಲೆ, ಶೀತ, ಜ್ವರ ಮಾದರಿ ಅನಾರೋಗ್ಯ, ಉಸಿರಾಟದ ತೊಂದರೆ ಹಾಗೂ ಪ್ರಾಥಮಿಕ ಸಂಪರ್ಕ ಹೊಂದಿದ ಬಹುತೇಕ ಜನರಿಗೆ ಸೋಂಕು ತಗುಲಿದೆ. ಚೇತರಿಸಿಕೊಂಡ 34 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ 1224 ಮಂದಿ ಗುಣಮುಖರಾಗಿದ್ದಾರೆ. 1728 ಸಕ್ರಿಯ ಪ್ರಕರಣಗಳಿವೆ. 40 ಜನರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>