<p><strong>ಹಾಸನ: </strong>ಕೋವಿಡ್ ಹಿನ್ನೆಲೆಯಲ್ಲಿ ದೇವರ ಉತ್ಸವ ಮಾಡಲು ಹಿಂದೇಟು ಹಾಕಿದ ಅರ್ಚಕ ಮತ್ತು ಅವರ ತಾಯಿ ಮೇಲೆ ತಾಲ್ಲೂಕಿನ ಕಬ್ಬತ್ತಿ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ.</p>.<p>ಗ್ರಾಮದ ಅರ್ಚಕ ಶ್ರೀಕಾಂತ್ ಮತ್ತು ತಾಯಿ ಶಾಂತಮ್ಮ ಹಲ್ಲೆಗೆ ಒಳಗಾಗಿ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಗ್ರಾಮದ ಕುಟುಂಬವೊಂದರ ಮದುವೆ ಕಾರ್ಯಕ್ರಮ ನಿಗದಿಯಾಗಿತ್ತು. ಹಾಗಾಗಿ ರಂಗನಾಥಸ್ವಾಮಿ ದೇವರ ಮೆರವಣಿಗೆ ಮಾಡುವಂತೆ ಅರ್ಚಕ ಶ್ರೀಕಾಂತ್ ಅವರನ್ನು ಗ್ರಾಮದ ದೇವೇಗೌಡ, ಆನಂದ್, ನಾಗಣ್ಣ, ಶ್ರೀನಿವಾಸಚಾರ್ ಮತ್ತು ಮಹೀಂದ್ರ ಕೇಳಿಕೊಂಡಿದ್ದಾರೆ.</p>.<p>"ಲಾಕ್ಡೌನ್ನಿಂದಾಗಿ ದೇವಸ್ಥಾನ ಬಂದ್ ಮಾಡಿದ್ದು, ಇಂತಹ ಸಮಯದಲ್ಲಿ ದೇವರ ಉತ್ಸವ ಮಾಡಲು ಆಗುವುದಿಲ್ಲವೆಂದು' ಶ್ರೀಕಾಂತ್ ನಿರಾಕರಿಸಿದ್ದಾರೆ. ಈ ವಿಚಾರಕ್ಕೆ ಮಾತಿನ ಚಕಮಕಿಯೂ ನಡೆದಿದೆ.</p>.<p>ಬುಧವಾರ ಬೆಳಿಗ್ಗೆ ಶ್ರೀಕಾಂತ್ ಕುಟುಂಬ ಡೇರಿಗೆ ಹಾಲು ಹಾಕಲು ಹೋದಾಗ ಗ್ರಾಮದ ದೇವೇಗೌಡ, ಆನಂದ್, ನಾಗಣ್ಣ, ಶ್ರೀನಿವಾಸಚಾರ್ ಮತ್ತು ಮಹೀಂದ್ರ ಗಲಾಟೆ ಮಾಡಿದ್ದಾರೆ. ಉತ್ಸವ ಮಾಡದ ಕಾರಣ ಹಾಲನ್ನು ಪಡೆಯುವುದಿಲ್ಲವೆಂದು ಕ್ಯಾತೆ ತೆಗೆದಿದ್ದಾರೆ. ಈ ಗಲಾಟೆ ದೃಶ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಲು ಹೋದ ಶ್ರೀಕಾಂತ್ ಅವರ ಮೊಬೈಲ್ ಕಿತ್ತುಕೊಂಡು ಪುಡಿ ಮಾಡಿದ್ದಾರೆ. ಅವರ ತಾಯಿ ಮೇಲೂ ಹಲ್ಲೆ ನಡೆಸಿದ್ದಾರೆ.</p>.<p>‘ನಮ್ಮ ಕುಟುಂಬಕ್ಕೆ ಗ್ರಾಮದ ಯಾರೊಬ್ಬರು ಸಹಾಯ ಮಾಡದಂತೆ ಹಲ್ಲೆ ಮಾಡಿದ ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಅಲ್ಲದೇ ಮನೆಗೆ ಕುಡಿಯುವ ನೀರು ಬರದಂತೆ ಬಂದ್ ಮಾಡಿಸಿದ್ದಾರೆ. ಕೋವಿಡ್ ನಿಯಮ ಪಾಲಿಸಿದ್ಧೇವೆ. ಹಲ್ಲೆ ನಡೆಸಿದವರಿಗೆ ಶಿಕ್ಷೆಯಾಗಬೇಕು’ ಎಂದು ಶ್ರೀಕಾಂತ್ ಆಗ್ರಹಿಸಿದರು.</p>.