<p><strong>ಹಾಸನ: </strong>ಜಿಲ್ಲೆಯಲ್ಲಿ ಸೋಮವಾರ 131 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಐದು ಮಂದಿ ಮೃತಪಟ್ಟಿದ್ದಾರೆ.<br />ಒಟ್ಟು ಸೋಂಕಿತರ ಸಂಖ್ಯೆ 2548ಕ್ಕೇರಿದೆ. ಈವರೆಗೆ 70 ಜನರು ಅಸುನೀಗಿದ್ದಾರೆ.<br /><br />ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಹಾಸನ ತಾಲ್ಲೂಕಿನ 70 ವರ್ಷದ ಪುರುಷ, ಅರಕಲಗೂಡು ತಾಲ್ಲೂಕಿನ 58<br />ವರ್ಷದ ವ್ಯಕ್ತಿ, ಅರಸೀಕೆರೆ ತಾಲ್ಲೂಕಿನ 65 ವರ್ಷದ ಮಹಿಳೆ, ಬೇಲೂರು ತಾಲ್ಲೂಕಿನ 75 ವರ್ಷ ವೃದ್ಧ ಹಾಗೂ<br />ಚನ್ನರಾಯಪಟ್ಟಣ ತಾಲ್ಲೂಕಿನ 50 ವರ್ಷದ ವ್ಯಕ್ತಿ ಹಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ<br />ಸ್ಪಂದಿಸದೆ ಮೃತಪಟ್ಟಿದ್ದಾರೆ. ಸರ್ಕಾರದ ನಿಯಮ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.</p>.<p>ಕೆಎಸ್ಆರ್ಟಿಸಿ ನೌಕರ, ಆರೋಗ್ಯ ಇಲಾಖೆ ಸಿಬ್ಬಂದಿ, ಸೋಂಕಿತರ ಜತೆ ಪ್ರಾಥಮಿಕ ಸಂಪರ್ಕ, ಶೀತ ಜ್ವರ ಮಾದರಿ ಅನಾರೋಗ್ಯ, ಉಸಿರಾಟದ ತೊಂದರೆ ಹಾಗೂ ಅನ್ಯ ಜಿಲ್ಲೆಗಳ ಪ್ರಯಾಣ ಇತಿಹಾಸ ಹೊಂದಿರುವವರಿಗೆ ಸೋಂಕು ತಗುಲಿದೆ. ಕೆಲ ಪ್ರಕರಣಗಳಲ್ಲಿ ಸೋಂಕಿನ ಮೂಲ ಪತ್ತೆಯಾಗಿಲ್ಲ.</p>.<p>ಹೊಸದಾಗಿ ಹಾಸನ 70, ಅರಸೀಕೆರೆ 10, ಚನ್ನರಾಯಪಟ್ಟಣ 9, ಅರಕಲಗೂಡು 20, ಹೊಳೆನರಸೀಪುರ 15, ಸಕಲೇಶಪುರ 1, ಬೇಲೂರು 5 ಮತ್ತು ಇತರ ಜಿಲ್ಲೆಯ ಒಬ್ಬರಿಗೆ ಸೋಂಕು ದೃಢಪಟ್ಟಿದೆ.</p>.<p>ಈವರೆಗೆ 1057 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. 1421 ಸಕ್ರಿಯ ಪ್ರಕರಣಗಳಿವೆ.<br />43 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಜ್ವರ, ಶೀತ, ಕೆಮ್ಮು, ಗಂಟಲು ನೋವು ಲಕ್ಷಣಗಳು ಇರುವವರು ಗಂಟಲು ದ್ರವ ತಪಾಸಣೆಗೆ ಒಳಪಟ್ಟು, ಕೋವಿಡ್ ತಡೆಗೆ ಸಹಕರಿಸಬೇಕು. ಸೋಂಕಿನ ಲಕ್ಷಣಗಳು ಇಲ್ಲದ ಕೋವಿಡ್ ಬಾಧಿತರನ್ನು ಹೋಂ ಐಸೋಲೇಷನ್ನಲ್ಲಿ ಇರಿಸಲಾಗುತ್ತಿದೆ. ಈಗಾಗಲೇ 398 ಹೋಂ ಐಸೋಲೇಷನ್ನಲ್ಲಿ ಇದ್ದಾರೆ. ಯಾರು ಭಯ ಪಡುವ ಅಗತ್ಯವಿಲ್ಲ. ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಜಿಲ್ಲೆಯಲ್ಲಿ ಸೋಮವಾರ 131 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಐದು ಮಂದಿ ಮೃತಪಟ್ಟಿದ್ದಾರೆ.<br />ಒಟ್ಟು ಸೋಂಕಿತರ ಸಂಖ್ಯೆ 2548ಕ್ಕೇರಿದೆ. ಈವರೆಗೆ 70 ಜನರು ಅಸುನೀಗಿದ್ದಾರೆ.<br /><br />ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಹಾಸನ ತಾಲ್ಲೂಕಿನ 70 ವರ್ಷದ ಪುರುಷ, ಅರಕಲಗೂಡು ತಾಲ್ಲೂಕಿನ 58<br />ವರ್ಷದ ವ್ಯಕ್ತಿ, ಅರಸೀಕೆರೆ ತಾಲ್ಲೂಕಿನ 65 ವರ್ಷದ ಮಹಿಳೆ, ಬೇಲೂರು ತಾಲ್ಲೂಕಿನ 75 ವರ್ಷ ವೃದ್ಧ ಹಾಗೂ<br />ಚನ್ನರಾಯಪಟ್ಟಣ ತಾಲ್ಲೂಕಿನ 50 ವರ್ಷದ ವ್ಯಕ್ತಿ ಹಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ<br />ಸ್ಪಂದಿಸದೆ ಮೃತಪಟ್ಟಿದ್ದಾರೆ. ಸರ್ಕಾರದ ನಿಯಮ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.</p>.<p>ಕೆಎಸ್ಆರ್ಟಿಸಿ ನೌಕರ, ಆರೋಗ್ಯ ಇಲಾಖೆ ಸಿಬ್ಬಂದಿ, ಸೋಂಕಿತರ ಜತೆ ಪ್ರಾಥಮಿಕ ಸಂಪರ್ಕ, ಶೀತ ಜ್ವರ ಮಾದರಿ ಅನಾರೋಗ್ಯ, ಉಸಿರಾಟದ ತೊಂದರೆ ಹಾಗೂ ಅನ್ಯ ಜಿಲ್ಲೆಗಳ ಪ್ರಯಾಣ ಇತಿಹಾಸ ಹೊಂದಿರುವವರಿಗೆ ಸೋಂಕು ತಗುಲಿದೆ. ಕೆಲ ಪ್ರಕರಣಗಳಲ್ಲಿ ಸೋಂಕಿನ ಮೂಲ ಪತ್ತೆಯಾಗಿಲ್ಲ.</p>.<p>ಹೊಸದಾಗಿ ಹಾಸನ 70, ಅರಸೀಕೆರೆ 10, ಚನ್ನರಾಯಪಟ್ಟಣ 9, ಅರಕಲಗೂಡು 20, ಹೊಳೆನರಸೀಪುರ 15, ಸಕಲೇಶಪುರ 1, ಬೇಲೂರು 5 ಮತ್ತು ಇತರ ಜಿಲ್ಲೆಯ ಒಬ್ಬರಿಗೆ ಸೋಂಕು ದೃಢಪಟ್ಟಿದೆ.</p>.<p>ಈವರೆಗೆ 1057 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. 1421 ಸಕ್ರಿಯ ಪ್ರಕರಣಗಳಿವೆ.<br />43 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಜ್ವರ, ಶೀತ, ಕೆಮ್ಮು, ಗಂಟಲು ನೋವು ಲಕ್ಷಣಗಳು ಇರುವವರು ಗಂಟಲು ದ್ರವ ತಪಾಸಣೆಗೆ ಒಳಪಟ್ಟು, ಕೋವಿಡ್ ತಡೆಗೆ ಸಹಕರಿಸಬೇಕು. ಸೋಂಕಿನ ಲಕ್ಷಣಗಳು ಇಲ್ಲದ ಕೋವಿಡ್ ಬಾಧಿತರನ್ನು ಹೋಂ ಐಸೋಲೇಷನ್ನಲ್ಲಿ ಇರಿಸಲಾಗುತ್ತಿದೆ. ಈಗಾಗಲೇ 398 ಹೋಂ ಐಸೋಲೇಷನ್ನಲ್ಲಿ ಇದ್ದಾರೆ. ಯಾರು ಭಯ ಪಡುವ ಅಗತ್ಯವಿಲ್ಲ. ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>