ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್. ನಂದಿನಿ ಮಾತನಾಡಿ, ಕೊರೊನಾ ಸೋಂಕಿನಿಂದಾಗಿ ಅನೇಕರ ಬದುಕು ಬೀದಿಗೆ ಬಂತು. ಅಂತಹ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತರು, ಸಂಘ ಸಂಸ್ಥೆಗಳು, ದಾನಿಗಳು ಮುಂದೆ ಬಂದು ಉಚಿತವಾಗಿ ಮಾಸ್ಕ್, ಸ್ಯಾನಿಟೈಸರ್, ಆಹಾರ ಧಾನ್ಯಗಳ ಕಿಟ್ ವಿತರಣೆ ಮಾಡಿ ಮಾನವೀಯತೆ ಮೆರೆದರು ಎಂದು ನುಡಿದರು.