<p>ಗೊರೊರು ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಕೋವಿಡ್ ಹಿನ್ನೆಲೆಯಲ್ಲಿ ದೇವರ ಉತ್ಸವ ಮಾಡಲು ಹಿಂದೇಟು ಹಾಕಿದ ಅರ್ಚಕ ಮತ್ತು ಅವರ ತಾಯಿ ಮೇಲೆ ತಾಲ್ಲೂಕಿನ ಕಬ್ಬತ್ತಿ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ.</p>.<p>ಗ್ರಾಮದ ಅರ್ಚಕ ಶ್ರೀಕಾಂತ್ ಮತ್ತು ತಾಯಿ ಶಾಂತಮ್ಮ ಹಲ್ಲೆಗೆ ಒಳಗಾಗಿ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಗ್ರಾಮದ ಕುಟುಂಬವೊಂದರ ಮದುವೆ ಕಾರ್ಯಕ್ರಮ ನಿಗದಿಯಾಗಿತ್ತು. ಹಾಗಾಗಿ ರಂಗನಾಥಸ್ವಾಮಿ ದೇವರ ಮೆರವಣಿಗೆ ಮಾಡುವಂತೆ ಅರ್ಚಕ ಶ್ರೀಕಾಂತ್ ಅವರನ್ನು ಗ್ರಾಮದ ದೇವೇಗೌಡ, ಆನಂದ್, ನಾಗಣ್ಣ, ಶ್ರೀನಿವಾಸಚಾರ್ ಮತ್ತು ಮಹೀಂದ್ರ ಕೇಳಿಕೊಂಡಿದ್ದಾರೆ.</p>.<p>"ಲಾಕ್ಡೌನ್ನಿಂದಾಗಿ ದೇವಸ್ಥಾನ ಬಂದ್ ಮಾಡಿದ್ದು, ಇಂತಹ ಸಮಯದಲ್ಲಿ ದೇವರ ಉತ್ಸವ ಮಾಡಲು ಆಗುವುದಿಲ್ಲವೆಂದು' ಶ್ರೀಕಾಂತ್ ನಿರಾಕರಿಸಿದ್ದಾರೆ. ಈ ವಿಚಾರಕ್ಕೆ ಮಾತಿನ ಚಕಮಕಿಯೂ ನಡೆದಿದೆ.</p>.<p>ಬುಧವಾರ ಬೆಳಿಗ್ಗೆ ಶ್ರೀಕಾಂತ್ ಕುಟುಂಬ ಡೇರಿಗೆ ಹಾಲು ಹಾಕಲು ಹೋದಾಗ ಗ್ರಾಮದ ದೇವೇಗೌಡ, ಆನಂದ್, ನಾಗಣ್ಣ, ಶ್ರೀನಿವಾಸಚಾರ್ ಮತ್ತು ಮಹೀಂದ್ರ ಗಲಾಟೆ ಮಾಡಿದ್ದಾರೆ. ಉತ್ಸವ ಮಾಡದ ಕಾರಣ ಹಾಲನ್ನು ಪಡೆಯುವುದಿಲ್ಲವೆಂದು ಕ್ಯಾತೆ ತೆಗೆದಿದ್ದಾರೆ. ಈ ಗಲಾಟೆ ದೃಶ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಲು ಹೋದ ಶ್ರೀಕಾಂತ್ ಅವರ ಮೊಬೈಲ್ ಕಿತ್ತುಕೊಂಡು ಪುಡಿ ಮಾಡಿದ್ದಾರೆ. ಅವರ ತಾಯಿ ಮೇಲೂ ಹಲ್ಲೆ ನಡೆಸಿದ್ದಾರೆ.</p>.<p>‘ನಮ್ಮ ಕುಟುಂಬಕ್ಕೆ ಗ್ರಾಮದ ಯಾರೊಬ್ಬರು ಸಹಾಯ ಮಾಡದಂತೆ ಹಲ್ಲೆ ಮಾಡಿದ ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಅಲ್ಲದೇ ಮನೆಗೆ ಕುಡಿಯುವ ನೀರು ಬರದಂತೆ ಬಂದ್ ಮಾಡಿಸಿದ್ದಾರೆ. ಕೋವಿಡ್ ನಿಯಮ ಪಾಲಿಸಿದ್ಧೇವೆ. ಹಲ್ಲೆ ನಡೆಸಿದವರಿಗೆ ಶಿಕ್ಷೆಯಾಗಬೇಕು’ ಎಂದು ಶ್ರೀಕಾಂತ್ ಆಗ್ರಹಿಸಿದರು.</p>.<p>ಗೊರೊರು ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>