<p><strong>ಹಾಸನ:</strong> ಕೋವಿಡ್ ಲಸಿಕಾ ಅಭಿಯಾನದಲ್ಲಿ ಜಿಲ್ಲೆಯಲ್ಲಿ ಗುರುತಿಸಿರುವ 18,659 ಫಲಾನುಭವಿಗಳ<br />ಪೈಕಿ ಈವರೆಗೂ 11,267 ಮಂದಿಗೆ ಲಸಿಕೆ ಹಾಕಿಸಿಕೊಂಡಿದ್ದಾರೆ.</p>.<p>ಶುಕ್ರವಾರದವರೆಗೂ ತಾಲ್ಲೂಕು ಆಸ್ಪತ್ರೆ, ಜಿಲ್ಲಾಸ್ಪತ್ರೆಯಲ್ಲಿ ಲಸಿಕೆ ನೀಡಲಾಗುತ್ತದೆ. ಎರಡನೇ ಹಂತದ<br />ಅಭಿಯಾನದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ<br />ಕಾರ್ಯನಿರ್ವಾಹಕ ಅಧಿಕಾರಿ ಭಾರತಿ, ಹಿಮ್ಸ್ ನಿರ್ದೇಶಕ ಡಾ.ರವಿಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಕೃಷ್ಣಮೂರ್ತಿ ಅವರು ಕೋವಿಡ್ ಲಸಿಕೆ ಪಡೆದರು.</p>.<p>‘ಕೋವಿಡ್ ಲಸಿಕೆ ಅಡ್ಡ ಪರಿಣಾಮ ಬೀರುವುದಿಲ್ಲ. ಇದರಿಂದ ಕೊರೊನಾ ನಿಯಂತ್ರಣ ಸಾಧ್ಯ. ಈ ಬಗ್ಗೆ<br />ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಲಸಿಕೆ ತೆಗೆದುಕೊಂಡ ಬಳಿಕ ಯಾವುದೇ ಸಮಸ್ಯೆ<br />ಆಗುವುದಿಲ್ಲ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್ ತಿಳಿಸಿದರು.</p>.<p>‘ಈವರೆಗೂ ಶೇಕಡಾ 60ರಷ್ಟು ಗುರಿ ಸಾಧಿಸಲಾಗಿದೆ. ಒಂದು ವೇಳೆ ನಿಗದಿತ ಗುರಿ ತಲುಪದಿದ್ದರೆ<br />ದಿನಾಂಕ ವಿಸ್ತರಿಸುವ ಸಾಧ್ಯತೆ ಇದೆ. ಇದಾದ ಬಳಿಕ 50 ವರ್ಷ ಮೇಲ್ಪಟ್ಟವರಿಗೆ (ಜ.1, 1971<br />ಜನನ) ಲಸಿಕೆ ನೀಡಲಾಗುತ್ತದೆ. ಹಾಗಾಗಿ ಅಂತಹವರ ಮಾಹಿತಿ ಕಲೆ ಹಾಕುವ ಕಾರ್ಯ ನಡೆದಿದೆ. ಈಗಾಗಲೇ ಅರಸೀಕೆರೆ,ಬೇಲೂರು ಸೇರಿ ನಾಲ್ಕು ತಾಲ್ಲೂಕುಗಳ ಮಾಹಿತಿ ಕಲೆ ಹಾಕಲಾಗಿದೆ’ ಎಂದು ಕೋವಿಡ್ ಲಸಿಕಾ<br />ನೋಡಲ್ ಅಧಿಕಾರಿ ಕಾಂತರಾಜ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಕೋವಿಡ್ ಲಸಿಕಾ ಅಭಿಯಾನದಲ್ಲಿ ಜಿಲ್ಲೆಯಲ್ಲಿ ಗುರುತಿಸಿರುವ 18,659 ಫಲಾನುಭವಿಗಳ<br />ಪೈಕಿ ಈವರೆಗೂ 11,267 ಮಂದಿಗೆ ಲಸಿಕೆ ಹಾಕಿಸಿಕೊಂಡಿದ್ದಾರೆ.</p>.<p>ಶುಕ್ರವಾರದವರೆಗೂ ತಾಲ್ಲೂಕು ಆಸ್ಪತ್ರೆ, ಜಿಲ್ಲಾಸ್ಪತ್ರೆಯಲ್ಲಿ ಲಸಿಕೆ ನೀಡಲಾಗುತ್ತದೆ. ಎರಡನೇ ಹಂತದ<br />ಅಭಿಯಾನದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ<br />ಕಾರ್ಯನಿರ್ವಾಹಕ ಅಧಿಕಾರಿ ಭಾರತಿ, ಹಿಮ್ಸ್ ನಿರ್ದೇಶಕ ಡಾ.ರವಿಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಕೃಷ್ಣಮೂರ್ತಿ ಅವರು ಕೋವಿಡ್ ಲಸಿಕೆ ಪಡೆದರು.</p>.<p>‘ಕೋವಿಡ್ ಲಸಿಕೆ ಅಡ್ಡ ಪರಿಣಾಮ ಬೀರುವುದಿಲ್ಲ. ಇದರಿಂದ ಕೊರೊನಾ ನಿಯಂತ್ರಣ ಸಾಧ್ಯ. ಈ ಬಗ್ಗೆ<br />ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಲಸಿಕೆ ತೆಗೆದುಕೊಂಡ ಬಳಿಕ ಯಾವುದೇ ಸಮಸ್ಯೆ<br />ಆಗುವುದಿಲ್ಲ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್ ತಿಳಿಸಿದರು.</p>.<p>‘ಈವರೆಗೂ ಶೇಕಡಾ 60ರಷ್ಟು ಗುರಿ ಸಾಧಿಸಲಾಗಿದೆ. ಒಂದು ವೇಳೆ ನಿಗದಿತ ಗುರಿ ತಲುಪದಿದ್ದರೆ<br />ದಿನಾಂಕ ವಿಸ್ತರಿಸುವ ಸಾಧ್ಯತೆ ಇದೆ. ಇದಾದ ಬಳಿಕ 50 ವರ್ಷ ಮೇಲ್ಪಟ್ಟವರಿಗೆ (ಜ.1, 1971<br />ಜನನ) ಲಸಿಕೆ ನೀಡಲಾಗುತ್ತದೆ. ಹಾಗಾಗಿ ಅಂತಹವರ ಮಾಹಿತಿ ಕಲೆ ಹಾಕುವ ಕಾರ್ಯ ನಡೆದಿದೆ. ಈಗಾಗಲೇ ಅರಸೀಕೆರೆ,ಬೇಲೂರು ಸೇರಿ ನಾಲ್ಕು ತಾಲ್ಲೂಕುಗಳ ಮಾಹಿತಿ ಕಲೆ ಹಾಕಲಾಗಿದೆ’ ಎಂದು ಕೋವಿಡ್ ಲಸಿಕಾ<br />ನೋಡಲ್ ಅಧಿಕಾರಿ ಕಾಂತರಾಜ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>